ಅಕ್ಕ ಮಹಾದೇವಿ

ಭಾವ ಬೀಸರವಾಯಿತ್ತು, ಮನ ಮೃತ್ಯುವನಪ್ಪಿತ್ತು ;

ಭಾವ ಬೀಸರವಾಯಿತ್ತು, ಮನ ಮೃತ್ಯುವನಪ್ಪಿತ್ತು ; ಆನೇವೆನಯ್ಯಾ ? ಆಳಿತನದ ಮನ ತಲೆಕೆಳಗಾಯಿತ್ತು ; ಆನೇವೆನಯ್ಯಾ ? ಬಿಚ್ಚಿ ಬೇರಾಗದ ಭಾವವಾಗೆ, ಬೆರೆದೊಪ್ಪಚ್ಚಿ ನಿನ್ನ ನಿತ್ಯಸುಖದೊಳಗೆಂದಿಪ್ಪೆನಯ್ಯಾ, ಚೆನ್ನಮಲ್ಲಿಕಾರ್ಜುನಾ ?

ಭಾವ ಬೀಸರವಾಯಿತ್ತು, ಮನ ಮೃತ್ಯುವನಪ್ಪಿತ್ತು ; Read More »

ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು,

ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು, ಇದೇ ಕರ್ತೃಭೃತ್ಯರ ಭೇದ. ಲಿಂಗಭಕ್ತನಾದಡೆ ಜಂಗಮಪಾದತೀರ್ಥಪ್ರಸಾದವ ಲಿಂಗಕ್ಕೆ ಮಜ್ಜನ ಭೋಜನ ನೈವೇದ್ಯವ ಮಾಡಿ, ಪ್ರಸಾದವ ಕೊಳ್ಳಬೇಕು. ಇದೇ ವರ್ಮ, ಇದೇ ಧರ್ಮ ಕಾಣಾ ಚೆನ್ನಮಲ್ಲಿಕಾರ್ಜುನಾ.

ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು, Read More »

ಭವಿಸಂಗವಳಿದು ಭಕ್ತನಾದ ಬಳಿಕ,

ಭವಿಸಂಗವಳಿದು ಭಕ್ತನಾದ ಬಳಿಕ, ಭಕ್ತಂಗೆ ಭವಿಸಂಗವತಿಘೋರ ನರಕ. ಶರಣಸತಿ ಲಿಂಗಪತಿಯಾದ ಬಳಿಕ, ಶರಣಂಗೆ ಸತಿಸಂಗವು ಅಘೋರನರಕ. ಚೆನ್ನಮಲ್ಲಿಕಾರ್ಜುನಾ, ಪ್ರಾಣಗುಣವಳಿಯದವರ ಸಂಗವೇ ಭಂಗ.

ಭವಿಸಂಗವಳಿದು ಭಕ್ತನಾದ ಬಳಿಕ, Read More »

