ವಿಜಯದಾಸ

ಸೇರಿದೆ ನಿನ್ನ ವೆಂಕಟರನ್ನ ಪಾಲಿಸು ಎನ್ನ

ಸೇರಿದೆ ನಿನ್ನ ವೆಂಕಟರನ್ನ ಪಾಲಿಸು ಎನ್ನ ಪಾರ ಜನುಮಕ್ಕೆ ನೀನೆ ದೈವವೆಂದು ಶೂನ್ಯಜ್ಞನು ನಾನು ಅನ್ಯಾಥಾ ಗತಿ ಅರಿಯೆ | ಅನ್ಯರಲ್ಲಿಗೆ ಕೊಡದೆ ಧನ್ಯನ ಮಾಡೊ ಬಿಡದೆ ||1|| ಕಲ್ಪತರುವೆ ಎಂದು ವಪ್ಪದಿಂದಲಿ ಬಂದೆ | ಆಲ್ಪರಿಯದಂತೆ ನಾಗತಲ್ಪನೆ ಫಲವೀಯೋ ||2|| ವರುಷಾವರುಷ ಹೀಗೆ ದರುಶನಕೊಡು ಎನಗೆ | ಹರುಷವಾಗಲಿ ಪರಮಪುರುಷ ವಿಜಯವಿಠ್ಠಲಾ ||3||

ಸೇರಿದೆ ನಿನ್ನ ವೆಂಕಟರನ್ನ ಪಾಲಿಸು ಎನ್ನ Read More »

ಸೌಂದರ್ಯ ಪುರುಷನ ಕಣ್ದೆರದು ನೋಡಿದೆನು

ಸೌಂದರ್ಯ ಪುರುಷನ ಕಣ್ದೆರದು ನೋಡಿದೆನು | ಇಂದೆನ್ನ ಜನುಮ ಸಫಲ | ಹಿಂದೆ ಅನಂತೇಶನೆಂದೆಂಬ ನಾಮದಲಿ | ಚಂದದಲಿ ಮೆರೆವ ಕಂಬು | ಕಂದರದ | ತಿಮ್ಮನ ಮುಕುಟ ಮುತ್ತಿನ ಹಾರ | ಮಕರ ಕುಂಡಲಧಾರ | ಮಕ್ಕಳಾ ಮಣಿಸು ಕಾಮದಾ | ಅಕಳಂಕ ತುಲಸಿ ಸರ | ಪೊಕ್ಕಳ ಕಮಲ ಸುಂದರ | ಅಕುಟಿಲ ಹೃದಯಮಂದಿರ | ಸಕಲಕಾಲದಲಿ ನಿಜ | ಭಕುತರಿಗೆ ಒಲಿದಿಪ್ಪ | ಅಖಿಳ ಲೋಕಾಧೀಶ ಮುಕುತಾರ್ಥ ಮುರವೈರಿ||1|| ಉಂಗುರ ಕೈ ಬೆರಳ

ಸೌಂದರ್ಯ ಪುರುಷನ ಕಣ್ದೆರದು ನೋಡಿದೆನು Read More »

ಸುರನದಿ ಪೆತ್ತವನೆ ನಿನಗೆ ಮಜ್ಜನವೆ

ಸುರನದಿ ಪೆತ್ತವನೆ ನಿನಗೆ ಮಜ್ಜನವೆ | ಪಾಲಾರಮನೆಪುಳುವನೇ ನಿನಗೀ ಕ್ಷೀರಾಭಿಷೇಕವೇ ? ಸರಸಿಜಕುಸುಮ ಗಂಧಾ ಪರಿಮಳದಿಂದ ಪೊಡೆದಾ ದೈವವೇ | ಅವರೆ ಯೊಳಗಿನ ಕುಸುಮ ನಿನಗೆ ಮೆಚ್ಚೆ | ಎರಡು ಕಂಗಾಳಿಂದ ಲೋಕ ಬೆಳಗಿಸುವವನ ವಿರಚೇ ಶಿವ ದೀಪದಿಂವೆಗ್ಗಳವೇನೊ ನಿನಗೆ | ||1|| ಕರದೊಳಗೆ ಮುನಿಗೆ ರಸಾಯನವುಳ್ಳ ಶ್ರೀ ತೋರಿ ಶಿರವನೆ ತರಿಸಿ ತೊಲಗಿದ ಪದಾರ್ಥದಿಂದೇನಯ್ಯಾ | ಹಂಸ ಕು ಬೇರ ನಿನ್ನವರಾಗಿದೆ | ಬರಿದೆಯಲಾ ಯೆನ್ನ ಸುವರ್ಣ ಪುಷ್ಪವೆ | ಪರಿಪರಿಗಾಯನ ನಾರದಾದ್ಯರು ಪಾಡೆ ಪೊಗಳಬಲ್ಲನೆ

ಸುರನದಿ ಪೆತ್ತವನೆ ನಿನಗೆ ಮಜ್ಜನವೆ Read More »

