ಲಿಂಗಾಂಗಸಂಗಸಮರಸಸುಖದಲ್ಲಿ ಮನ ವೇದ್ಯವಾಯಿತ್ತು.

ಲಿಂಗಾಂಗಸಂಗಸಮರಸಸುಖದಲ್ಲಿ ಮನ ವೇದ್ಯವಾಯಿತ್ತು.
ನಿಮ್ಮ ಶರಣರ ಅನುಭಾವಸಂಗದಿಂದ
ಎನ್ನ ತನು ಮನ ಪ್ರಾಣ ಪದಾರ್ಥವ
ಗುರುಲಿಂಗಜಂಗಮಕ್ಕಿತ್ತು,
ಶುದ್ಧಸಿದ್ಧಪ್ರಸಿದ್ಧಪ್ರಸಾದಿಯಾದೆನು.
ಆ ಮಹಾಪ್ರಸಾದದ ರೂಪು ರುಚಿ ತೃಪ್ತಿಯ
ಇಷ್ಟ ಪ್ರಾಣ ಭಾವಲಿಂಗದಲ್ಲಿ ಸಾವಧಾನದಿಂದರ್ಪಿಸಿ
ಮಹಾಘನಪ್ರಸಾದಿಯಾದೆನು.
ಇಂತೀ ಸರ್ವಾಚಾರಸಂಪತ್ತು ಎನ್ನ ತನುಮನ ವೇದ್ಯವಾಯಿತ್ತು.
ಇನ್ನೆಲ್ಲಿಯಯ್ಯಾ, ಎನಗೆ ನಿಮ್ಮಲ್ಲಿ ನಿರವಯವು ?
ಇನ್ನೆಲ್ಲಿಯಯ್ಯಾ ನಿಮ್ಮಲ್ಲಿ ಕೂಡುವುದು ?
ಪರಮಸುಖದ ಪರಿಣಾಮ ಮನಮೇರೆದಪ್ಪಿ
ನಾನು ನಿಜವನೈದುವ ಠಾವ ಹೇಳಾ ಚೆನ್ನಮಲ್ಲಿಕಾರ್ಜುನ ಪ್ರಭುವೆ ?

Leave a Comment

Your email address will not be published. Required fields are marked *