ಭವಿಯಾಚಾರವ ಬಿಡದೆ ಭಯಾಗರವ ಹೊಗದೆ,

ಭವಿಯಾಚಾರವ ಬಿಡದೆ ಭಯಾಗರವ ಹೊಗದೆ, ಶಿವಾಚಾರದಲ್ಲಿ ನಡೆವ ನಾಯಿಗಳು ಬರಿದೆ ನಾವು ಶಿವಾಚಾರಿಗಳೆಂದರೆ ನಮ್ಮ ಶಿವಾಚಾರಿ ಶರಣ ಬಸವಣ್ಣ ಮೆಚ್ಚ ನೋಡಯ್ಯ. ಶಿವಾಚಾರದ ಮಾರ್ಗವನು, ಶಿವಾಚಾರದ ಮರ್ಮವನು, ಶಿವಾಚಾರದ ವಿಸ್ತಾರವನು ನಮ್ಮ ಶರಣ ಬಸವಣ್ಣ ಬಲ್ಲನಲ್ಲದೆ ಉದರವ ಹೊರವ ವೇಷಧಾರಿಗಳೆತ್ತಬಲ್ಲರಯ್ಯ ? ಅಂತಪ್ಪ ಶಿವಾಚಾರದ ವಿಸ್ತಾರ ಸಕೀಲ ಹೇಳಿಹೆ ಕೇಳಿರಣ್ಣ. ಅದೆಂತೆಂದೊಡೆ ಲಿಂಗಾಚಾರವೆಂದು, ಸದಾಚಾರವೆಂದು, ಶಿವಾಚಾರವೆಂದು, ಭೃತ್ಯಾಚಾರವೆಂದು, ಗಣಾಚಾರವೆಂದು ಶಿವಾಚಾರವು ಐದುತೆರನಾಗಿಪ್ಪುದು ನೋಡಯ್ಯಾ. ಶ್ರೀ ಗುರು ಕರುಣಿಸಿಕೊಟ್ಟ ಲಿಂಗವನಲ್ಲದೆ ಅನ್ಯದೈವಂಗಳಿಗೆರಗದಿಹುದೇ ಲಿಂಗಾಚಾರ ನೋಡಯ್ಯ. ತಾ ಮಾಡುವ ಸತ್ಯ

ಭವಿಯಾಚಾರವ ಬಿಡದೆ ಭಯಾಗರವ ಹೊಗದೆ, Read More »

ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ,

ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ, ಆನೇವೆನಯ್ಯಾ ? ಹಸಿದುಂಡಡೆ ಉಂಡು ಹಸಿವಾಯಿತ್ತು. ಇಂದು ನೀನೊಲಿದೆಯಾಗಿ, ಎನಗೆ ಅಮೃತದ ಆಪ್ಯಾಯನವಾಯಿತ್ತು. ಇದು ಕಾರಣ, ನೀನಿಕ್ಕಿದ ಮಾಯೆಯನಿನ್ನು ಮುಟ್ಟಿದೆನಾದಡೆ ಆಣೆ, ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.

ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ, Read More »

ಭವದ ಬಟ್ಟೆಯ ದೂರವನೇನ ಹೇಳುವೆನಯ್ಯಾ ?

ಭವದ ಬಟ್ಟೆಯ ದೂರವನೇನ ಹೇಳುವೆನಯ್ಯಾ ? ಎಂಬತ್ತುನಾಲ್ಕು ಲಕ್ಷ ಊರಲ್ಲಿ ಎಡೆಗೆಯ್ಯಬೇಕು. ಒಂದೂರಭಾಷೆಯೊಂದೂರಲಿಲ್ಲ. ಒಂದೂರಲ್ಲಿ ಕೊಂಡಂಥ ಆಹಾರ ಮತ್ತೊಂದೂರಲಿಲ್ಲ. ಇಂತೀ ಊರ ಹೊಕ್ಕ ತಪ್ಪಿಂಗೆ ಕಾಯವ ಭೂಮಿಗೆ ಸುಂಕವ ತೆತ್ತು ಜೀವವನುಳುಹಿಕೊಂಡು ಬರಬೇಕಾಯಿತ್ತು. ಇಂತೀ ಮಹಾಘನದ ಬೆಳಕಿನೊಳಗೆ ಕಳೆದುಳಿದು ಸುಳಿದಾಡಿ ನಿಮ್ಮ ಪಾದವ ಕಂಡು ಸುಯಿಧಾನಿಯಾದೆ ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ

ಭವದ ಬಟ್ಟೆಯ ದೂರವನೇನ ಹೇಳುವೆನಯ್ಯಾ ? Read More »

