admin

ಸತಿ ಎಂಬುದು ಮಾಟ, ಪತಿಯೆಂಬುದು ಮಾಟ,

ಸತಿ ಎಂಬುದು ಮಾಟ, ಪತಿಯೆಂಬುದು ಮಾಟ, ತನುವೆಂಬುದು ಮಾಯೆ, ಮನವೆಂಬುದು ಮಾಯೆ, ಸುಖವೆಂಬುದು ಮಾಯೆ, ಚೆನ್ನಮಲ್ಲಿಕಾರ್ಜುನನೆನಗೆ ಕೈಹಿಡಿದ ಗಂಡನಲ್ಲದೆ ಮಿಕ್ಕಿನವರೆಲ್ಲರೂ ಮೂಗಿಲ್ಲದ ಬಣ್ಣದ ಬೊಂಬೆಗಳು ಕಾಣಯ್ಯಾ.

ಸತಿ ಎಂಬುದು ಮಾಟ, ಪತಿಯೆಂಬುದು ಮಾಟ, Read More »

ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು

ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು ನಿಚ್ಚಲೊಂದು ಉಪದೇಶ ಮಂತ್ರವ ಕಲಿತಂತೆ. ಬಚ್ಚಬ¾Âಯ ಭವಿಗಳ ಸಂಗದಲ್ಲಿದ್ದರೆ ಕಿಚ್ಚಿನೊಳಗೆ ಬಿದ್ದ ಕೀಡೆಯಂತಪ್ಪುದಯ್ಯ. ಸುಚಿತ್ತದಿಂದ ನಿಮ್ಮ ಸದ್ಭಕ್ತರ ಸಂಗದಲ್ಲಿರಿಸದಿರ್ದಡೆ ನಾನಿನ್ನೆತ್ತ ಸಾರುವೆನು ಹೇಳಾ ಚೆನ್ನಮಲ್ಲಿಕಾರ್ಜುನಾ ?

ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು Read More »

ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು.

ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು. ಸಟೆದಿಟವೆಂಬ ಎರಡುವಿಡಿದು ನುಡಿವುದೀ ಲೋಕವೆಲ್ಲವು. ಸಟೆದಿಟವೆಂಬ ಎರಡುವಿಡಿದು ನಡೆವನೆ ಶರಣನು ? ಗುರುಲಿಂಗಜಂಗಮದಲ್ಲಿ ಸಟೆಯ ಬಳಸಿದಡೆ ಅವನು ತ್ರಿವಿಧಕ್ಕೆ ದ್ರೋಹಿ, ಅಘೋರ ನರಕಿ. ಉಂಬುದೆಲ್ಲ ಕಿಲ್ಬಿಷ, ತಿಂಬುದೆಲ್ಲ ಅಡಗು, ಕುಡಿವುದೆಲ್ಲ ಸುರೆ. ಹುಸಿಯೆಂಬುದೆ ಹೊಲೆ, ಶಿವಭಕ್ತಂಗೆ ಹುಸಿಯೆಂಬುದುಂಟೆ ಅಯ್ಯಾ ? ಹುಸಿಯನಾಡಿ ಲಿಂಗವ ಪೂಜಿಸಿದಡೆ ಹೊಳ್ಳ ಬಿತ್ತಿ ಫಲವನರಸುವಂತೆ,

ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು. Read More »

ಸಂಸಾರಸಂಗದಲ್ಲಿರ್ದೆ ನೋಡಾ ನಾನು.

ಸಂಸಾರಸಂಗದಲ್ಲಿರ್ದೆ ನೋಡಾ ನಾನು. ಸಂಸಾರ ನಿಸ್ಸಾರವೆಂದು ತೋರಿದನೆನಗೆ ಶ್ರೀಗುರು. ಅಂಗವಿಕಾರದ ಸಂಗವ ನಿಲಿಸಿ, ಲಿಂಗವನಂಗದ ಮೇಲೆ ಸ್ಥಾಪ್ಯವ ಮಾಡಿದನೆನ್ನ ಗುರು, ಹಿಂದಣ ಜನ್ಮವ ತೊಡೆದು, ಮುಂದಣ ಪ ಥವ ತೋರಿದನೆನ್ನ ತಂದೆ. ಚೆನ್ನಮಲ್ಲಿಕಾರ್ಜುನನ ನಿಜವ ತೋರಿದನೆನ್ನ ಗುರು.

