ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ,
ವಿಷಯ ವಿಕಾರವೆನ್ನನಿರಿಸಿ ಹೋದವು ಕಾಣಾ ತಂದೆ.
ಅದೇ ಕಾರಣ ನೀವು ಅರಸಿಕೊಂಡು ಬಂದಿರಣ್ಣ.
ನೀವು ಅರಸುವ ಅರಕೆ – ಎನ್ನೊಳಗಾಯಿತ್ತು.
ಎನ್ನ ದೇವ ಚೆನ್ನಮಲ್ಲಿಕಾರ್ಜುನ
ತನ್ನೊಳಗೆನ್ನನಿಂಬಿಟ್ಟುಕೊಂಡನಾಗಿ ಇನ್ನು ನಿನ್ನ ತಂದೆ ತಾಯಿತನವನೊಲ್ಲೆ ನಾನು.
ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ,
ವಿಷಯ ವಿಕಾರವೆನ್ನನಿರಿಸಿ ಹೋದವು ಕಾಣಾ ತಂದೆ.
ಅದೇ ಕಾರಣ ನೀವು ಅರಸಿಕೊಂಡು ಬಂದಿರಣ್ಣ.
ನೀವು ಅರಸುವ ಅರಕೆ – ಎನ್ನೊಳಗಾಯಿತ್ತು.
ಎನ್ನ ದೇವ ಚೆನ್ನಮಲ್ಲಿಕಾರ್ಜುನ
ತನ್ನೊಳಗೆನ್ನನಿಂಬಿಟ್ಟುಕೊಂಡನಾಗಿ ಇನ್ನು ನಿನ್ನ ತಂದೆ ತಾಯಿತನವನೊಲ್ಲೆ ನಾನು.