ಸುಬ್ಬರಾಯ ಶುಭ ಕಾಯಾ

ಸುಬ್ಬರಾಯ ಶುಭ ಕಾಯಾ | ಸುಬ್ಬರಾಯ ಶುಭ ಕಾಯಂಗಜ ನೀನೆ || ನಿಬ್ಬರ ಮಹಿಮಾ ದಯಾಂಬುಧಿ ಸ್ಕಂದಾ ಮಾರಾ ಭರತನೆ ಶಂಬ | ರಾರಿ ಸನತ್ಕುಮಾರ ಕು ಮಾರಾ ಸಾಂಬಾ || ಸಾರಿದೆ ನಿನ್ನವತಾರ ಮೂಲರೂಪ || ಸಾರಿಸಾರಿಗೆ ಸಂಸಾರಮನ ವಿ || ಸ್ತಾರವಾಗದಂತೆ ಹಾರಿಸುದುರವ್ಯಾಪಾರ ಗುಣ ಪಾರಾವಾರಾ ||1|| ಮಾಡುವೆ ವಂದನೆ ಸತತ | ಸಜ್ಜನರೊಳ | ಗಾಡಿಸು ಭಕ್ತ ಪ್ರೀತಾ || ಪಾಡಿದವರ ಕಾ | ಪಾಡುವ ರತಿ-ಪತಿ | ಈಡಾರು ನಿನಗೇ ನಾಡಿನೊಳಗೆಲ್ಲ

ಸುಬ್ಬರಾಯ ಶುಭ ಕಾಯಾ Read More »

ಸೀತೆಯ ಭೂಮಿಜಾತೆಯ

ಸೀತೆಯ ಭೂಮಿಜಾತೆಯ ಜಗ-| ನ್ಮಾತೆಯ ಸ್ಮರಿಸಿ ವಿಖ್ಯಾತೆಯ ಕ್ಷೀರ ವಾರಿಧಿಯ ಕುಮಾರಿಯ ತನ್ನ | ಸೇರಿದವರ ಭಯಹಾರಿಯ || ತೋರುವಳು ಮುಕ್ತಿಹಾರಿಯ ಸರ್ವ | ಸಾರ ಸುಂದರ ಶ್ರೀನಾರಿಯ ||1|| ಈಶಕೋಟಿಯೊಳ್ ಗಣನೆಯ ಸ್ವಪ್ರ-| ಕಾಶವಾದ ಗುಣಶ್ರೇಣಿಯ || ಈಶಾದ್ಯರ ಪೆತ್ತ ಕರುಣಿಯ ನಿ-| ರ್ದೋಷ ವಾರಿಧಿಕಲ್ಯಾಣಿಯ||2|| ವಿಜಯವಿಠ್ಠಲನ್ನ ರಾಣಿಯ ಪಂ-| ಕಜಮಾಲೆ ಪಿಡಿದ ಪಾಣಿಯ || ವಿಜಯಲಕ್ಷ್ಮಿ ಗಜಗಮನೆಯ ನಿತ್ಯ | ಸುಜನವಂದಿತೆ ಅಹಿವೇಣಿಯ ||3||

ಸೀತೆಯ ಭೂಮಿಜಾತೆಯ Read More »

ಸಿಂಗನಾ ಏರಿದ ನರಸಿಂಗ ತೋಮರವ ಪಿಡಿದು

ಸಿಂಗನಾ ಏರಿದ ನರಸಿಂಗ ತೋಮರವ ಪಿಡಿದು | ರಂಗ ವೈಭೋಗದಿಂದ | ನಲಿದು ಚತು | ರಂಗ ಬೀದಿಯೊಳು ಮೆರೆದಾ ಮುತ್ತಿನ ಕಿರೀಟ ಮೇಲೆ ಎತ್ತಿದ ಸತ್ತಿಗೆ ಪೊಳೆಯ | ಸುತ್ತ ಮುತ್ತ ಬೊಮ್ಮಾದಿಗಳು | ವಾಹನ ರಥ | ಹತ್ತಿ ಬರುವ ಪುರದ ಜನಗಳು ||1|| ಸನಕಸನಂದನ ಸನತ್ಸುಜಾತ ಸನತ್ಕುಮಾರ | ಮುನಿವರರು ವೇದ ಘೋಷಣೆ ಉಚ್ಚರಿಸುತ್ತ | ಅನಿಮಿಷರಾಗಿ ಇಚ್ಚೈಸುತಾ ||2|| ಗಂಧರ್ವಾದಿ ಗಾಯನಾ ನಾರಂದನು ಪಾಡುತ್ತ ಬರೆ | ಇಂದು ಮೌಳಿ ಮುಂದೆ

ಸಿಂಗನಾ ಏರಿದ ನರಸಿಂಗ ತೋಮರವ ಪಿಡಿದು Read More »

ಸಾಲವ ಕೊಡದಿದ್ದರೆ ನಿನಗೆ

ಸಾಲವ ಕೊಡದಿದ್ದರೆ ನಿನಗೆ | ನಾಲಿಗೆಂಬೊದು ಇಲ್ಲೊ ಉತ್ತರಾಡುವುದಕ್ಕೆ ಏಸು ದಿವಸದಿಂದ ಎಲ್ಲರ ಸೇವಿಸಿ | ಕಾಸು ಕಾಸಿಗೆ ನಾನು ಕೂಡಹಾಕಿ | ಲೇಸು ಉಳ್ಳವನೆಂದು ಕೊಟ್ಟರೆ ನೀ ನಿಂತು | ಮೋಸಗೊಳಿಸುವರೆ ಕಾಣಿಸಿಕೊಳ್ಳಿದಲೆ ||1|| ಬಡ್ಡಿ ಏನಾಯಿತೊ ಕೊಟ್ಟ ಗಂಟಿಗೆ ನಿನ | ಗಡ್ಡ ಬೀಳುವೆನೊ ಸಾಲವ ತೀರಿಸೊ | ಖಡ್ಡಿ ಮಾನವನೆಂದು ನೋಡ ಸಲ್ಲಾ ಎನ್ನ | ದೊಡ್ಡವರು ಕಂಡರೆ ಅಡ್ಡಗೈಸದೆ ಬಿಡರು ||2|| ಗುಣಿಸಿ ನೋಡಿದರೆ ಏನಯ್ಯಾ ಮುತ್ತಯ್ಯಾ ಯಾ ಕೆ ನಿಲ್ಲದೆ

