ಶ್ರೀರಾಮಕೃಷ್ಣಂ ಶಿರಸಾ

ಶ್ರೀರಾಮಕೃಷ್ಣಂ ಶಿರಸಾ ನಮಾಮಿ ಮಮ ರಾಮಕೃಷ್ಣಂ ಮನಸಾ ಸ್ಮರಾಮಿ || ದೀನಮಂದಾರಂ ದಾರಿದ್ರ್ಯಹರಣಂ ಜಗದೀಶ ಧೀರಂ ಚರಣಾರವಿಂದಂ || ವೇದಾಂತವೇದ್ಯಂ ವಿಜ್ಞಾನಬೋಧಂ ಕಮನೀಯ ಗಾತ್ರಂ ವೈರಾಗ್ಯನಿಲಯಂ || ತವ ಸೌಮ್ಯರೂಪಂ ಮೋಕ್ಷಸ್ವರೂಪಂ ತವ ನಾಮಗಾನಂ ಮಧುರಾತಿ ಮಧುರಂ || ಪುರಾಣ ಪುರುಷಂ ಪರಮಾತ್ಮರೂಪಂ ರಾಗಾದಿರಹಿತಂ ಶಾಂತ ಸ್ವರೂಪಂ || ಬ್ರಹ್ಮಾದಿವಿನುತಂ ಭವಮುಕ್ತಿಹೇತುಂ ಪ್ರತ್ಯಕ್ಷ ದೈವಂ ಶ್ರೇμÁ್ಠವತಾರಂ || ವಂದೇ ಭವೇಶಂ ಭವರೋಗವೈದ್ಯಂ ತಮೇವ ವಂದೇ ಭುವಿರಾಮಕೃಷ್ಣಂ ||

ಶ್ರೀರಾಮಕೃಷ್ಣಂ ಶಿರಸಾ Read More »

ಶ್ರೀ ವಿವೇಕಾನಂದ ಗುರುವರ

ಶ್ರೀ ವಿವೇಕಾನಂದ ಗುರುವರ ನವಯುಗಾಚಾರ್ಯ ರಾಮಕೃಷ್ಣರ ಭೀಮಶಿಷ್ಯನೆ, ವೀರವೇದಾಂತಿ ಭಾರತಾಂಬೆಯ ಧೀರಪುತ್ರನೆ, ಸಾಧುಭೈರವನೆ ಸ್ಥೈರ್ಯದಚಲವೆ, ಧೈರ್ಯದಂಬುಧಿ, ಜಯತು ಜಯ ಜಯತು || ಚಿದ್‍ಋತಾಗ್ನಿಯ ಚಂಡಕಾಂತಿಯೆ, ಮೇರುಸಂನ್ಯಾಸಿ ಭರತಖಂಡದ ನಂದಿದಿದ್ದಲಿಗಿತ್ತೆ ತೇಜವನು ಬೊಮ್ಮದಂಬುಧಿಗಲೆಯನೀಯುವ ಭರದ ಬಿರುಗಾಳಿ ಬೂದಿಮುಚ್ಚಿದ ಭರತಭೂಮಿಯನೂದಿ ಬೆಳಗಿಸಿದೆ || ಭರತಖಂಡದೊಳರಚುತಲೆಯುವ ಮನುಜಕುರಿಗಳಿಗೆ ಸಿಂಹಹೃದಯವನಿತ್ತು ಗರ್ಜಿಸುವಂತೆ ನೀ ಮಾಡಿ ಕುರಿಯದೊಡ್ಡಿಯ ಮುರಿದು ಸಿಂಹದ ಗುಹೆಯ ವಿರಚಿಸಿದೆ, ಸಿಂಹಹೃದಯನೆ, ಶ್ರೀ ವಿವೇಕಾನಂದಯೋಗೀಂದ್ರ || ನಿಶೆಯ ಗಗನದೊಳಿರುವ ತಾರೆಯ ತೆರದಿ ರಂಜಿಸಿದೆ ಜಗದ ಕಂಗಳು ನೋಡಲಾರದೆ ನಿನ್ನ ತೇಜವನು ವಿಸ್ಮಯಾಶ್ಚರ್ಯದಲಿ