ಸಂಸಾರಸಂಗದಲ್ಲಿರ್ದೆ ನೋಡಾ ನಾನು. Read More »

ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ.

ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ. ಎನ್ನ ವಂಶವಂಶದಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯಾ. ಎನ್ನುವನರಸಿಯರಸಿ ಹಿಡಿದು ಕೊಲುತ್ತಿದೆಯಯ್ಯಾ. ನಿನ್ನ ನಾ ಮರೆಹೊಕ್ಕೆ ಕಾಯಯ್ಯಾ. ಎನ್ನ ಬಿನ್ನಪವನವಧರಿಸಾ, ಚೆನ್ನಮಲ್ಲಿಕಾರ್ಜುನಾ.

ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ. Read More »

ಸಂಸಾರವ ನಿರ್ವಾಣವ ಮಾಡಿ,

ಸಂಸಾರವ ನಿರ್ವಾಣವ ಮಾಡಿ, ಮನವ ವಜ್ರತುರಗವ ಮಾಡಿ, ಜೀವವ ರಾವುತನ ಮಾಡಿ, ಮೇಲಕ್ಕೆ ಉಪ್ಪರಿಸಲೀಯದೆ, ಮುಂದಕ್ಕೆ ಮುಗ್ಗರಿಸಲೀಯದೆ ಈ ವಾರುವನ ಹಿಂದಕ್ಕೆ ಬರಸೆಳೆದು ನಿಲಿಸಿ, ಮೋಹರವಾಗಿದ್ದ ದಳದ ಮೇಲೆ, ಅಟ್ಟಿ ಮುಟ್ಟಿ ತಿವಿದು ಹೊಯಿದು ನಿಲಿಸಲಎರಿಯದೆ, ಧವಳಬಣ್ಣದ ಕೆಸರುಗಲ್ಲ ಮೆಟ್ಟಿ ತೊತ್ತಳದುಳಿವುತ್ತಲು ಇದಾರಯ್ಯಾ. ಅಂಗಡಿಯ ರಾಜಬೀದಿಯೊಳಗೆ ಬಿದ್ದ ರತ್ನಸೆಟ್ಟಿ ಈ ಥಳಥಳನೆ ಹೊಳವ ಪ್ರಜ್ವಲಿತವ ಕಾಣದೆ ಹಳಹಳನೆ ಹಳಸುತ್ತೈದಾರೆ ಅಯ್ಯಾ. ಆಧಾರಸ್ಥಾನದ ಇಂಗಳವನಿಕ್ಕಿ ವಾಯು ಪವನದಿಂದ ನಿಲಿಸಲು, ಆ ಅಗ್ನಿಯ ಸೆಕೆ ಹೋಗಿ ಬ್ರಹ್ಮರಂಧ್ರವ ಮುಟ್ಟಲು, ಅಲ್ಲಿರ್ದ

ಸಂಸಾರವ ನಿರ್ವಾಣವ ಮಾಡಿ, Read More »

ಸಂಗನಬಸವಣ್ಣನ ಪಾದವ ಕಂಡೆನಾಗಿ

ಸಂಗನಬಸವಣ್ಣನ ಪಾದವ ಕಂಡೆನಾಗಿ ಎನ್ನ ಅಂಗ ನಾಸ್ತಿಯಾಯಿತ್ತು. ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣ ಬಯಲಾಯಿತ್ತು. ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನಗೆ ಅರಿವು ಸ್ವಾಯತವಾಯಿತ್ತು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಕರುಣವ ಪಡೆದೆನಾಗಿ ಎನಗಾವ ಜಂಜಡವೂ ಇಲ್ಲವಯ್ಯಾ ಪ್ರಭುವೆ.

ಸಂಗನಬಸವಣ್ಣನ ಪಾದವ ಕಂಡೆನಾಗಿ Read More »

ಸಂಗದಿಂದಲ್ಲದೆ ಅಗ್ನಿ ಹುಟ್ಟದು,

ಸಂಗದಿಂದಲ್ಲದೆ ಅಗ್ನಿ ಹುಟ್ಟದು, ಸಂಗದಿಂದಲ್ಲದೆ ಬೀಜ ಮೊಳೆದೋರದು, ಸಂಗದಿಂದಲ್ಲದೆ ಹೂವಾಗದು. ಸಂಗದಿಂದಲ್ಲದೆ ಸರ್ವಸುಖದೋರದು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಮಹಾನುಭಾವಿಗಳ ಸಂಗದಿಂದಲಾನು ಪರಮಸುಖಿಯಾದೆನಯ್ಯಾ.

