ಈ ಮತ್ರ್ಯಧೂಳಿಯಲಿ

ಈ ಮತ್ರ್ಯಧೂಳಿಯಲಿ ಹುಟ್ಟಿಬೆಳೆದೆವು ನಾವು ಈ ಧೂಳಿಯಲಿ ದೃಷ್ಟಿ ಕುರುಡಾಯಿತು | ಈ ಮಣ್ಣಿನಲಿ ನಾವು ಮಕ್ಕಳಂತಾಡಿದೆವು ಅಭಯವನು ನೀಡಯ್ಯ ದಿವ್ಯಗುರುವೆ || ನಮ್ಮ ಏನೋ ಒಂದು ಅಲ್ಪ ತಪ್ಪಿಗೆ ನೀನು ನಿನ್ನ ಮಡಿಲಿಂದಾಚೆ ನೂಕಲಿಹೆಯಾ | ನೀನೆ ನಮ್ಮನು ತಳ್ಳಿ ಅನಾಥರಂದದಲಿ ತೊಳಲಿಸುವೆಯಾ ನಮ್ಮ ಬಳಲಿಸುವೆಯಾ || ಹೇ ಪ್ರಭುವೆ ಹಾಗೆಂದಿಗೂ ಗೈಯಬೇಡ ನಮ್ಮನೆಂದಿಗು ಆಚೆ ನೂಕಬೇಡ | ನಾವು ಅಲ್ಪರು ಗುರುವೆ, ಸಿಟ್ಟಾಗದಿರು ಪ್ರಭುವೆ ಮೃದುನುಡಿಯೊಳೆಮ್ಮೊಡನೆ ಮಾತನಾಡು || ನಿನ್ನೆದುರು ನಾವೆಲ್ಲ ಬರಿಯ ಹಸುಳೆಗಳಯ್ಯ […]

ಈ ಮತ್ರ್ಯಧೂಳಿಯಲಿ Read More »

ಈಶಾ ಕೈಲಾಸವಾಸಾ

ಈಶಾ ಕೈಲಾಸವಾಸಾ | ಕಾಶೀನಗರಾಧೀಶಾ | ಶೇಷಭೂಷಣ | ಗಿರೀಶಾ | ವಿಶ್ವೇಶ ಚಿತ್ತವಾಸಾ ಶಿವಸಿದ್ಧ ಸಾಧ್ಯ ಸೇವ್ಯಾ | ಭವವನಾಶವ ದಿವ್ಯ | ಭವಮೂರ್ತಿ ಕೀರ್ತಿಭವ್ಯಾ | ಕವಿ ಪ್ರಿಯ ಜ್ಞಾನ ದ್ರವ್ಯಾ ಹಾ || ಶಿವ ಓಂ ನಮಃ ಶಿವ | ಸÀವಚರಣ ನೋಡುವ | ಪವಿತ್ರ ಚಿತ್ತವ ಕೊಡು | ಧವಳ ಗಂಗಾಧರನೇ ||1|| ಸತಿನಾಥ ಭೂತ ಪ್ರೀತ | ಸತತ ಸದ್ಗುಣ ವ್ರಾತ | ಪತಿತ ಪಾವನ ತಾತ | ಕೃತುವೈ

ಈಶಾ ಕೈಲಾಸವಾಸಾ Read More »

ಈತನೀಗ ವಿಜಯ ವಿಠ್ಠಲಾ

ಈತನೀಗ ವಿಜಯ ವಿಠ್ಠಲಾ ಈತಜ್ಞಾನೀಗ ವಿಜಯ ವಿಠ್ಠಲಾ ಮಾತು ಮಾತಿಗೆ ನೆನಸಿದವರ ಪಾತಕಗಳ ಪರಿದು ಯಮನ ಯಾತನೆಯನು ಕಳೆದು ಪೊರೆವಾ ಕರೆದರೊಂದೆ ನುಡಿಗೆ ಬಂದು ಕರುಣದಿಂದ ಮುಂದೆ ನಿಂದು ಕರವ ಪಿಡಿದು ಅಂದು ಅಭಯ ಕರವ ಪಾಲಿಸಿದ ದಯಾಸಿಂಧು ಪರಿಪರಿಯಿಂದಲಿ ಹಿಂದು ಮುಂದು ದುರಿತದಿಂದ ನೊಂದು ಬಂದು ಇರಲು ದಾಸರ ದಾಸರನೆಂದು ಮೊರೆ ವಿಚಾರಿಸಿ ಸಾಕಿದನಿಂದು ||1|| ಅಚ್ಯುತಾನಂತನೆಂಬ ನಾಮಾ ಅಚ್ಚು ಸುಧೆಯೆನಗೆ ನೇಮಾ ನಿಚ್ಚ ಉಣಲಿಕಿತ್ತ ಪ್ರೇಮಾ ಚಚ್ಚಲದಲಿ ಪೂರ್ಣಕಾಮಾ ಹೆಚ್ಚಿ ಬಪ್ಪ ಮದದಾ ಸ್ತೋಮಾ