ಭಕ್ತೆಯಾನಪ್ಪೆನಯ್ಯಾ

ಭಕ್ತೆಯಾನಪ್ಪೆನಯ್ಯಾ ; ಕರ್ತೃಭೃತ್ಯವ ನಾನರಿಯೆ. ಮಾಹೇಶ್ವರಿಯಾನಪ್ಪೆನಯ್ಯಾ ; ವ್ರತ ನೇಮ ಲವ ನಾನರಿಯೆ. ಪ್ರಸಾದಿಯಾನಪ್ಪೆನಯ್ಯಾ ; ಅರ್ಪಿತನರ್ಪಿತವೆಂಬ ಭೇದವ ನಾನರಿಯೆ. ಪ್ರಾಣಲಿಂಗಿಯಾನಪ್ಪೆನಯ್ಯಾ ; ಅನುಭಾವದ ಗಮನವ ನಾನರಿಯೆ. ಶರಣೆಯಾನಪ್ಪೆನಯ್ಯಾ? ಶರಣಸತಿ ಲಿಂಗಪತಿ ಎಂಬ ಭಾವವ ನಾನರಿಯೆ. ಐಕ್ಯಳಾನಪ್ಪೆನಯ್ಯಾ? ಬೆರಸಿ ಭೇದವ ನಾನರಿಯೆ. ಚೆನ್ನಮಲ್ಲಿಕಾರ್ಜುನಯ್ಯಾ, ಷಟ್‍ಸ್ಥಲದಲ್ಲಿ ನಿಃಸ್ಥಲವಾಗಿಪ್ಪೆನು.

ಭಕ್ತೆಯಾನಪ್ಪೆನಯ್ಯಾ Read More »

ಭಕ್ತನೆ ಕುಲಜನೆಂದ ಮಾತಿನಂತೆ ಹೋಗದು.

ಭಕ್ತನೆ ಕುಲಜನೆಂದ ಮಾತಿನಂತೆ ಹೋಗದು. ಭಕ್ತನೆ ಕುಲಜನೆಂಬ ನುಡಿಯೆಲ್ಲಿಯು ಸಲ್ಲದು. ಭಕ್ತನೆ ಕುಲಜನೆಂಬುದು ಪಾತಕವಯ್ಯ. ಅವಯವವೆ ಮೂರ್ತಿಯಾಗಿ ಸರ್ವಾಂಗಲಿಂಗಕ್ಕೆ ಅನುಭಾವವಿಲ್ಲಾಗಿ ಎನ್ನ ದೇವ ಚೆನ್ನಮಲ್ಲಿಕಾರ್ಜುನನಲಿ ಯಥಾ ತಥಾ ಎಂಬಚನವನರಿಯಿರೆ.

ಭಕ್ತನೆ ಕುಲಜನೆಂದ ಮಾತಿನಂತೆ ಹೋಗದು. Read More »

ಬಸವನ ಭಕ್ತಿ ಕೊಟ್ಟಣದಮನೆ.

ಬಸವನ ಭಕ್ತಿ ಕೊಟ್ಟಣದಮನೆ. ಸಿರಿಯಾಳನ ಭಕ್ತಿ ಕಸಬುಗೇರಿ. ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ. ಉಳಿದಾದ ಅಟಮಟ ಉದಾಸೀನ ದಾಸೋಹವ ಮಾಡುವವರ ದೈನ್ಯವೆಂಬ ಭೂತ ಸೋಂಕಿತು. ಮಣ್ಣಿನ ಮನೆಯ ಕಟ್ಟಿ ಮಾಯಾ ಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ. ಭಕ್ತನಲ್ಲಿ ಉಂಡು ಉದ್ದಂಡವೃತ್ತಿಯಲ್ಲಿ ನಡೆವವರು ಶಿವನಲ್ಲ. ಇವರು ದೇವಲೋಕ ಮತ್ರ್ಯಲೋಕಕ್ಕೆ ಹೊರಗು. ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತ್ತಾಗಿ ನಿರ್ವಯಲಾದೆ ಕಾಣಾ

ಬಸವನ ಭಕ್ತಿ ಕೊಟ್ಟಣದಮನೆ. Read More »