ಸಂಗದಿಂದಲ್ಲದೆ ಅಗ್ನಿ ಹುಟ್ಟದು, Read More »

ಶಿವಶಿವಾ, ಶ್ರೀಗುರುಲಿಂಗಯ್ಯದೇವರು ತನ್ನ ಕರಸ್ಥಲವ ತಂದು

ಶಿವಶಿವಾ, ಶ್ರೀಗುರುಲಿಂಗಯ್ಯದೇವರು ತನ್ನ ಕರಸ್ಥಲವ ತಂದು ಎನ್ನ ಶಿರಸ್ಥಲದ ಮೇಲಿರಿಸಿದ ಬಳಿಕ ಎನ್ನ ಭವಂ ನಾಸ್ತಿಯಾಯಿತ್ತು. ಎನ್ನ ತನ್ನಂತೆ ಮಾಡಿದ, ತನ್ನ ಎನ್ನಂತೆ ಮಾಡಿದ ; ಎನ್ನಲ್ಲಿ ತನ್ನಲ್ಲಿ ತೆರಹಿಲ್ಲದೆ ಮನಕ್ಕೆ ತೋರಿದ. ತನ್ನ ಕರಸ್ಥಲದೊಳಗಿದ್ದ ಶಿವಲಿಂಗದೇವರನು ಎನ್ನ ಕರಸ್ಥಲದೊಳಗೆ ಮೂರ್ತಿಗೊಳಿಸಿದ. ಎನ್ನ ಕರಸ್ಥಲದೊಳಗಿದ್ದ ಶಿವಲಿಂಗದೇವರನು ಎನ್ನ ತನುವಿನ ಮೇಲೆ ಮೂರ್ತಿಗೊಳಿಸಿದ. ಎನ್ನ ತನುವಿನ ಮೇಲಣ ಶಿವಲಿಂಗದೇವರನು ಎನ್ನ ಮನವೆಂಬ ಮಂಟಪದೊಳಗೆ ಮೂರ್ತಿಗೊಳಿಸದ. ಎನ್ನ ಮನವೆಂಬ ಮಂಟಪದೊಳಗೆ ಮೂರ್ತಿಗೊಳಿಸಿದ ಶಿವಲಿಂಗದೇವರನು ಎನ್ನ e್ಞನವೆಂಬ ಮಂಟಪದೊಳಗೆ ಮೂರ್ತಿಗೊಳಿಸಿದ. ಎನ್ನ

ಶಿವಶಿವಾ, ಶ್ರೀಗುರುಲಿಂಗಯ್ಯದೇವರು ತನ್ನ ಕರಸ್ಥಲವ ತಂದು Read More »

ಶಿವಶಿವಾ, ಕರ್ಮಕ್ಷಯವಾದಲ್ಲಿ

ಶಿವಶಿವಾ, ಕರ್ಮಕ್ಷಯವಾದಲ್ಲಿ ಕರ್ಮದ ಮಾತ ಕೇಳಿಸಿದೆಯಯ್ಯಾ ? ಪಾಪಲೇಪವಳಿದಲ್ಲಿ ಪಾಪದ ಮಾತ ಕೇಳಿಸಿದೆಯಲ್ಲಯ್ಯಾ ? ಶಿವಶಿವಾ, ಭವದ ಬಟ್ಟೆಯನಗಲಿದಲ್ಲಿ ? ಬಂಧನದ ನುಡಿಯನಾಡಿಸಿದೆಯಲ್ಲಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ, ನೀನೆ ಗಂಡನೆಂದಿದ್ದಲ್ಲಿ, ಪರಪುರುಷರ ಮಾತನಾಡಿಸಿದೆಯಲ್ಲಯ್ಯಾ ?

ಶಿವಶಿವಾ, ಕರ್ಮಕ್ಷಯವಾದಲ್ಲಿ Read More »

ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ.

ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ. ಶಿವಭಕ್ತರು ಪರಿಣಾಮಿಸಿದಡೆ, ಶಿವನು ಪರಿಣಾಮಿಸುವ ನೋಡಾ. ಭಕ್ತದೇಹಿಕದೇವನೆಂದು ಶ್ರುತಿ ಹೊಗಳುವ ಕಾರಣ, ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು ನೋಡಾ. ತಾಯಿನೊಂದಡೆ ಒಡಲಶಿಶು ನೋವತೆರನಂತೆ, ಭಕ್ತರು ನೊಂದಡೆ ತಾ ನೋವ ನೋಡಾ ಚೆನ್ನಮಲ್ಲಿಕಾರ್ಜುನ.

ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ. Read More »

ಶಿವನು ತಾನೆ ಗುರುವಾಗಿ ಬಂದು

ಶಿವನು ತಾನೆ ಗುರುವಾಗಿ ಬಂದು ಮಹಾಘನಲಿಂಗವ ವೇದಿಸಿಕೊಟ್ಟ ಪರಿಯೆಂತೆಂದೊಡೆ ಆತ್ಮಗೂಡಿ ಪಂಚಭೂತಂಗಳನೆ ಷಡಂಗವೆಂದೆನಿಸಿ, ಆ ಅಂಗಕ್ಕೆ ಕಲೆಗಳನೆ ಷಡುಶಕ್ತಿಗಳೆನಿಸಿ, ಆ ಶಕ್ತಿಗಳಿಗೆ ಷಡ್ವಿಧ ಭಕ್ತಿಯನಳವಡಿಸಿ, ಆ ಭಕ್ತಿಗಳಿಗೆ ಭಾವನಮನಬುದ್ಧಿಚಿತ್ತ ಅಹಂಕಾರಗಳನೆ ಹಸ್ತಂಗಳೆಂದೆನಿಸಿ, ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ ಪಂಚಲಿಂಗಂಗಳನೆ ಷಡ್ವಿಧ ಲಿಂಗಂಗಳೆಂದೆನಿಸಿ, ಆ ಮಂತ್ರಲಿಂಗಂಗಳಿಗೆ ಹೃದಯಗೂಡಿ ಪಂಚೇಂದ್ರಿಯಂಗಳನೆ ಮುಖಂಗಳೆಂದೆನಿಸಿ, ಆ ಮುಖಂಗಳಿಗೆ ತನ್ಮಾತ್ರಂಗಳನೆ ದ್ರವ್ಯ ಪದಾರ್ಥಗಳೆಂದೆನಿಸಿ, ಆ ದ್ರವ್ಯಪದಾರ್ಥಂಗಳು ಆಯಾ ಮುಖದ ಲಿಂಗಗಳಲ್ಲಿ ನಿರಂತರ ಸಾವಧಾನದಿಂದ ಅರ್ಪಿತವಾಗಿ ಬೀಗಲೊಡನೆ ಅಂಗಸ್ಥಲಂಗಳಡಗಿ, ತ್ರಿವಿಧ ಲಿಂಗಾಂಗ ಸ್ಥಲಂಗಳುಳಿದು, ಕಾಯಗುರು, ಪ್ರಾಣಲಿಂಗ, ನ

ಶಿವನು ತಾನೆ ಗುರುವಾಗಿ ಬಂದು Read More »

ಶಿವಗಣಂಗಳ ಮನೆಯಂಗಳ

ಶಿವಗಣಂಗಳ ಮನೆಯಂಗಳ ವಾರಣಾಸಿಯೆಂಬುದು ಹುಸಿಯೆ, ಪುರಾತನರ ಮನೆಯಂಗಳದಲ್ಲಿ ಅಷ್ಟಾಷಷ್ಟಿ ತೀರ್ಥಂಗಳು ನೆಲೆಸಿಪ್ಪವಾಗಿ. ಅದೆಂತೆಂದಡೆ ಅದಕ್ಕೆ ಆಗಮ ಸಾಕ್ಷಿ ‘ಕೇದಾರಸ್ಯೋದಕೆ ಪೀತೇ ವಾರಣಾಸ್ಯಾ ಮೃತೇ ಸತೀ’ ಶ್ರೀಶೈಲಶಿಖರೇ ದೃಷ್ಟೇ ಪುನರ್ಜನ್ಮ ನ ವಿದ್ಯತೇ ||ú ಎಂಬ ಶಬ್ದಕ್ಕಧಿಕವು. ಸುತ್ತಿಬರಲು ಶ್ರೀಶೈಲ, ಕೆಲಬಲದಲ್ಲಿ ಕೇದಾರ, ಅಲ್ಲಿಂದ ಹೊರಗೆ ವಾರಣಾಸಿ. ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗೆ, ಎನ್ನ ದೇವ ಚೆನ್ನಮಲ್ಲಿಕಾರ್ಜುನಾ ನಿಮ್ಮ ಭಕ್ತರ ಮನೆಯಂಗಳ ಪ್ರಯಾಗದಿಂದ ಗುರುಗಂಜಿಯಧಿಕ ನೋಡಾ ?