ಈತನೀಗ ವಿಜಯ ವಿಠ್ಠಲಾ Read More »

ಈತನೀಗ ಭಾರತೀಶನು ತನ್ನ ಪ್ರೀತಿಸುವರ

ಈತನೀಗ ಭಾರತೀಶನು ತನ್ನ ಪ್ರೀತಿಸುವರ | ಮನದ ಮಾತು ಸಲಿಸಿ ಮುಕುತಿ ಈವ ಶರಧಿ ಜಿಗಿದು ಹಾರಿ ಲಂಕಾಪುರವ ಶೋಧಿಸಿ | ಹರಿಯ ರಾಣಿಗೆ ಕುರುಹನಿತ್ತು ಮರಗಳುರುಹಿ || ಮುರಿದು ಧರೆಗೆ ವರಿಸಿದಾತಾ ಅಪ ಧುರದೊಳಕ್ಷನ ಹರಣವಳಿದು | ಗುರುವರ್ಹತ್ತುಶಿರನ ಜರಿದು || ಸರ್ರನೆ ನಗರ ಉರುಪಿ ಮರಳಿ | ಹರಿಯ ಚರಣಕ್ಕೆರಗಿದಾತಾ ||1|| ಕುರುನಿಕರ ಕರುಬಿ ಬೊ-| ಬ್ಬಿರಿದು ನಿಂದುರವಣಿಸಿ ಎದುರಾ-|| ದರಿಗಳ ಶಿರ ತರಿದು ತಳೋ-| ದರಿಯ ಹರುಷಬಡಿಸಿದಾತಾ||2|| ಕರಿಯ ತೆರದಿ ದುಷ್ಟ ಸಂಕರನು

ಈತನೀಗ ಭಾರತೀಶನು ತನ್ನ ಪ್ರೀತಿಸುವರ Read More »

ಈತನೀಗ ಪ್ರಣವ ಪಾದ್ಯನೊ

ಈತನೀಗ ಪ್ರಣವ ಪಾದ್ಯನೊ | ಭೂತ ಪ್ರೇತ ಪ್ರಮಥ ತತಿಗೆ | ನಾಥನೆನಿಪ ನಮಗೆ ನಿರುತ | ವಾಕನೊಳಗೆ ಹರಿಯ ತೋರುವ ಗಜದನುಜ ವಿನಾಶನೀತ | ಗಜವದನನ ಪೆತ್ತನೀತ | ಗಜನ ಸದದನೀತ ಪೆತ್ತಂ | ಗಜನ ಗೆದ್ದ ಗಂಭೀರನೀತ | ಗಜರಿಪುರಥ ರಮಣನೀತಾ ನಂ | ಗಜಮಾರಗೊಲಿದನೀತ | ಗಜ ವರದನ ಭಕ್ತರಘವೆಂಬೊ | ಗಜಕೆ ಕೇಸರಿಯಾಗಿಪ್ಪನೀತಾ ||1|| ದ್ವಿಜರಾಜ ಜುಟನೀತಸೋತ್ತಮ | ದ್ವಿಜಗೆ ಪಾಲಿಪನೀತ ಸತತಾ | ದ್ವಿಜ ಪನ್ನಗನ್ನ ಸಮಗುಣನೀತಾ | ದ್ವಿಜ

ಈತನೀಗ ಪ್ರಣವ ಪಾದ್ಯನೊ Read More »

ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ

ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ | ವಾಸುದೇವ ಮುನಿಯಿದ್ದ ಕಾರಣ ರಾಜಧಾನಿಯ ನೋಡೆ ಇಂದ್ರಭವನಕೆ ಮೇಲು | ತೇಜದಲಿ ನೋಡೆ ಸೂರ್ಯನದೆ ಸೋಲು || ಪೂಜೆದಲಿ ನೋಡೆ ಸರ್ವ ಧರಣಿಗೆ ಮೇಲು | ಭೋಜನದಲಿ ನೋಡೆ ಅಮೃತಕೆ ಮೇಲು ||1|| ಉತ್ಸಾಹದಲಿ ನೋಡೆ ನಹಿ ಪ್ರತಿ ನಹಿ ಪ್ರತಿ | ಸತ್ಸಂಗತಿಯ ನೋಡೆ ಬುಧ ಸಂಗತಿ || ಸುಚರಿತೆಯ ನೋಡೆ ಶುದ್ಧ ಸತ್ವದ ನೀತಿ | ಮತ್ಸರ ಮೆರೆದು ನೋಡೆ ಇಲ್ಲೆ ಮುಕುತಿ ||2||

ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ Read More »

ಈ ವೈಷ್ಣವ ಜನುಮ ಸಫಲವಿಂದು

ಈ ವೈಷ್ಣವ ಜನುಮ ಸಫಲವಿಂದು | ಈ ಉಡುಪಿ ಯಾತ್ರಿಗಭಿಮುಖವಾದುದು ಮನೋವಾಕ್ಕಾಯ ಕರ್ಮಗಳು ಬಲುಪರಿ ಇರಲು | ಮನುಜ ಪೋಗುವೆನೆಂದು ಒಮ್ಮೆ | ನೆನೆಸಿದ ಕ್ಷಣದಲ್ಲಿ ನಾಕವಾಗೋವು ಸು ತ್ತನು ಸುತ್ತಿಸುವ ಭವ ವನಧಿಗೆ ಇದೇ ಮೂಲ ||1|| ದೇಶದೊಳಗುಳ್ಳ ನಾನಾ ಯಾತ್ರೆ ತೀರಥಾ | ಏಸುಬಾರಿ ಪೋಗಿ ಬರಲಿ ಉಂಟೆ | ಈ ಸುಲಭ ಯಾತ್ರೆ ಕಂಡವರಿಗೆ ದೊರಿಯದು | ಲೇಸಾಗಿ ಕೇಳುವದು ಕುತ್ಸಿತ ಭಾವನೆ ಬಿಟ್ಟು ||2|| ಕೃಷ್ಣರಾಯನ ದರುಶನಕೆ ಮನಮಾಡಿದ | ಶಿಷ್ಟಾಚಾರಗೆ

ಈ ವೈಷ್ಣವ ಜನುಮ ಸಫಲವಿಂದು Read More »

ಈ ಮಾತುರ ನೀಯದಿದ್ದರೆ ನಿನ್ನ

ಈ ಮಾತುರ ನೀಯದಿದ್ದರೆ ನಿನ್ನ | ಧಾಮದಲ್ಲಿಗೆ ಪೋಗಿ ಸೇರಿ ಸುಖಿಪದೆಂತೋ ಹುಟ್ಟಿದಾರಭ್ಯದಿ ಹೊಟ್ಟಿ ಬಟ್ಟಿಯಲಿಂದ | ಕಷ್ಟ ಬಟ್ಟೆನೆಂದು ಹೇಳಲಿಲ್ಲಾ | ಸೃಷ್ಟೇಶ ಕಾಡುವ ಅಷ್ಟ್ಟ ಮಹಾಮದಗಳ ನಷ್ಟಗೊಳಿಸಿ ನಿನ್ನ | ನಿಷ್ಟಿಲಿಡೆಂದೆಲ್ಲದೆ ||1|| ಸತಿ ಸುತರಿಗೆ ಯೇನೋ | ಗತಿ ಗೋತ್ರವಿಲ್ಲೆಂದು | ಸತತ ನಿನ್ನ ಕೇಳಿ ದಣಿಸಿಲಿಲ್ಲಾ | ಪತಿತ ಪಾವನ ಎನಗೆ ಗತಿಯಾಗುವುದಕೆ | ಸುಪಥವನೆ ತೋರುವ | ಮತಿಕೊಡೆಂದೆನಲ್ಲದೆ||2|| ಕರುಣಿ ಬೇಡಿಕೊಂಬೆ | ಉರು ಕಾಲದಲಿ ನಿನ್ನ | ಶರಣರ