ಬಸವಣ್ಣಾ, ನಿಮ್ಮಂಗದಾಚಾರವ ಕಂಡು

ಬಸವಣ್ಣಾ, ನಿಮ್ಮಂಗದಾಚಾರವ ಕಂಡು ಎನಗೆ ಲಿಂಗಸಂಗವಾಯಿತ್ತಯ್ಯಾ. ಬಸವಣ್ಣಾ, ನಿಮ್ಮ ಮನದ ಸುe್ಞನವ ಕಂಡು ಎನಗೆ ಜಂಗಮಸಂಬಂಧವಾಯಿತ್ತಯ್ಯಾ. ಬಸವಣ್ಣಾ, ನಿಮ್ಮ ಸದ್ಭಕ್ತಿಯ ತಿಳಿದು ಎನಗೆ ನಿಜವು ಸಾಧ್ಯವಾಯಿತ್ತಯ್ಯಾ. ಚೆನ್ನಮಲ್ಲಿಕಾರ್ಜುನಯ್ಯನ ಹೆಸರಿಟ್ಟ ಗುರು ನೀವಾದ ಕಾರಣ ನಿಮ್ಮ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು ಕಾಣಾ ಸಂಗನಬಸವಣ್ಣಾ.

ಬಸವಣ್ಣಾ, ನಿಮ್ಮಂಗದಾಚಾರವ ಕಂಡು Read More »

ಬಸವಣ್ಣನೆ ಗುರು, ಪ್ರಭುದೇವರೆ ಲಿಂಗ,

ಬಸವಣ್ಣನೆ ಗುರು, ಪ್ರಭುದೇವರೆ ಲಿಂಗ, ಸಿದ್ಧರಾಮಯ್ಯನೆ ಜಂಗಮ, ಮಡಿವಾಳಯ್ಯನೆ ಜಂಗಮ, ಚೆನ್ನಬಸವಣ್ಣನೆನ್ನ ಪರಮಾರಾಧ್ಯರು. ಇನ್ನು ಸುಖಿಯಾದೆನು ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ.

ಬಸವಣ್ಣನೆ ಗುರು, ಪ್ರಭುದೇವರೆ ಲಿಂಗ, Read More »

ಬಸವಣ್ಣನ ಮನೆಯ ಮಗಳಾದ ಕಾರಣ

ಬಸವಣ್ಣನ ಮನೆಯ ಮಗಳಾದ ಕಾರಣ ಭಕ್ತಿಪ್ರಸಾದವ ಕೊಟ್ಟನು. ಚೆನ್ನಬಸವಣ್ಣನ ತೊತ್ತಿನ ಮಗಳಾದ ಕಾರಣ ಒಕ್ಕಪ್ರಸಾದವ ಕೊಟ್ಟನು. ಪ್ರಭುದೇವರ ತೊತ್ತಿನ ತೊತ್ತಿನ ಮರಿದೊತ್ತಿನ ಮಗಳಾದ ಕಾರಣ e್ಞನಪ್ರಸಾದವ ಕೊಟ್ಟನು. ಸಿದ್ಧರಾಮಯ್ಯನ ಶಿಶುಮಗಳಾದ ಕಾರಣ ಪ್ರಾಣಪ್ರಸಾದವ ಸಿದ್ಧಿಸಿಕೊಟ್ಟನು. ಮಡಿವಾಳಯ್ಯನ ಮನೆಯ ಮಗಳಾದ ಕಾರಣ ನಿರ್ಮಲಪ್ರಸಾದವ ನಿಶ್ಚೈಸಿಕೊಟ್ಟನು. ಇಂತೀ ಅಸಂಖ್ಯಾತ ಗಣಂಗಳೆಲ್ಲರು ತಮ್ಮ ಕರುಣದ ಕಂದನೆಂದು ತಲೆದಡಹಿದ ಕಾರಣ ಚೆನ್ನಮಲ್ಲಿಕಾರ್ಜುನಯ್ಯನ ಶ್ರೀಪಾದಕ್ಕೆ ಯೋಗ್ಯಳಾದೆನು.