ಶಿವಗಣಂಗಳ ಮನೆಯಂಗಳ Read More »

ಶಿವ ಶಿವಾ, ಆದಿ ಅನಾದಿಗಳೆಂಬೆರಡಿಲ್ಲದ ನಿರವಯ ಶಿವ,

ಶಿವ ಶಿವಾ, ಆದಿ ಅನಾದಿಗಳೆಂಬೆರಡಿಲ್ಲದ ನಿರವಯ ಶಿವ, ನಿಮ್ಮ ನಿಜವನಾರಯ್ಯಾ ಬಲ್ಲವರು ವೇದಂಗಳಿಗಭೇದ್ಯನು ಶಾಸ್ತ್ರಂಗಳಿಗಸಾಧ್ಯನು ಪುರಾಣಕ್ಕೆ ಆಗಮ್ಯನು ಆಗಮಕ್ಕೆ ಅಗೋಚರನು ; ತರ್ಕಕ್ಕೆ ಅತಕ್ರ್ಯನು ವಾಙ್ಮನಾತೀತವಾಗಿಪ್ಪ ಪರಶಿವಲಿಂಗವನು ಕೆಲಂಬರು ಸಕಲನೆಂಬರು ; ಕೆಲಂಬರು ನಿಃಕಲನೆಂಬರು ಕೆಲಂಬರು ಸೂಕ್ಷ್ಮನೆಂಬರು ; ಕೆಲಂಬರು ಸ್ಥೂಲನೆಂಬರು ಈ ಬಗೆಯ ಭಾವದಿಂದ, ಹರಿ, ಬ್ರಹ್ಮ, ಇಂದ್ರ, ಚಂದ್ರ, ರವಿ, ಕಾಲ, ಕಾಮ, ದಕ್ಷ, ದೇವ, ದಾನವ, ಮಾನವರೆಲ್ಲರೂ ಕಾಣಲರಿಯದೆ ಅe್ಞನದಿಂದ ಭವಭಾರಿಗಳಾದರು. ಈ ಪರಿಯಲ್ಲಿ ಬಯಲಾಗಿ ಹೋಗಬಾರದೆಂದು ನಮ್ಮ ಬಸವಣ್ಣನು ಜಗದ್ಧಿತಾರ್ಥವಾಗಿ ಮತ್ರ್ಯಕ್ಕೆ

ಶಿವ ಶಿವಾ, ಆದಿ ಅನಾದಿಗಳೆಂಬೆರಡಿಲ್ಲದ ನಿರವಯ ಶಿವ, Read More »

ಶರಣರ ಮನ ನೋಯ ನುಡಿದೆನಾಗಿ,

ಶರಣರ ಮನ ನೋಯ ನುಡಿದೆನಾಗಿ, ಹರಜನ್ಮವಳಿದು ನರಜನ್ಮಕ್ಕೆ ಬಂದೆನು. ಹರನಟ್ಟಿದ ಬೆಸನ ಶಿರದೊಳಗಾಂತೊಡೆ, ಗಿರಿಗಳ ಭಾರವೆನಗಾದುದಯ್ಯ. ಚೆನ್ನಮಲ್ಲಿಕಾರ್ಜುನನ ಧರ್ಮದಿಂದ ಸಂಸಾರ ಕರ್ಮದ ಹೊರೆಯನಿಳುಹಿ, ನಡುದೊರೆಯ ಹಾಯಿದು ಹೋದೆನು

ಶರಣರ ಮನ ನೋಯ ನುಡಿದೆನಾಗಿ, Read More »

ಲಿಂಗಾಂಗಸಂಗಸಮರಸಸುಖದಲ್ಲಿ ಮನ ವೇದ್ಯವಾಯಿತ್ತು.

