ಮಂದಮತಿ ನಾನಯ್ಯ ಮಂಗಳಾಂಗಾ
ಒಂದಾದರೂ ಗತಿ ಧರ್ಮ ಚಿಂತಿಸಲಿಲ್ಲಾ
ಜಪತಪಗಳರಿಯೆ ಉಪವಾಸಗಳರಿಯೆ
ಕೃಪೆ ಮಾಡಲರಿಯೇ ಪರಿಜನಗಳಲ್ಲಿ
ಕುಪಿತವನು ಬಿಡಲರಿಯೆ ಅಪರಿಮಿತವಾಗಿದ್ದ
ಅಪರಾಧಗಳ ಮಾಡಿ ತಪಿಸುವೆನು ಭವದೊಳಗೆ ||1||
ಯಾತ್ರೆ ಮಾಡಲರಿಯೆ ತೀರ್ಥ ಮೀಯಲರಿಯೆ
ಗಾತ್ರದಂಡಣಿಯ ಮಾಡಲರಿಯೆ
ಸ್ತೋತ್ರ ಪಠಿಸಲರಿಯೆ ಗಾತ್ರ ಲಘು ನೋಡಿ ಸ
ತ್ಪಾತ್ರರನು ಭಜಿಸದೆ ವ್ಯರ್ಥ ಕಾಲವ ಕಳೆವ||2||
ಅನ್ನದಾನವರಿಯೆ ಮನ್ನಣೆ ಮಾಡಲರಿಯೆ
ಚನ್ನಾಗಿ ಬಂಧುಗಳು ಪೊರಿಯಲರಿಯೆ
ಎನ್ನ ಮನದೊಡಿಯ ಶ್ರೀ ವಿಜಯವಿಠ್ಠಲರೇಯಾ
ನಿನ್ನ ಭಕುತಿ ಒಮ್ಮೆ ಪಡಿಯಲರಿಯೆ ||3||