ಬಸವಣ್ಣನ ಮನೆಯ ಮಗಳಾದ ಕಾರಣ Read More »

ಬಸವಣ್ಣನ ಪಾದವ ಕಂಡೆನಾಗಿ

ಬಸವಣ್ಣನ ಪಾದವ ಕಂಡೆನಾಗಿ ಎನ್ನಂಗ ನಾಸ್ತಿಯಾಯಿತ್ತು. ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣಬಯಲಾಯಿತ್ತು. ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನ್ನ ಅರಿವು ಸ್ವಯವಾಯಿತ್ತು. ಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಶರಣರ ಕರುಣವ ಪಡೆದೆನಾಗಿ ನಿನಗೆ ಮತ್ತಾವುದಿಲ್ಲವಯ್ಯ ಪ್ರಭುವೆ.

ಬಸವಣ್ಣನ ಪಾದವ ಕಂಡೆನಾಗಿ Read More »

ಬಲ್ಲಿದ ಹಗೆಯವ ತೆಗೆವನ್ನಬರ,

ಬಲ್ಲಿದ ಹಗೆಯವ ತೆಗೆವನ್ನಬರ, ಬಡವರ ಹರಣ ಹಾರಿಹೋದ ತೆರನಂತಾಯಿತ್ತು. ನೀ ಕಾಡಿ ಕಾಡಿ ನೋಡುವನ್ನಬರ, ಎನಗಿದು ವಿಧಿಯೇ ಹೇಳಾ ತಂದೆ ? ಮುರುವಾರುವನ್ನಬರ, ಎಮ್ಮೆ ಗಾಳಿಗೆ ಹಾರಿಹೋದ ತೆರನಂತಾಯಿತ್ತು. ಎನಗೆ ನೀನಾವ ಪರಿಯಲ್ಲಿ ಕರುಣಿಸುವೆಯಯ್ಯಾ ಚೆನ್ನಮಲ್ಲಿಕಾರ್ಜುನಾ ?

ಬಲ್ಲಿದ ಹಗೆಯವ ತೆಗೆವನ್ನಬರ, Read More »

ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ.

ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ. ಅಣ್ಣಾ, ನಾನು ಹೆಂಗೂಸಲ್ಲ ; ಅಣ್ಣಾ, ನಾನು ಸೂಳೆಯಲ್ಲ. ಅಣ್ಣಾ, ಮತ್ತೆ ನನ್ನ ಕಂಡು ಕಂಡು ಆರೆಂದು ಬಂದಿರಣ್ಣಾ ? ಚೆನ್ನಮಲ್ಲಿಕಾರ್ಜುನನಲ್ಲದ ಮಿಕ್ಕಿನ ಪರಪುರುಷನು ನಮಗಾಗದ ಮೋರೆ ನೋಡಣ್ಣಾ ?

ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ. Read More »

ಬಂದಹನೆಂದು ಬಟ್ಟೆಯ ನೋಡಿ,

ಬಂದಹನೆಂದು ಬಟ್ಟೆಯ ನೋಡಿ, ಬಾರದಿದ್ದಡೆ ಕರಗಿ ಕೊರಗಿದೆನವ್ವಾ. ತಡವಾದಡೆ ಬಡವಾದೆ ತಾಯೆ. ಚೆನ್ನಮಲ್ಲಿಕಾರ್ಜುನನ ಒಂದಿರುಳಗಲಿದಡೆ ತಕ್ಕೆಸಡಲಿದ ಜಕ್ಕವಕ್ಕಿಯಂತಾದೆನವ್ವಾ

ಬಂದಹನೆಂದು ಬಟ್ಟೆಯ ನೋಡಿ, Read More »

ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ

ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ ಐವರು ಮಕ್ಕಳು ಜನಿಸಿದರು. ಒಬ್ಬ ಭಾವರೂಪ, ಒಬ್ಬ ಪ್ರಾಣರೂಪ ; ಒಬ್ಬ ಐಮುಖವಾಗಿ ಕಾಯರೂಪಾದ ; ಇಬ್ಬರು ಉತ್ಪತ್ತಿ ಸ್ಥಿತಿಗೆ ಕಾರಣವಾದರು. ಐಮುಖನರಮನೆ ಸುಖವಿಲ್ಲೆಂದು ಕೈಲಾಸವ ಹೊಗೆನು, ಮತ್ರ್ಯಕ್ಕೆ ಅಡಿ ಇಡೆನು ; ಚೆನ್ನಮಲ್ಲಿಕಾರ್ಜುನದೇವಾ, ನೀನೇ ಸಾಕ್ಷಿ.

ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ Read More »

ಬಯಲು ಲಿಂಗವೆಂಬೆನೆ ? ಬಗಿದು ನಡೆವಲ್ಲಿ ಹೋಯಿತ್ತು.

ಬಯಲು ಲಿಂಗವೆಂಬೆನೆ ? ಬಗಿದು ನಡೆವಲ್ಲಿ ಹೋಯಿತ್ತು. ಬೆಟ್ಟ ಲಿಂಗವೆಂಬೆನೆ ? ಮೆಟ್ಟಿ ನಿಂದಲ್ಲಿ ಹೋಯಿತ್ತು. ತರುಮರಾದಿಗಳು ಲಿಂಗವೆಂಬೆನೆ ?ತರಿದಲ್ಲಿ ಹೋಯಿತ್ತು. ಲಿಂಗ ಜಂಗಮದ ಪಾದವೇ ಗತಿಯೆಂದು ನಂಬಿದ ಚೆನ್ನಮಲ್ಲಿಕಾರ್ಜುನಾ, ಸಂಗನಬಸವಣ್ಣನ ಮಾತು ಕೇಳದೆ ಕೆಟ್ಟೆನಯ್ಯಾ.

ಬಯಲು ಲಿಂಗವೆಂಬೆನೆ ? ಬಗಿದು ನಡೆವಲ್ಲಿ ಹೋಯಿತ್ತು. Read More »

ಬಂಜೆ ಬೇನೆಯನರಿವಳೆ ?

ಬಂಜೆ ಬೇನೆಯನರಿವಳೆ ? ಬಲದಾಯಿ ಮದ್ದ ಬಲ್ಲಳೆ ? ನೊಂದವರ ನೋವ ನೋಯದವರೆತ್ತ ಬಲ್ಲರೊ ? ಚೆನ್ನಮಲ್ಲಿಕಾರ್ಜುನಯ್ಯನಿರಿದಲಗು ಒಡಲಲ್ಲಿ ಮುರಿದು ಹೊರಳುವೆನ್ನಳಲನು ನೀವೆತ್ತ ಬಲ್ಲಿರೆ, ಎಲೆ ತಾಯಿಗಳಿರಾ ?

ಬಂಜೆ ಬೇನೆಯನರಿವಳೆ ? Read More »

ಪ್ರಾಣ ಹೊಲ ಮೇರೆಯಲ್ಲಿ ಪ್ರಾಣ ಸತ್ತುದ ಕಂಡೆ ?