ಲಿಂಗಾಂಗಸಂಗಸಮರಸಸುಖದಲ್ಲಿ ಮನ ವೇದ್ಯವಾಯಿತ್ತು. ನಿಮ್ಮ ಶರಣರ ಅನುಭಾವಸಂಗದಿಂದ ಎನ್ನ ತನು ಮನ ಪ್ರಾಣ ಪದಾರ್ಥವ ಗುರುಲಿಂಗಜಂಗಮಕ್ಕಿತ್ತು, ಶುದ್ಧಸಿದ್ಧಪ್ರಸಿದ್ಧಪ್ರಸಾದಿಯಾದೆನು. ಆ ಮಹಾಪ್ರಸಾದದ ರೂಪು ರುಚಿ ತೃಪ್ತಿಯ ಇಷ್ಟ ಪ್ರಾಣ ಭಾವಲಿಂಗದಲ್ಲಿ ಸಾವಧಾನದಿಂದರ್ಪಿಸಿ ಮಹಾಘನಪ್ರಸಾದಿಯಾದೆನು. ಇಂತೀ ಸರ್ವಾಚಾರಸಂಪತ್ತು ಎನ್ನ ತನುಮನ ವೇದ್ಯವಾಯಿತ್ತು. ಇನ್ನೆಲ್ಲಿಯಯ್ಯಾ, ಎನಗೆ ನಿಮ್ಮಲ್ಲಿ ನಿರವಯವು ? ಇನ್ನೆಲ್ಲಿಯಯ್ಯಾ ನಿಮ್ಮಲ್ಲಿ ಕೂಡುವುದು ? ಪರಮಸುಖದ ಪರಿಣಾಮ ಮನಮೇರೆದಪ್ಪಿ ನಾನು ನಿಜವನೈದುವ ಠಾವ ಹೇಳಾ ಚೆನ್ನಮಲ್ಲಿಕಾರ್ಜುನ ಪ್ರಭುವೆ ?

ಲಿಂಗಾಂಗಸಂಗಸಮರಸಸುಖದಲ್ಲಿ ಮನ ವೇದ್ಯವಾಯಿತ್ತು. Read More »

ಲಿಂಗಸ್ಥಲವ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ,

ಲಿಂಗಸ್ಥಲವ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ, ಲಿಂಗಸ್ಥಲ ನಿಃಶೂನ್ಯವಾಯಿತ್ತು ಸಂಗಮದೇವರಬೆನ್ನಿನಲ್ಲಿ. ಜಂಗಮಸ್ಥಲ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ, ಜಂಗಮಸ್ಥಲ ನಿಃಶೂನ್ಯವಾಯಿತ್ತು ಪ್ರಭುದೇವರಬೆನ್ನಿನಲ್ಲಿ. ಭಕ್ತಿಸ್ಥಲವ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ, ಭಕ್ತಿಸ್ಥಲ ನಿಃಶೂನ್ಯವಾಯಿತ್ತು ಸಂಗನಬಸವರಾಜದೇವರಬೆನ್ನಿನಲ್ಲಿ. ಪ್ರಾಣಲಿಂಗಿಸ್ಥಲವ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ, ಪ್ರಾಣಲಿಂಗಿಸ್ಥಲ ನಿಃಶೂನ್ಯವಾಯಿತ್ತು ಸಿದ್ಧರಾಮೇಶ್ವರದೇವರಬೆನ್ನಿನಲ್ಲಿ. ಪ್ರಸಾದಿಸ್ಥಲವ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ, ಪ್ರಸಾದಿಸ್ಥಲ ನಿಃಶೂನ್ಯವಾಯಿತ್ತು ಚಿಕ್ಕದಣ್ಣಾಯಕರಬೆನ್ನಿನಲ್ಲಿ. ಐಕ್ಯಸ್ಥಲವ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ, ಐಕ್ಯಸ್ಥಲ ನಿಃಶೂನ್ಯವಾಯಿತ್ತು ಅಜಗಣ್ಣದೇವರಬೆನ್ನಿನಲ್ಲಿ. ಇಂತೆನ್ನ ಷಟ್‍ಸ್ಥಲಂಗಳು ಒಬ್ಬೊಬ್ಬರ ಬೆನ್ನಿನಲ್ಲಿ ನಿಃಶೂನ್ಯವಾದವು ಎನಗಿನ್ನಾವ ಕಿಂಚಿತುಸ್ಥಲವೂ

ಲಿಂಗಸ್ಥಲವ ಬಲ್ಲೆನೆಂಬ ಪರಬ್ರಹ್ಮಿಗಳು ನೀವು ಕೇಳಿರೆ, Read More »

ಲಿಂಗವನು ಪುರಾತನರನು

ಲಿಂಗವನು ಪುರಾತನರನು ಅನ್ಯರ ಮನೆಯೊಳಯಿಕೆ ಹೋಗಿ ಹೊಗಳುವರು, ತಮ್ಮದೊಂದುದರ ಕಾರಣ. ಲಿಂಗವು ಪುರಾತನರು ಅಲ್ಲಿಗೆ ಬರಬಲ್ಲರೆ ? ಅನ್ಯವನೆ ಮರೆದು ನಿಮ್ಮ ನೆನೆವರ ಎನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನಾ.