ಈ ಮಾತುರ ನೀಯದಿದ್ದರೆ ನಿನ್ನ Read More »

ಈ ಪರಿಯಲಿ ಸಲೆ ಸೇವೆಯನು

ಈ ಪರಿಯಲಿ ಸಲೆ ಸೇವೆಯನು ಕೊಡು ಕಂಡ್ಯಾ ಹರಿಯೇ | ಶ್ರೀಪತಿ ಉತ್ತಮರ ಸಂಗತಿಯಲೆನ್ನಯಿಟ್ಟು ಬಂದು ಕುಳ್ಳಿರುವಲ್ಲಿ ಸಿಂಹಾಸನನಾಗುವೆನು | ನಿಂದಲ್ಲಿ ಮೆಟ್ಟುವ ಹಾವಿಗೆಯಾಗುವೆ | ಮಿಂದ ಬಚ್ಚಲಿಗೆ ಹಚ್ಚಿದ ಶಿಲೆಯಾಗುವೆ | ಗಂಧವಾಗುವೆ ನಿನ್ನ ಅಂಗಾಲಿಗೆ ||1|| ಉಂಬಲ್ಲಿ ಬಿದ್ದ ಎಂಜಲ ತಿಂದು ಬದುಕುವೆ | ಅಂಬು ಶೀತಳವಾಗಿ ಕರವ ತೊಳಿವೆ | ಅಂಬುಜ ಕುಸುಮವಾಗಿ ಹಾಸಿಕೆಯಾಗುವೆ ಬಾಯ | ದೊಂಬಲಿಗೆ ಕರವಡ್ಡಿ ಛಲ ಹೊರುವೆ||2|| ಪವಡಿಸುವ ಮನೆಯೊಳಗೆ ಸೂಜ್ಯೋತಿಯಾಗುವೆ | ಪವಳ ಮಂಚದ ನಾಲ್ಕು

ಈ ಪರಿಯಲಿ ಸಲೆ ಸೇವೆಯನು Read More »

ಈ ದೇಹ ಬಲು ಸಾಧನ

ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ಬೆಸಸೆ ಪೇಳುತ ನಿತ್ಯ ಸಜ್ಜನರ ಒಡಗೂಡು||1|| ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು ||2|| ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ

ಈ ದೇಹ ಬಲು ಸಾಧನ Read More »

ಈ ಕಾಯ ಬಲು ಹೇಯವೊ

ಈ ಕಾಯ ಬಲು ಹೇಯವೊ | ಸಾಕು ಸಾಕು ಸಂಸಾರ ನೆಚ್ಚದಿರು ಎಚ್ಚರಿಕೆ ಊಧ್ರ್ವಾಧೋ ಭಾಗದಿಂದ ಕೂಡಿದಾ ರಕ್ತಶುಕ್ಲ | ಅರ್ಧರ್ಧ ಪ್ರವೇಸಿಯಾಗಿ | ವರ್ಧನಾಗಿ ಮಾಂಸ ಪಿಂಡಿಕೆಯಲಿ ಬೆಳೆದು | ಅರ್ಧವದೊಳಗೆ ಬಳುಲುವುದೇನೊ ಮಹಾ ಕಠೀಣಾ ||1|| ಸನ್ನಿರೋಧವಾದ ಪ್ರಾದೇಶದಲಿ ನೀನು | ಬನ್ನ ಬಡುವದು ಜನಕೆ ಅರಿಯನಲ್ಲಾ | ಮುನ್ನೆ ಇಂದ್ರನಿಗಾಗಿ ವರವಿತ್ತ ಸಂಪತ್ತು | ಇನ್ನು ನಿನ್ನ ಸುತ್ತ ಬಂದದೆ ತಿಳಿದುಕೋ ||2|| ಕಫ ಶ್ಲೇಷ್ಮ ಪಿತ್ತ ವಾತ ಶೈತ್ಯಜ್ವರ ಕೆಮ್ಮು |

ಈ ಕಾಯ ಬಲು ಹೇಯವೊ Read More »