ಪ್ರಾಣ ಹೊಲ ಮೇರೆಯಲ್ಲಿ ಪ್ರಾಣ ಸತ್ತುದ ಕಂಡೆ ? ದೇವ ದಾನವ ಮಾನವರೆಲ್ಲಾ ಜೋಳವಾಳಿಯಲೈದಾರೆ. ಜಾಣಕಲುಕುಟಿಗನನಗಲದೆ ಹೂವನೆ ಕೊಯ್ದು, ಕಲಿಯುಗದ ಕರಸ್ಥಲದೇವಪೂಜೆ ಘನ. ಮೇರುವಿನ ಕುದುರೆ ನಲಿದಾಡಲದುಭುತ. ಜಾರಜಂಗುಳಿಗಳ ಜಗಳ ಮೇಳಾಪ, ಮರುಪತ್ತದ ಮಾತು, ನಗೆ ಹಗರಣ ? ಕ್ಷೀರಸಾಗರದಲ್ಲಿ ದಾರಿಯಳವಡದಯ್ಯಾ. ನೀ ಹೇಳಬೇಕು, ಭಕ್ತರೆಂತಿಪ್ಪರೊ ? ಪಂಚವರ್ಣದ ಬಣ್ಣ ಸಂತೆಯ ಪರದಾಟವು ಚೆನ್ನಮಲ್ಲಿಕಾರ್ಜುನಯ್ಯಾ, ತ್ರಿಭುವನದ ಹೆಂಡಿರ ನೀರಹೊಳೆಯಲ್ಲಿರಿಸಿತ್ತು.

ಪ್ರಾಣ ಹೊಲ ಮೇರೆಯಲ್ಲಿ ಪ್ರಾಣ ಸತ್ತುದ ಕಂಡೆ ? Read More »

ಪ್ರಾಣ ಲಿಂಗವೆಂದರಿದಬಳಿಕ

ಪ್ರಾಣ ಲಿಂಗವೆಂದರಿದಬಳಿಕ ಪ್ರಾಣ ಪ್ರಸಾದವಾಯಿತ್ತು. ಲಿಂಗ ಪ್ರಾಣವೆಂದರಿದಬಳಿಕ ಅಂಗದಾಸೆ ಹಿಂಗಿತ್ತು. ಲಿಂಗ ಸೋಂಕಿನ ಸಂಗಿಗೆ ಕಂಗಳೆ ಕರುವಾದವಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ಹಿಂಗದೆ ಅನಿಮಿಷನಾಗಿಹ ಶರಣಂಗೆ.

ಪ್ರಾಣ ಲಿಂಗವೆಂದರಿದಬಳಿಕ Read More »

ಪಾತಾಳವಿತ್ತಿತ್ತ, ಪಾದಂಗಳತ್ತತ್ತ,

ಪಾತಾಳವಿತ್ತಿತ್ತ, ಪಾದಂಗಳತ್ತತ್ತ, ದಶದಿಕ್ಕು ಇತ್ತಿತ್ತ, ದಶಭುಜಂಗಳತ್ತತ್ತ, ಬ್ರಹ್ಮಾಂಡವಿತ್ತಿತ್ತ, ಮಣಿಮುಕುಟವತ್ತತ್ತ, ಚೆನ್ನಮಲ್ಲಿಕಾರ್ಜುನಯ್ಯಾ, ನೀವೆನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಲ್ಲಾ ಲಿಂಗವೆ.

ಪಾತಾಳವಿತ್ತಿತ್ತ, ಪಾದಂಗಳತ್ತತ್ತ, Read More »