ಲಿಂಗವನು ಪುರಾತನರನು Read More »

ಲಿಂಗಪೂಜಕಂಗೆ ಫಲಪದಂಗಳಲ್ಲದೆ ಲಿಂಗವಿಲ್ಲ ?

ಲಿಂಗಪೂಜಕಂಗೆ ಫಲಪದಂಗಳಲ್ಲದೆ ಲಿಂಗವಿಲ್ಲ ? ಧರ್ಮತ್ಯಾಗಿಗೆ ನರಕವಲ್ಲದೆ ಲಿಂಗವಿಲ್ಲ ವೈರಾಗ್ಯಸಂಪನ್ನಂಗೆ ಮುಕ್ತಿಯಲ್ಲದೆ ಲಿಂಗವಿಲ್ಲ ? e್ಞನಿಗೆ ಪರಿಭ್ರಮಣವಲ್ಲದೆ ಲಿಂಗವಿಲ್ಲ ? ಇಂತಪ್ಪ ಭ್ರಾಂತನತಿಗಳದು ತನು ತಾನಾದ ಇರವೆಂತೆಂದಡೆ ದ್ವೈತವಳಿದು ಅದ್ವೈತದಿಂದ ತನ್ನ ತಾನರಿದಡೆ ಚೆನ್ನಮಲ್ಲಿಕಾರ್ಜುನಲಿಂಗವು ತಾನೆ.

ಲಿಂಗಪೂಜಕಂಗೆ ಫಲಪದಂಗಳಲ್ಲದೆ ಲಿಂಗವಿಲ್ಲ ? Read More »

ಲಿಂಗದಿಂದುದಯಿಸಿ ಅಂಗವಿಡಿದಿಪ್ಪ ಪುರಾತನರ

ಲಿಂಗದಿಂದುದಯಿಸಿ ಅಂಗವಿಡಿದಿಪ್ಪ ಪುರಾತನರ ಇಂಗಿತವನೇನೆಂದು ಬೆಸಗೊಂಬಿರಯ್ಯಾ ? ಅವರ ನಡೆಯೇ ಆಗಮ, ಅವರ ನುಡಿಯೇ ವೇದ ; ಅವರ ಲೋಕದಮಾನವರೆಂದೆನ್ನಬಹುದೆ ಅಯ್ಯಾ ? ಅದೆಂತೆಂದಡೆ, ಸಾಕ್ಷಿ ‘ವೃಕ್ಷದ್ಭವತಿ ಬೀಜಂ ಹಿ ತದ್‍ವೃಕ್ಷೇ ಲೀಯತೇ ಪುನಃ ೀ ರುದ್ರಲೋಕಂ ಪರಿತ್ಯಕ್ತಾ ಶಿವಲೋಕೇ ಭವಿಷ್ಯತಿ || ‘ ಎಂದುದಾಗಿ, ಅಂಕೋಲೆಯಬೀಜದಿಂದಾಯಿತ್ತು ವೃಕ್ಷವು ; ಆ ವೃಕ್ಷ ಮರಳಿ ಆ ಬೀಜದೊಳಡಗಿತ್ತು. ಆ ಪ್ರಕಾರದಲ್ಲಿ ಲಿಂಗದೊಳಗಿಂದ ಪುರಾತನರುದ್ಭವಿಸಿ, ಮರಳಿ ಆ ಪುರಾತನರು ಆ ಲಿಂಗದೊಳಗೆ ಬೆರಸಿದರು ನೋಡಿರಯ್ಯಾ. ಇಂತಪ್ಪ ಪುರಾತನರಿಗೆ ನಾನು

ಲಿಂಗದಿಂದುದಯಿಸಿ ಅಂಗವಿಡಿದಿಪ್ಪ ಪುರಾತನರ Read More »

ಲಿಂಗಕ್ಕೆ ಶರಣೆಂದು ಪೂಜಿಸಿ ಅರ್ಪಿಸಬಹುದಲ್ಲದೆ,

ಲಿಂಗಕ್ಕೆ ಶರಣೆಂದು ಪೂಜಿಸಿ ಅರ್ಪಿಸಬಹುದಲ್ಲದೆ, ಜಂಗಮವ ಪೂಜಿಸಿ ಸರ್ವಸುಖವನರ್ಪಿಸಿ ಶರಣೆನ್ನಬಾರದು ಎಲೆ ತಂದೆ. ಆಡಬಹುದು ಪಾಡಬಹುದಲ್ಲದೆ, ನುಡಿದಂತೆ ನಡೆಯಲು ಬಾರದು ಎಲೆ ತಂದೆ. ಚೆನ್ನಮಲ್ಲಿಕಾರ್ಜುನದೇವಾ, ನಿಮ್ಮ ಶರಣರು ನುಡಿದಂತೆ ನಡೆಯಲು ಬಲ್ಲರು ಎಲೆ ತಂದೆ.