ಸಾಲವ ಕೊಡದಿದ್ದರೆ ನಿನಗೆ Read More »

ಸಾರಿ ಭಜಿಸಿರೋ ಟೀಕಾಚಾರ್ಯರಂಘ್ರಿಯಾ

ಸಾರಿ ಭಜಿಸಿರೋ ಟೀಕಾಚಾರ್ಯರಂಘ್ರಿಯಾ ಘೋರ ಪಾತಕಾಂಬುಧಿಯ ದೂರ ಮಾಳ್ಪರ ಮೋದತೀರ್ಥರ ಮತವ ಸಾಧಿಸುವರ | ಪಾದ ಸೇವ್ಯರ ದುರ್ಬೋಧ ಕಳೆವರ ||1|| ಭಾಷ್ಯತತ್ವ ಸುವಿಶೇಷ ಮಾಳ್ಪರ | ದೋಷ ದೂರರ ವಾಸವಾದಿ ರೂಪರ||2|| ಶ್ಯಾಮಸುಂದರ ಹರಿಗೆ ಪ್ರೇಮಪೂರ್ಣರ | ನೇಮನಿತ್ಯದ ನಿಷ್ಕಾಮನಾ ವರ ||3|| ಮೋಕ್ಷದಾತರ ಅಕ್ಷೋಭ್ಯತೀರ್ಥರ ಅ- | ಶಿಕ್ಷಿತಾದರ ಅಪೇಕ್ಷ ರಹಿತರ ||4|| ವಿಜಯವಿಠಲನ ಅಂಘ್ರಿ ಭಜನೆ ಮಾಳ್ಪರ | ಕುಜನ ಭಂಜರ ದಿಗ್ವಿಜಯ ರಾಯರ||5||

ಸಾರಿ ಭಜಿಸಿರೋ ಟೀಕಾಚಾರ್ಯರಂಘ್ರಿಯಾ Read More »

ಸಾಮಜ ವರದಗೆ

ಸಾಮಜ ವರದಗೆ ಮಾಮನೋಹರಗೆ ಕಾಮನ ಪಿತ ಶಾಮವರ್ಣ ಶ್ರೀಹರಿಗೆ ವಾಮದೇವನ ಸಖ ಸೋಮವದನ ಹರಿಗೆ ಕಾಮಿನಿ ಸತ್ಯಭಾಮ ಪತಿಗೆ ಹೊಸ ಹೇಮದಾರುತಿಯ ಬೆಳಗಿರೆ ||1|| ಲಕ್ಷ್ಮೀಯ ಅರಸಗೆ ಪಕ್ಷಿವಾಹನಗೆ ಮೋಕ್ಷದಾಯಕ ಪಾಂಡವ ಪಕ್ಷ ಶ್ರೀಹರಿಗೆ ವಕ್ಷಸ್ಥಳದಿ ಲಕ್ಷ್ಮೀಯ ಪೊರೆವ ಕುಕ್ಷಿವಳಗೆ ಜಗವ ರಕ್ಷಿಸುವ ಹರಿಗೆ ಲಕ್ಷದಾರತಿಯ ಬೆಳಗಿರೆ ||2|| ಆಗಮವೇದ್ಯಗೆ ಭೋಗಿ ಶಯನಗೆ ಬೇಗದಿಂದಲಿ ಭಕ್ತರ ಪೊರೆವಗೆ ವಾಗೀಶವಂದ್ಯ ಶ್ರೀ ಗುರು ವಿಜಯವಿಠ್ಠಲ ಮಂಗಳ ಮಹಿಮ ತುಂಗ ಚರಿತ ಹರಿಗೆ ಮಂಗಳಾರುತಿಯ ಬೆಳಗಿರೆ ||3||

ಸಾಮಜ ವರದಗೆ Read More »

ಸಾಧನಕ್ಕೆ ಬಗೆಗಾಣೆನೆನ್ನಬಹುದೆ

ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ಗುರುಕರುಣ ತಾ ಪಡೆದ ಬಳಿಕ ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ ಹಿಂಡು ಮಾತುಗಳೆಲ್ಲ ಹರಿಯ ನಾಮ ||1|| ವಾಗತ್ಯಪಡುವದೆ ವಿಧಿನಿಷೇಧಾರಚರಣೆ ರೋಗಾನುಭವವೆಲ್ಲ ಉಗ್ರತಪವು ಆಗದವರಾಡಿಕೊಂಬುವುದೆ ಆರ್ಶೀವಾದ ಬೀಗುರುಪಚಾರವೇ ಭೂತದಯವು ||2|| ಮೈಮರೆತು ಮಲಗುವುದೆ ಧರಣಿ ನಮಸ್ಕಾರ ಕೈಮೀರಿ ಹೋದದ್ದೆ ಕೃಷ್ಣಾರ್ಪಣ ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ ಹೋಯ್ಯಾಲಿತನವೆಲ್ಲ ಹರಿಯ ವಿಹಾರ ||3|| ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ ನಡೆದಾಡುವೋದೆಲ್ಲ ತೀರ್ಥಯಾತ್ರೆ ಬಡತನವು