ಈತನೇನೆ ನಿನ್ನ ಮಗನು

ಈತನೇನೆ ನಿನ್ನ ಮಗನು ಸೀತಾಪತಿ ರಘುನಾಥನೆಂಬವನು ವ್ಯಾಸನ ಜನನಿಯ ವಾಸನೆ ತಾಳ್ದನುದೇಶದೊಳಗೆ ಬಲು ಪೆಸರುಳ್ಳವನುನಾಸದೊಳೊರ್ವನ ಪೊತ್ತು ಮುರಿದು ಮು-ನೀಶರ ಶಾಪವ ಪಿಡಿದು ಕೊಂದಾತನು ||1|| ಆನೆವಾಹನ ಪಿತನ ತಾಯನಳೆದೋನುಭಾನುಸುತಗೆ ಶಾಪವಿತ್ತವನುಕಾನನ ಜನನಿಯ ಕೊಂದು ಪ್ರಿಯದಲಿ ನಿ-ಧಾನದಿ ಶರಧಿ ಶಯನ ಮಾಡಿದಾತನು|| 2|| ಮೂಗ್ರಾಮ ಮುರಿದು ವಾಜಿಯನೇರಿದಾತನುಸಾಗ್ರದಿಂದಿಳೆಯ ಭಾಗ್ಯ ಹಿಂಗಿಸಿದಯೋಗ್ಯದಿಂದ ಬಳಪತಿತನವನಿಗೆಭಾಗ್ಯವಿತ್ತ ಕಾಗಿನೆಲೆಯಾದಿಕೇಶವ ||3||

ಈತನೇನೆ ನಿನ್ನ ಮಗನು Read More »

ಈತನೀಗ ವಾಸುದೇವನು

ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ – ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ||1|| ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ ||2|| ಸೃಷ್ಟಿಕರ್ತಗೆ ಮಗನಾದವನಿಗಿಷ್ಟ ಭೂಷಣ ಅಶನವಾದನನಿಷ್ಠ ಪುತ್ರಗೆ ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕಷ್ಟ

ಈತನೀಗ ವಾಸುದೇವನು Read More »

ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ

ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ ವಾಸುದೇವನ ಭಜಿಸೊ ಒರಟು ಜೀವನವೆ ನೆಂಟರೂರಿಗೆ ಹೋಗಿ ನಾಲ್ಕು ದಿವಸವಿದ್ದರೆಎಂಟು ದಿನದಾಯಾಸ ಅಟ್ಟಬಹುದೊಉಂಟು ಸೌಭಾಗ್ಯವೆಂಬ ಧೈರ್ಯವ ಬಿಟ್ಟು ವೈ-ಕುಂಠವಾಸಿಯ ಭಜಿಸೊ ತುಂಟ ಜೀವನವೆ||1|| ಮಡದಿ ಮಕ್ಕಳು ಎಂಬ ಮಾಯಾ ಸಂಸಾರಕ್ಕೆಸಡಗರವಗೊಂಡು ಬರಿದೆ ಭ್ರಮಿಸಲೇಕೆಬಿಡದೆ ಯಮನಾಳುಗಳು ಬಾರೆಂದು ಎಳೆವಾಗಮಡದಿ ಮಕ್ಕಳು ಬಹರೆ ಭಂಡ ಜೀವನವೆ||2|| ಇಷ್ಟ ಸಂಪತ್ತನ್ನು ಬಡವರಾ ಕರೆತಂದುಕೊಟ್ಟು ಮಾಡಿದ ಪುಣ್ಯಫಲ ತನ್ನದೊಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಮನದಲಿ ಭಜಿಸೊ ಭ್ರಷ್ಟಜೀವನವೆ||3||

ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ Read More »