ಲಿಂಗಕ್ಕೆ ಶರಣೆಂದು ಪೂಜಿಸಿ ಅರ್ಪಿಸಬಹುದಲ್ಲದೆ, Read More »

ಲಿಂಗಕ್ಕೆ ರೂಪ ಸಲಿಸುವೆ,

ಲಿಂಗಕ್ಕೆ ರೂಪ ಸಲಿಸುವೆ, ಜಂಗಮಕ್ಕೆ ರುಚಿಯ ಸಲಿಸುವೆ, ಕಾಯಕ್ಕೆ ಶುದ್ಧಪ್ರಸಾದವ ಕೊಂಬೆ. ಪ್ರಾಣಕ್ಕೆ ಸಿದ್ಧಪ್ರಸಾದವ ಕೊಂಬೆ. ನಿಮ್ಮ ಪ್ರಸಾದದಿಂದ ಧನ್ಯಳಾದೆನು. ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ.

ಲಿಂಗಕ್ಕೆ ರೂಪ ಸಲಿಸುವೆ, Read More »

ಲೋಕವ ಹಿಡಿದು ಲೋಕದ ಸಂಗದಂತಿಪ್ಪೆ.

ಲೋಕವ ಹಿಡಿದು ಲೋಕದ ಸಂಗದಂತಿಪ್ಪೆ. ಆಕಾರವಿಡಿದು ಸಾಕಾರಸಹಿತ ನಡೆವೆ. ಹೊರಗೆ ಬಳಸಿ ಒಳಗೆ ಮರೆದಿಪ್ಪೆ. ಬೆಂದನುಲಿಯಂತೆ ಹುರಿಗುಂದದಿಪ್ಪೆ. ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಾ, ಹತ್ತರೊಳಗೆ ಹನ್ನೊಂದಾಗಿ ನೀರತಾವರೆಯಂತಿಪ್ಪೆ.

ಲೋಕವ ಹಿಡಿದು ಲೋಕದ ಸಂಗದಂತಿಪ್ಪೆ. Read More »

ಲೋಕದ ಚೇಷ್ಟೆಗೆ ರವಿ ಬೀಜವಾದಂತೆ,

ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನವೇ ಬೀಜ. ಎನಗುಳ್ಳುದೊಂದು ಮನ. ಆ ಮನ ನಿಮ್ಮಲ್ಲಿ ಸಿಲುಕಿದ ಬಳಿಕ ಎನಗೆ ಭವವುಂಟೆ ಚೆನ್ನಮಲ್ಲಿಕಾರ್ಜುನಾ ?

ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, Read More »

ವಿಷಯದ ಸುಖ ವಿಷವೆಂದರಿಯದ ಮರುಳೆ,

ವಿಷಯದ ಸುಖ ವಿಷವೆಂದರಿಯದ ಮರುಳೆ, ವಿಷಯಕ್ಕೆ ಅಂಗವಿಸದಿರಾ. ವಿಷಯದಿಂದ ಕೆಡನೆ ರಾವಣನು ವಿಷಯದಿಂದ ಕೆಡನೆ ದೇವೇಂದ್ರನು ? ವಿಷಯದಿಂದಾರು ಕೆಡರು ಮರುಳೆ ? ವಿಷಯ ನಿರ್ವಿಷಯವಾಯಿತ್ತೆನಗೆ ನಿನ್ನಲ್ಲಿ. ಚೆನ್ನಮಲ್ಲಿಕಾರ್ಜುನಂಗೆ ಒಲಿದವಳ ನೀನಪ್ಪಿಹೆನೆಂದಡೆ ಒಣಗಿದ ಮರನಪ್ಪುವಂತೆ ಕಾಣಾ

ವಿಷಯದ ಸುಖ ವಿಷವೆಂದರಿಯದ ಮರುಳೆ, Read More »