ಸಾಧನಕ್ಕೆ ಬಗೆಗಾಣೆನೆನ್ನಬಹುದೆ Read More »

ಸಾಗಿ ಬಾರೈಯ ನೀನು

ಸಾಗಿ ಬಾರೈಯ ನೀನು, ಗೋವಿಂದ ವೆಂಕಟ ಸಾಗಿಬಾರೈಯ ಭವರೋಗದ ವೈದ್ಯನೆ ಬಾಗಿ ನಿನಗೆ ಚೆನ್ನಾಗಿ ತುತಿಪೆ ನಿಂದು ಭಾಗೀರಥಿಪಿತ ಭಾಗವತರ ಸಂ ಯೋಗರಂಗ ಉರಗಗಿರಿ ವೆಂಕಟ ರಥದ ಮಧ್ಯದಲಿಪ್ಪನೆ ರಥಾಂಡಜ ವಾಹನನೆ ರಥಾಂಗಪಾಣಿಯೆ ದಶರಥ ನೃಪಬಾಲ ಪಾರ್ಥಗೆ ಒಲಿದವನ ರಥವ ನಡಿಸಿ ಅತಿ- ರಥ ಮಹರಥರ ವಿರಥರ ಮಾಡಿ ಗೆಲಿಸಿದೆ ಪ್ರಥಮ ದೈವವೆ ಮನ್ಮಥಪಿತ ದೈತ್ಯರ- ಮಥನ ಭಕ್ತರ ಮನೋರಥನೆ ತಾರಾ- ಪಥವರ್ಣನೆ ತವ ಕಥಾಶ್ರವಣದಲಿ ಸು- ಪಥವನು ತೋರಿಸು ಪ್ರಥಮಾಂಗದೊಡೆಯ ||1|| ನಿಲ್ಲದೆ ಬರುವುದು ಪುಲ್ಲಲೋಚನೆ

ಸಾಗಿ ಬಾರೈಯ ನೀನು Read More »

ಸಾಕೇತಪುರ ವಾಸಿ ಕಪಟವೇಷ

ಸಾಕೇತಪುರ ವಾಸಿ ಕಪಟವೇಷ | ಶ್ರೀಕಮಲನಾಭನ ನಖದಲಿ ಕಾಶೀ ವಿಶ್ವತೋಮುಖ ಬ್ರಹ್ಮ ವಿಶ್ವತೋಚಕ್ಷು | ವಿಶ್ವ ವಿಶ್ವಬಾಹು ವಿಶ್ವರೂಪ ರೂಪ || ವಿಶ್ವ ಬ್ರಹ್ಮಾಂಡ ಆಧಾರ ಕಾರಣ | ವಿಶ್ವೇಶ್ವರ ಪ್ರಾಣ ಮಂತ್ರ ರಾಮ ರಾಮ ||1|| ಮಸ್ತಕಾಂಗುಟ ಪರಿಯಂತ ರೋಮಕೂಪ | ವಿಸ್ತಾರ ಮಹಿಮ ಅಗಣಿತ ಕಮಲಜ | ಹಸ್ತಿ ಚರ್ಮಾಂಬರರು ಇದ್ದು ನೆಲೆಗಾಣರು | ನಾಸ್ತಿ ವಿಷ್ಣು ಪರದೈವ ಇಹಪರದಲಿ||2|| ಕಷ್ಟವಿಲ್ಲದೆ ಮಕ್ಕಳಾಟಕೆ ತ್ವರದಿಂದ ಸೃಷ್ಟಿಸುವ ಕಣ್ಣು ಎವೆ ಹಾಕುವ || ಅಷ್ಟರೊಳನೇಕ ಬ್ರಹ್ಮಾಂಡ

ಸಾಕೇತಪುರ ವಾಸಿ ಕಪಟವೇಷ Read More »

ಸಾಕು ಇಹಕೆನ್ನ ನೂಕದಿರು ತಂದೆ

ಸಾಕು ಇಹಕೆನ್ನ ನೂಕದಿರು ತಂದೆ ವಾಕು ಕೇಳು ಪರಾಕು ಮಾಡದೆ ಸಾಕು ದಯದಿಂದನೇಕ ಮಹಿಮನೆ ಏಕಾಮೇವಾದ್ವಿತೀಯ ಮಂಗಳಾಂಗ ಮಾತಂಗವರದ ವಿ- ಹಂಗಗಮನ ಭುಜಂಗಶಯನ ತು- ರಂಗವದನ ಶುಭಾಂಗ ರಿಪುಕುಲ- ಭಂಗ ಅಸಿತಾಂಗ ಅ.ಪ. ಶೃಂಗಾರಾಂಬುಧಿ ರಂಗ ನಿನ್ನಯ ಅಂಗಸಂಗಕ್ಕೆ ಅಂಗೀಕರಿಸಿದ ಸಂಗಿತರ ಚರಣಂಗಳಬ್ಜಕೆ ಭೃಂಗನಪ್ಪೆನೆಂತೊ ||1|| ಮಾನವಾವುದು ಸುಮ್ಮನಿರೆ ಪವ- ಮಾನವಂದಿತ ನಿನ್ನ ಪೋಲ್ವ ಸ- ಮಾನರಾರನು ಕಾಣೆ ಎನ್ನಭಿ- ಮಾನದ ದೊರೆಯೆ ಮಾನವಾಧೀಶ ಮಾನವಮಾನ- ಮಾನದಿಂದ ಕ್ರಮಾನುಸಾರನು ಮಾನಗೊಳಿಸದೆ ಮಾನವಿತ್ತು ದು- ಮ್ಮಾನವನೆ ಬಿಡಿಸೊ ||2||

