ದಾಸನ ಮಾಡಿಕೊ ಎನ್ನ
ದಾಸನ ಮಾಡಿಕೊ ಎನ್ನ—ಸ್ವಾಮಿ ಸಾಸಿರನಾಮದ ವೆಂಕಟರಮಣ|| ದುರುಬುದ್ಧಿಗಳನೆಲ್ಲ ಬಿಡಿಸೋ—ನಿನ್ನ ಕರುಣಕವಚವೆನ್ನ ಹರಣಕೆ ತೊಡಿಸೋ| ಚರಣಸೇವೆ ಎನಗೆ ಕೊಡಿಸೋ—ನಿನ್ನ ಕರಪುಷ್ಪವನೆನ್ನ ಶಿರದಲಿ ಮುಡಿಸೋ|| ದೃಢಭಕ್ತಿ ನಿನ್ನಲ್ಲಿ ಬೇಡಿ —ನಾ – ನಡಿಗೆರಗುವೆನಯ್ಯ ಅನುದಿನ ಪಾಡಿ| ಕಡೆಗಣ್ಣಲೇಕೆನ್ನ ನೋಡಿ —ಬಿಡುವೆ ಕೊಡು ನಿನ್ನ ಧ್ಯಾನವ ಮನ ಶುಚಿಮಾಡಿ|| ಮರೆಹೊಕ್ಕವರ ಕಾವ ಬಿರುದು—ಎನ್ನ ಮರೆಯದೆ ರಕ್ಷಣೆ ಮಾಡಯ್ಯ ಪೊರೆದು|| ದುರಿತಗಳೆಲ್ಲವ ತರಿದು— ಸಿರಿ ಪುರಂದರವಿಟ್ಠಲ ಎನ್ನನು ಪೊರೆದು|| —ಪುರಂದರದಾಸ