ಈ ಪರಿಯ ಸೊಬಗಾವ ದೇವರಲಿ ನಾ ಕಾಣೆ

ಈ ಪರಿಯ ಸೊಬಗಾವ ದೇವರಲಿ ನಾ ಕಾಣೆಗೋಪಿದೇವಿಯ ತನಯ ಗೋಪಾಲ ಬಾಲಗಲ್ಲದೆ ದೊರೆಯ ತನದಲಿ ನೋಡೆ ಧರಣಿ ಜಾತೆಯ ರಮಣಸಿರಿಯ ತನದಲಿ ನೋಡೆ ಶ್ರೀಕಾಂತನುಹಿರಿಯ ತನದಲಿ ನೋಡೆ ಸರಸಿಜೋದ್ಭವನ ಪಿತನುಗುರುವು ತನದಲಿ ನೋಡೆ ಆದಿಗುರುವು ||1|| ಪಾವನತ್ವದಿ ನೋಡೆ ದೇವಿ ಗಂಗಾಜನಕದೇವತ್ವದಲಿ ನೋಡೆ ದಿವಿಜರೊಡೆಯಲಾವಣ್ಯದಲಿ ನೋಡೆ ಲೋಕ ಮೋಹನ ಪಿತನುಜವ ಧೈರ್ಯದಲಿ ನೋಡೆ ಅಸುರಾಂತಕ||2|| ಗಗನದಲಿ ಸಂಚರಿಪ ವೈನತೇಯ ವಾಹನಜಗವನು ಪೊತ್ತಿರ್ಪ ಶೇಷ ಶಯನಕಾಗಿನೆಲೆಯಾದಿಕೇಶವರಾಯಗಲ್ಲದೆಮಿಗಿಲು ದೈವಗಳಿಗೀ ಭಾಗ್ಯಮುಂಟೆ ||3||

ಈ ಪರಿಯ ಸೊಬಗಾವ ದೇವರಲಿ ನಾ ಕಾಣೆ Read More »

ಈಶಾವಾಸ್ಯೋಪನಿಷತ್

ಓಂ ಪೂರ್ಣಮದಃ ಪೂರ್ಣಮಿದಂ ಪೂರ್ಣಾತ್ಪೂರ್ಣಮುದಚ್ಯತೇ | ಪೂರ್ಣಸ್ಯ ಪೂರ್ಣಮಾದಾಯ ಪೂರ್ಣಮೇವಾವಶಿಷ್ಯತೇ || ಓಂ ಶಾಂತಿಃ ಶಾಂತಿಃ ಶಾಂತಿಃ || ಓಂ ಈಶಾ ವಾಸ್ಯ’ಮಿದಗ್‍ಮ್ ಸರ್ವಂ ಯತ್ಕಿಂಚ ಜಗ’ತ್ವಾಂ ಜಗ’ತ್ | ತೇನ’ ತ್ಯಕ್ತೇನ’ ಭುಂಜೀಥಾ ಮಾ ಗೃ’ಧಃ ಕಸ್ಯ’ಸ್ವಿದ್ಧನಮ್” || 1 || ಕುರ್ವನ್ನೇವೇಹ ಕರ್ಮಾ”ಣಿ ಜಿಜೀವಿಷೇಚ್ಚತಗ್‍ಮ್ ಸಮಾ”ಃ | ಏವಂ ತ್ವಯಿ ನಾನ್ಯಥೇತೋ”‌உಸ್ತಿ ನ ಕರ್ಮ’ ಲಿಪ್ಯತೇ’ ನರೇ” || 2 || ಅಸುರ್ಯಾ ನಾಮ ತೇ ಲೋಕಾ ಅಂಧೇನ ತಮಸಾ‌உ‌உವೃ’ತಾಃ | ತಾಗ್ಂಸ್ತೇ ಪ್ರೇತ್ಯಾಭಿಗ’ಚ್ಛಂತಿ

ಈಶಾವಾಸ್ಯೋಪನಿಷತ್ Read More »

ಈಶ್ವರ ತುಮ್ ಹೈ ದಯಾಲ

ಈಶ್ವರ ತುಮ್ ಹೈ ದಯಾಲ ಜಗತಪತಿ ಪ್ರಣತಪಾಲ ವ್ಯಾಪಕ ಪೂರಣ ಬಿಸಾಲ ಸತ-ಚಿತ-ಸುಖದಾಈ|| ಸಕಲ ಭುವನ ಜನ್ಮಕರಣ ಜೀವನಕೇ ಪರಮ ಶರಣ ಶರಣಾಗತ ತಾಪಹರಣ ನಿಗಮಾಗಮ ಗಾಈ|| ತೇರೀ ಮಹಿಮಾ ಅಪಾರ ಕೋಈ ನಹಿ ಪಾವೇ ಪಾರ ಋಷಿ ಮುನಿಗಣ ಕರ ವಿಚಾರ ಅಂತ ಹಾರ ಜಾಈ|| ಬ್ರಹ್ಮಾ ಶ್ರೀಪತಿ ಗಣೇಶ ನಾರದ ಶಾರದ ಸುರೇಶ ಧ್ಯಾವತ ಮನಮೇ ಹಮೇಶ ಬ್ರಹ್ಮಾನಂದ ಪಾಈ||                                                                  —-ಬ್ರಹ್ಮಾನಂದ