ಸಾಕು ಇಹಕೆನ್ನ ನೂಕದಿರು ತಂದೆ Read More »

ಸವಿದುಣ್ಣ ಬಾರಯ್ಯ

ಸವಿದುಣ್ಣ ಬಾರಯ್ಯ ಸಾರಾಭೋಕ್ತಾ ಪವನಾಂತರ್ಗತ ಕಪಿಲಾತ್ಮ ನರಸಿಂಗಾ ಉಪ್ಪು ಉಪ್ಪಿನಕಾಯಿ ಪತ್ರ ಶಾಖ ಸೂಪ ಒಪ್ಪುವ ಸಂಡಿಗೆ ವ್ಯಂಜನಗಳು ಇಪ್ಪವು ನಿರುಋತಿ ಪ್ರಾಣ ಮಿತ್ರ ಶೇಷ ಸರ್ಪವೈರಿ ದಕ್ಷ ಲೋಕೇಶನಲ್ಲಿಗೆ ||1|| ಅನ್ನ ಮಂಡಿಗೆ ತೈಲ ಪಕ್ವಂಗಳು ಪರ ಮಾನ್ನ ಭಕ್ಷ ತುಪ್ಪ ಹುಳಿ ಪದಾರ್ಥ ಮುನ್ನೆ ಚಂದ್ರ ಬೊಮ್ಮ ಜಯಂತರೈ ಸೂರ್ಯ ಕನ್ಯ ಲಕುಮಿದೇವಿ ಪರ್ವತ ಸುತಿ ಇರೆ||2|| ಕ್ಷೀರ ನವನೀತಧಿಕಾರಣಾಮ್ಲ ಚಾರು ಉದ್ದಿನ ಭಕ್ಷ ಕಟು ದ್ರವ್ಯ ಪಾ ವಾರಿಜಾಸನ ರಾಣಿ ವಾಯು ಸೋಮ

ಸವಿದುಣ್ಣ ಬಾರಯ್ಯ Read More »

ಸಲ್ಲದೋ ಎಲೋ ಮಾಯಿ ಸಲ್ಲದೊ

ಸಲ್ಲದೋ ಎಲೋ ಮಾಯಿ ಸಲ್ಲದೊ ಎಲೊ ಮಾಯಿ ಎಲ್ಲಾ ಒಂದೆಂಬೋದು ಸೊಲ್ಲನಾಡಲು ಯಮ ಕೊಲ್ಲದಲೆ ಬಿಡಾ ಉಕ್ಕಿನ ಮಳಿಯ ರೋಮರೋಮದಲಿ ಬಡಿದು ಬೆಸಸಿ ಸದಾ ಗಂಡುತಗಲಿ ಗಟ್ಟಿ ಪಕ್ಕಿಯ ತಿವಿದು ಪಾಶದಲಿ ಬಿಗಿದು ಕಾ ಲಿಕ್ಕಿ ನೆಲಕೆ ವರಿಸಿ ಕೆಂಪಗೆ ಕಾಸಿ ಇಕ್ಕಳದಲಿ ಉಚ್ಚಿ ಕರುಳು ಬೈಲಿಗೆ ಹಾಕಿ ಪೊಕ್ಕಳಿಗೆ ತೇಳಾರು ಪೊಗಿಸಿ ಕಟ್ಟಿ ಡೊಕ್ಕಿಯ ಸೀಳುವರು ಕರ ಹೊಯಿದು ನಕ್ಕು ಯಮದೂತರು ನಿನ್ನ ಬಾಧಿಪರು ||1|| ನಿನ್ನ ಕಾಲಲಿ ಒದ್ದೊದ್ದು ಹೆಡಗುಡಿಯನು ಕಟ್ಟಿ ಗಾರ್ಧಭದ ಲದ್ದಿಯೊಳಡಿಗಿಸಿ

ಸಲ್ಲದೋ ಎಲೋ ಮಾಯಿ ಸಲ್ಲದೊ Read More »