ಪೃಥ್ವಿಯಲ್ಲಿ ಗುರೂಪದೇಶವೆಂಬ ನೇಗಿಲಪಿಡಿದು

ಪೃಥ್ವಿಯಲ್ಲಿ ಗುರೂಪದೇಶವೆಂಬ ನೇಗಿಲಪಿಡಿದು ಅಂತಃಕರಣಚತುಷ್ಟಯವೆಂಬ ಪಶುವಂ ಕಟ್ಟಿ ಓಂಕಾರವೆಂಬ ಶಿಣಿಗೋಲಂ ಪಿಡಿದು ವ್ರತ ಕ್ರಿಯವೆಂಬ ಸಾಲನೆತ್ತಿ ನಿರಾಶೆಯೆಂಬ ಕುಂಟೆಯಂ ತುರುಗಿ ದುಷ್ಕರ್ಮಂಗಳೆಂಬ ದುರ್ಮಲರಿಗಳಂ ಕಳೆದು ನಾನಾ ಮೂಲದ ಬೇರಂ ಕಿತ್ತು e್ಞನಾಗ್ನಿಯೆಂಬ ಬೆಂಕಿಯಂ ಸುಟ್ಟು ಈ ಹೊಲನ ಹಸನಮಾಡಿ ಬಿತ್ತುವ ಪರ್ಯಾಯವೆಂತೆಂದೊಡೆ ನಾದ ಬಿಂದು ಕಳೆ ಮೊಳೆ ಹದ ಬೆದೆಯನರಿದು ಸ್ಥೂಲವೆಂಬ ದಿಂಡಿಂಗೆ ಶ್ರೀದೇವರೆಂಬ ತಾಳನಟ್ಟು ಸುಷುಮ್ನನಾಳವೆಂಬ ಕೋವಿಯಂ ಜೋಡಿಸಿ ಮೇಲೆ ತ್ರಿಕೂಟಸ್ಥಾನವೆಂಬ ಬಟ್ಟೆಯಂ ಬಲಿದು ಕುಂಡಲಿಯ ಸರ್ಪನ ಹಗ್ಗವಂ ಬಿಗಿದು ಹಂಸನೆಂಬ ಎತ್ತಂ ಕಟ್ಟಿ ಪ್ರಣವವೆಂಬ

ಪೃಥ್ವಿಯಲ್ಲಿ ಗುರೂಪದೇಶವೆಂಬ ನೇಗಿಲಪಿಡಿದು Read More »

ಪೃಥ್ವಿ ಪೃಥ್ವಿಯ ಕೂಡದ ಮುನ್ನ,

ಪೃಥ್ವಿ ಪೃಥ್ವಿಯ ಕೂಡದ ಮುನ್ನ, ಅಪ್ಪು ಅಪ್ಪುವ ಕೂಡದ ಮುನ್ನ, ತೇಜ ತೇಜವ ಕೂಡದ ಮುನ್ನ, ವಾಯು ವಾಯುವ ಕೂಡದ ಮುನ್ನ, ಆಕಾಶ ಆಕಾಶವ ಕೂಡದ ಮುನ್ನ ಪಂಚೇಂದ್ರಿಯಂಗಳೆಲ್ಲ ಹಂಚುಹರಿಯಾಗದ ಮುನ್ನ ಚೆನ್ನಮಲ್ಲಿಕಾರ್ಜುನಂಗೆ ಶರಣೆನ್ನಿರೆ ?

ಪೃಥ್ವಿ ಪೃಥ್ವಿಯ ಕೂಡದ ಮುನ್ನ, Read More »

ಪುಣ್ಯಪಾಪಂಗಳನರಿಯದ ಮುನ್ನ,

ಪುಣ್ಯಪಾಪಂಗಳನರಿಯದ ಮುನ್ನ, ಅನೇಕ ಭವಂಗಳ ಬಂದೆನಯ್ಯಾ ? ಬಂದು ಬಂದು ನೊಂದು ಬೆಂದೆನಯ್ಯಾ ? ಬಂದು ನಿಮ್ಮ ನಂಬಿ ಶರಣುವೊಕ್ಕೆನಯ್ಯಾ ? ನಿಮ್ಮನೆಂದೂ ಅಗಲದಂತೆ ಮಾಡಿ ನಡೆಸಯ್ಯಾ ನಿಮ್ಮ ಧರ್ಮ ನಿಮ್ಮ ಧರ್ಮ. ನಿಮ್ಮಲೊಂದು ಬೇಡುವೆನು, ಎನ್ನ ಬಂಧನ ಬಿಡುವಂತೆ ಮಾಡಯ್ಯಾ ಚೆನ್ನಮಲ್ಲಿಕಾರ್ಜುನಾ

ಪುಣ್ಯಪಾಪಂಗಳನರಿಯದ ಮುನ್ನ, Read More »