ಈಶ್ವರ ತುಮ್ ಹೈ ದಯಾಲ Read More »

ಈ ಮರ್ತ್ಯ ಧೂಳಿಯಲಿ

ಈ ಮರ್ತ್ಯ ಧೂಳಿಯಲಿ ಹುಟ್ಟಿಬೆಳೆದೆವು ನಾವು ಈ ಧೂಳಿಯಲಿ ದೃಷ್ಟಿ ಕುರುಡಾಯಿತು| ಈ ಮಣ್ಣಿನಲಿ ನಾವು ಮಕ್ಕಳಂತಾಡಿದೆವು ಅಭಯವನು ನೀಡಯ್ಯ ದಿವ್ಯಗುರುವೆ|| ನಮ್ಮ ಏನೋ ಒಂದು ಅಲ್ಪ ತಪ್ಪಿಗೆ ನೀನು ನಿನ್ನ ಮಡಿಲಿಂದಾಚೆ ನೂಕಲಿಹೆಯಾ| ನೀನೆ ನಮ್ಮನ್ಮು ತಳ್ಳಿ ಅನಾಥರಂದದಲಿ ತೊಳಲಿಸುವೆಯಾ ನಮ್ಮ ಬಳಲಿಸುವೆಯಾ|| ಹೇ ಪ್ರಭುವೆ ಹಾಗೆಂದಿಗೂ ಗೈಯಬೇಡ ನಮ್ಮನೆಂದಿಗು ಆಚೆ ನೂಕಬೇಡ| ನಾವು ಅಲ್ಪರು ಗುರುವೆ, ಸಿಟ್ಟಾಗದಿರು ಪ್ರಭುವೆ ಮೃದುನುಡಿಯೊಳೆಮ್ಮೊಡನೆ ಮಾತನಾಡು|| ನಿನ್ನೆದುರು ನಾವೆಲ್ಲ ಬರಿಯ ಹಸುಳೆಗಳಯ್ಯ ಹೆಜ್ಜೆಹೆಜ್ಜೆಗು ಎಡವಿ ಬೀಳುತಿಹೆವು| ಇದನರಿತರೂ ನೀನು

ಈ ಮರ್ತ್ಯ ಧೂಳಿಯಲಿ Read More »

ಈ ಪರಿಯ ಸೊಬಗಾವ

ಈ ಪರಿಯ ಸೊಬಗಾವ ದೇವರಲಿ ನಾ ಕಾಣೆ ಗೋಪೀಜನಪ್ರಿಯ ಗೋಪಾಲಗಲ್ಲದೆ|| ದೊರೆಯತನದಲಿ ನೋಡೆ ಧರಣಿದೇವಿಗೆ ರಮಣ ಸಿರಿಯತನದಲಿ ನೋಡೆ ಶ್ರೀಕಾಂತನು| ಹಿರಿಯತನದಲಿ ನೋಡೆ ಸರಸಿಜೋದ್ಭವನಯ್ಯಾ ಗುರುವುತನದಲಿ ನೋಡೆ ಜಗದಾದಿಗುರುವು|| ಪಾವನತ್ವದಿ ನೋಡೆ ಅಮರಗಂಗಾಜನಕ ದೇವತ್ವದಲಿ ನೋಡೆ ದಿವಿಜರೊಡೆಯ| ಲಾವಣ್ಯದಲಿ ನೋಡೆ ಲೋಕಮೋಹಕನಯ್ಯಾ ಆವ ಧೈರ್ಯದಿ ನೋಡೆ ಅಸುರಾಂತಕನು|| ಗಗನದಲಿ ಸಂಚರಿಪ ಗರುಢದೇವನೆ ತುರಗ ಜಗತೀಧರ ಶೇಷ ಪರ್ಯಂಕಶಯನ| ನಿಗಮಗೋಚರ ನಮ್ಮ ಪುರಂದರವಿಟ್ಠಲಗಲ್ಲದೆ ಮಿಗಿಲಾದ ದೈವಗಳಿಗೀ ಭಾಗ್ಯವುಂಟೇ||                                                      —ಪುರಂದರದಾಸ

ಈ ಪರಿಯ ಸೊಬಗಾವ Read More »