ಸಲ್ಲದೊ ಸಲ್ಲದೊ ಸರ್ವರು ಕೇಳಿ ನಮ್ಮ

ಸಲ್ಲದೊ ಸಲ್ಲದೊ ಸರ್ವರು ಕೇಳಿ ನಮ್ಮ ಪುಲ್ಲನಾಭನ ಬಿಟ್ಟು ಖುಲ್ಲದೇವರ ಪೂಜೆ ಮಾರಿ ಮಸಣಿ ಜೆಟ್ಟೆ ಜೆಟ್ಟಿಂಗ ಭೇತಾಳ ವರ ಪೋತರಾಜಾ ಬೊಮ್ಮೆಯನು ಬೀರೆದೇವರು ಹಾದಿಬೀದಿಯ ಬಸವಣ್ಣ ಚಾರುದೈವ ಉಚ್ಚಾರವಲ್ಲದೆ ಹೊಲ್ಲಾ ||1|| ಯಲ್ಲಮ್ಮಾ ಯಕನಾತಿ ಅಡವಿಯ ಗಿಡದಮ್ಮ ಹಳ್ಳದ ತೀರದ ಹಾಳದೇವಿ ಅಮ್ಮ ಜಲದೇವಿ ಜಕ್ಕಮ್ಮನೆಂತೆನಲು ಸೊಲ್ಲು ಬರಿದೆ ವ್ಯರ್ಥವಲ್ಲದೆ ಫಲವಿಲ್ಲ ||2|| ಬನದಶಂಕರಿ ಕುಳ್ಳಹಟ್ಟಿಗೆ ಕರಿಮಾತೆ ವನಶಕ್ತಿ ಚವಡಮ್ಮ ಜವನಿಕೆ ಬಿನಗ್ಯ ಮಾಳಾದೇವಿ ಮಾಳಿಗೆ ಹಿರಿಯಕ್ಕ ಘನ ಪಿಶಾಚಿಗಳಿಂದ ಒಂದಿಷ್ಟು ಸುಖವಿಲ್ಲ ||3|| ಖಂಡೇರಾಯ

ಸಲ್ಲದೊ ಸಲ್ಲದೊ ಸರ್ವರು ಕೇಳಿ ನಮ್ಮ Read More »

ಸಲಹೊ ಸಾತ್ತ್ವಿಕ ದೈವವೆ

ಸಲಹೊ ಸಾತ್ತ್ವಿಕ ದೈವವೆ ಕಾಗಿನೆಲೆಯಾದಿ ಕೇಶವ ನೀಲದ ವರ್ಣ ಆದಿಕೇಶವಾ ಕನಕ ಕಾಮಿನಿ ಕುಂಭಿಣಿಯಿಂದ ಬರುವ ಚಿಂತೆ | ಕನಸಿನೊಳಗಾದರೂ ದೂರಾಗಲಿ | ಕನಕೋದರಗೆ ಸಾಮ್ಯವಾದ ಜೀವನದಲ್ಲಿ | ಕನಲದೆ ಭಕುತಿ ಇರಲಿ ಎಂದೆಂದಿಗೆ | ಮನವು ನಿನ್ನಾಧೀನ ದೇವರದೇವ ||1|| ಕನಕ ನಯನ ಮಯನ ಕಂಡವರಿಗೆ ಜ್ಞಾನ | ಕನಕವರುಷವ ಕÀರೆವ ವಾಸುದೇವಾ | ಕನಕಕೇಶಪ್ರಿಯ ಕಾಮಿತಫಲದಾಯಕ | ಕನಕ ಪರ್ವತದಿಂದ ಬಂದ ಗೋವಿಂದ ವ | ಚನವೇ ನಿನ್ನಾಧೀನವೋ ದೇವರ ದೇವ ||2|| ಕನಕ

ಸಲಹೊ ಸಾತ್ತ್ವಿಕ ದೈವವೆ Read More »

ಸರಸೀರುಹಾಕ್ಷ ಕೃಷ್ಣನ

ಪ್ರಥಮ ವಚನ ಸರಸೀರುಹಾಕ್ಷ ಕೃಷ್ಣನ | ಚರಣ ಅರುಣಾರ್ಣವ ಕಾಂತಿಯಿಂದಿರುವ | ಪರಮ ಸುಂದರ ರೇಖೆ ಧ್ವಜ ವಜ್ರಾಂಕುಶ ಶಂಖ | ಚಕ್ರ ಪದುಮ ಗದೆ | ವರಚಿಹ್ನೆಯಿಂದಿರುವ | ಕಿರಿಗೆಜ್ಜೆಗಳ ಛಾಯ ಅದರೊಳಗೆ ಬಿದ್ದಿರುವ ಪರಮಪವಿತ್ರ ತ್ಯುಬುಗಳ ತೆಗೆದು | ನೇತ್ರದೊಳಗೊತ್ತಿ | ಪರಿಮಳವಾದ ಗಂಧಗಳಿಂದ ಅಲಂಕೃತ | ಸಿರಿದೇವಿ ವರದೊಡೆಯ ಮೇಲಿದ್ದು | ಕರಕಮಲದಲೊತ್ತುವ | ಚರಣ ದರುಶನವೆನಗಾಯಿತು ಇಂದಿನ ದಿನವೆ ಪರಮ ಪುಣ್ಯೋದಯ ವಿತ್ರತರ ಗಂಗೆ ಮೊದಲಾದ ನದಿಗಳು ಜನಿಸಿಹ ಪಾದ |

ಸರಸೀರುಹಾಕ್ಷ ಕೃಷ್ಣನ Read More »

ಸತ್ಯವತಿಸೂನು ವೇದವ್ಯಾಸ ಲಕುಮಿಶಾ

ಸತ್ಯವತಿಸೂನು ವೇದವ್ಯಾಸ ಲಕುಮಿಶಾ | ನಿತ್ಯ ನಿನ್ನ ನೆನೆಸುವ ಭೃತ್ಯರೊಡನೆ ಪೊಂದಿಸು ದೇವ ಮೊದಲು ಸರ್ಪ ವಾಸುಕಿ ಇಲ್ಲಿ ಮದನಾರಿಯ ವಲಿಸಿ | ತನ್ನ ಬದುಕುವಗೋಸುಗ ಉಪಾಯದಲಿ ನಿಂದರೆ | ಅದರ ತರುವಾಯ ಸ್ಕಂದ ತ್ರಿದಶ ವೈರಿ ತಾರಕನ್ನ ಸದೆದು | ಇಂದ್ರಾದ್ಯರ ಕೂಡ ಮುದದಿಂದ ಸ್ಥಿರವಾಗಿ ಮೆರೆದ ||1|| ಷಣ್ಮೊಗನು ಸತತ ತಾನು ಅನ್ನದಾನ ಮಾಡುತ ಹಾ | ವನ್ನನಾಗುದಕ್ಕೆ ಪ್ರಸನ್ನ ಮೋದದಲಿ | ನಿನ್ನ ಪೊಲಿಸಿಲ್ಲಿಗೆ ಬಾಹಾ | ದೆನ್ನ ಭಕುತಿಗೆ ಮೆಚ್ಚಿ |

ಸತ್ಯವತಿಸೂನು ವೇದವ್ಯಾಸ ಲಕುಮಿಶಾ Read More »

ಸತ್ಯಪ್ರಿಯ ಗುರುರಾಯ

ಸತ್ಯಪ್ರಿಯ ಗುರುರಾಯ ಮಂಗಳಕಾಯ ನಿತ್ಯದಲಿ ನಿಜ ಭೃತ್ಯ ಸಹಾಯ ಪ ಮಧ್ವಮತಾಬ್ಧಿ ಚಂದ್ರ ಸದ್ಗುಣಸಾಂದ್ರ ಅದ್ವೈತಮದ್ರಿ ಇಂದ್ರ ಇದ್ಧರಿಯೊಳಗನಿ ರುದ್ಧನೆ ವರನೆಂದೆದ್ದು ನೆಗಹಿ ಕರ ಬದ್ಧ ಕಂಕಣರಾಗಿ ಸಿದ್ಧ ಪ್ರಮೇಯಗಳನುದ್ಧರಿಸಿದ ಪರಿಶುದ್ಧ ಸ್ಮರ ಮಾರ್ಗಣ ಗೆದ್ದ ||1|| ವಿತರಣದಲಿ ಬಲು ಶೂರಾ ಕೀರ್ತಿವಿಹಾರಾ ಸತತ ವೇದಾರ್ಥ ವಿಚಾರ ಮಿತಿ ಇಲ್ಲದೇ ಆ ಕಥಾಮೃತ ತತುವ ಮಾರ್ಗದಲಿ ವ ಹಿತ ಶಿಷ್ಯರಿಗೆ ನಗುತ ಪೇಳಿದ ದ್ಭುತ ಮಹಿಮಾ ಸಂಚರಿಸುತ ಆನಂದ ಭರಿತ ||2|| ನೆನೆಸಿದವರ ಸುರಧೇನು ನಿನಗೆಲ್ಲಿ ನಾನು

ಸತ್ಯಪ್ರಿಯ ಗುರುರಾಯ Read More »

ಸಕಲ ಕಾಲದಿ ಮಾಡಿದ ಕರ್ಮವು

ಸಕಲ ಕಾಲದಿ ಮಾಡಿದ ಕರ್ಮವು | ಭಕುತಿಯಿಂದಲಿ ಬಂದರ್ಪಿತವೆನ್ನಿ ಉಡುಪಿಯಲಿ ಯಾತ್ರೆಗಳ ಮಾಡಲಿ ತೀರ್ಥಗಳ ಮೀಯಲಿ | ಸ್ತೋತ್ರಗಳ ಮಾಡಲಿ ಕೊಂಡಾಡಲಿ || ನೇತ್ರದಲಿ ನೋಡಿ ಕರಮುಗಿದು ನಮಸ್ಕರಿಸಲಿ ಹೋತ್ರವನು ಮಾಡಿ ಹಿತವಾಗಿ ನುಡಿಯಲಿ ||1|| ದಾನವನು ಮಾಡಲಿ ದಾಕ್ಷಿಣ್ಯವಾಗಲಿ | ಮೌನವನು ಮಾಡಲಿ ಮಾತಾಡಲಿ || ಕಾನನವ ಸೇರಲಿ ಕಂಡಲ್ಲಿ ತಿರುಗಲಿ | ಏನೇನು ಚರಿತೆಗಳ ಮಾಡುತಿರಲಿ ||2|| ಪುಣ್ಯವಾದರು ಲೇಸೆ ಪಾಪವಾದರು ಹರಿ | ಮನ್ನಿಸಿ ತಾನೀಗ ತೆಗೆದುಕೊಂಡು || ತನ್ನ ಸಮೀಪದಿ ಇಟ್ಟುಕೊಂಡು

ಸಕಲ ಕಾಲದಿ ಮಾಡಿದ ಕರ್ಮವು Read More »

ಸಂಪತ್ತು ನಿನಗಿಂದು ಪೊಸದಾಯಿತೆ

ಸಂಪತ್ತು ನಿನಗಿಂದು ಪೊಸದಾಯಿತೆ ಸಿಂಪಿನಲಿ ಪಾಲುಗುಡಿದದು ಮರದಿಯಾ ರಂಗ ಪಾಲು ಮೊಸರು ಕದ್ದು ಗೋವಳರೆಂಜಲನುಂಡು | ತಾಳ ಫಲಗಳ ಮೆದ್ದದು ಮರದಿಯಾ || ಕಾಲ ಕಾಲಕೆ ಇಲ್ಲಿ ಷಡುರಸಾಯನ ಸವಿದು | ಮೇಲಾಗಿ ಪೊಟ್ಟೆಯೆ ಪೊರೆವ ಅತಿಶಯವೇನು ||1|| ಕಂಡವರ ಕೈಯ್ಯ ಪಳ್ಳಿಯಲಿ ಹಳ ಹಳ ಎನಿಸಿ | ಕೊಂಡು ಭಂಡಾಗಿ ಇದ್ದದು ಮರದಿಯಾ || ತಂಡ ತಂಡದಲಿಪ್ಪ ವೈಭೋಗ ವಾಹನ | ತೋಂಡರು ಕರ ಮುಗಿದು ಕೊಂಡಾಡುವ ಭರವೊ ||2|| ಮತಿಹೀನ ಖಳಗಂಜಿ ವನಧಿಯೊಳಗೆ ದ್ವಾರ

ಸಂಪತ್ತು ನಿನಗಿಂದು ಪೊಸದಾಯಿತೆ Read More »

ಸಂತರನ ಸ್ಮರಿಸಿ ಜನರು

ಸಂತರನ ಸ್ಮರಿಸಿ ಜನರು ಸಂತರನ ಸ್ಮರಿಸಿ ಜನ ನಿಂತಲ್ಲಿ ಕುಳಿತಲ್ಲಿ ಇಂತೆಂತು ಸದ್ಧರ್ಮ ಚರಿಸುವ ಕಾಲಕ್ಕೆ ಅಂತರಂಗದಲಿದ್ದು ಚಿಂತೆಯನು ಬಿಟ್ಟು ಸಿರಿ ಕುಂತುಪಿತನೊಲಿಮೆಯಿಂದ ವ್ಯಾಸ ಶಿಷ್ಯರಾದ ಗುರುಮಧ್ವ ಮುನಿರಾಯ ಲೇಸು ಪಂಕಜನಾಭ ನರಹರಿ ಮಾಧವ ಮು ನೇಶ ಅಕ್ಷೋಭ್ಯ ಜಯರಾಯ ವಿದ್ಯಾಧಿರಾಜ ಪೋಷಿತ ಕವೇಂದ್ರತೀರ್ಥರಾ ನ್ಯಾಶಿ ವಾಗೀಶ ಯತಿ ರಾಮಚಂದ್ರ ನಂದ ಭಾಸುರ ವಿದ್ಯಾನಿಧಿ ರಘುನಾಥ ರಘುವರ್ಯ ಭೂಷಣ ಮತಕೆ ರಘೋತ್ತಮ ನಿಧಿವೇದ ವ್ಯಾಸ ವಿದ್ಯಾಧೀಶರೂ ||1|| ವೇದಮುನಿ ಸತ್ಯವ್ರತ ಸತ್ಯನಿಧಿ ರಾಯ ಬೋಧ ಮೂರುತಿ ಸತ್ಯನಾಥ

ಸಂತರನ ಸ್ಮರಿಸಿ ಜನರು Read More »

ಶ್ರೀಶ ವೇದವ್ಯಾಸನಾದನು

ಶ್ರೀಶ ವೇದವ್ಯಾಸನಾದನು ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಸಾಸಿರ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ವಪ್ಪದಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ ||1|| ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ-

ಶ್ರೀಶ ವೇದವ್ಯಾಸನಾದನು Read More »

ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು

ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು ವಾಸವ ವಂದಿತ ವಾತಜ ಸೇವಿತ ವಾಸುಕಿಶಯನನು ವಾರೆ ಸುನೋಟದಿ ಬೆರಳ ಸಂದಿಲಿ ಮುರಳಿ ಪಿಡಿದು, ಮುರಾರಿ ತಾನು ಹರುಷದಿಂದಲಿ ಸ್ವರವ ನುಡಿದು, ವಾರಿಜನೇತ್ರ ಅರಳು ಮಲ್ಲಿಗೆ ಸರಗಳ ಮುಡಿದು ಕೊರಳ ಪದಕ ಹಾರ ಕೌಸ್ತುಭ ಶೋಭಿತ ಮರುಳು ಮಾಡುತ ಮಡದಿಯೆಲ್ಲರ ||1|| ಗೌರಿ ಗಾಂಧಾರಿ ಗೌಳಪಂತು ಗೌರೀಶ ಭೂಷಣ ಶೌರೀ ಸಾರಂಗ ಮೋಹನವಿಂತು ಸಾವೇರಿ ಸುರುಟಿ ಭೈರವಿ ಬ್ಯಾಗಡೆ ಊದುತ ನಿಂತು ಮಾರಜನಕ ತಾನಾನಂದದಿಂದಲಿ ವೀರ ಶ್ರೀ ಕೃಷ್ಣನು ವಿಧವಿಧ ರಾಗದಿ||2|| ನಾರದ

ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು Read More »