ಶ್ರೀ ವಿವೇಕಾನಂದ ಗುರುವರ Read More »

ಶ್ರೀಶಾರದಾದೇವಿ ಹೇ ಮಹಾಮಾತೆ

ಶ್ರೀಶಾರದಾದೇವಿ ಹೇ ಮಹಾಮಾತೆ ಶ್ರೀರಾಮಕೃಷ್ಣ ಗುರುದೇವ ಸಂಪ್ರೀತೆ | ಪರಮಪಾವನಹೃದಯೆ ಕಲಿಯುಗದ ಸೀತೆ ಭಕ್ತಿಯಿಂದಾರಾಧಿಪೆವು ನಿನ್ನನಮ್ಮ ಗಗನದಂತಿಹುದಮ್ಮ ನಿನ್ನ ಗಾಂಭೀರ್ಯ ನಿನ್ನ ತೇಜದ ಭಾಗವೀ ನಮ್ಮ ಸೂರ್ಯ | ನೀ ಕಾಳಿ ನೀ ಲಕ್ಷ್ಮಿ ನೀ ಬಿಜ್ಜೆಯಮ್ಮ ಮಕ್ಕಳಾಗಿಹ ನಮ್ಮ ಪೊರೆ ಶಕ್ತಿಯಮ್ಮ || ಮಹಿಮೆ ಮಹಿಮೆಯನರಿವುದೆಂದೆಂಬರಮ್ಮ | ಗುರುವರ್ಯನಂ ತಿಳಿದ ನೀ ಮಹಿಮಳಮ್ಮಪತಿಭಕ್ತಿಯದೆ ಮುಕ್ತಿ ನಿನಗಾಯಿತಮ್ಮ ಪರಶಕ್ತಿ ನೀನಮ್ಮ ನಮ್ಮ ಸಲಹಮ್ಮ || ನಿನ್ನ ನಾಮವೆ ಜನನಿ ಸುರನದಿಯ ತೀರ್ಥ | ಎಲೆ ತಾಯೆ, ನೀನೇ

ಶ್ರೀಶಾರದಾದೇವಿ ಹೇ ಮಹಾಮಾತೆ Read More »

ಶ್ರೀ ರಾಮನಾಮ-ಸಂಕೀರ್ತನಮ್

ಶ್ರೀನಾಥೇ ಜಾನಕೀನಾಥೇ ಅಭೇದಃ ಪರಮಾತ್ಮನಿ | ತಥಾಪಿ ಮಮ ಸರ್ವಸ್ವಂ ರಾಮಃ ಕಮಲಲೋಚನಃ || ಓಂ ಶ್ರೀರಾಮಚಂದ್ರಾಯ ನಮಃ || ಸ್ತವಃ ವರ್ಣಾನಾಮರ್ಥಸಂಘಾನಾಂ, ರಸಾನಾಂ ಛಂದಸಾಮಪಿ| ಮಂಗಲಾನಾಂ ಚ ಕರ್ತಾರೌ, ವಂದೇ ವಾಣೀವಿನಾಯಕೌ ||1|| *ಭವಾನೀಶಂಕರೌ ವಂದೇ, ಶ್ರದ್ಧಾವಿಶ್ವಾಸರೂಪಿಣೌ | ಯಾಭ್ಯಾಂ ವಿನಾ ನ ಪಶ್ಯಂತಿ, ಸಿದ್ಧಾಃ ಸ್ವಾಂತಸ್ಸ್ಥಮೀಶ್ವರಮ್ || ವಂದೇ ಬೋಧಮಯಂ ನಿತ್ಯಂ, ಗುರುಂ ಶಂಕರರೂಪಿಣಮ್ | ಯಮಾಶ್ರಿತೋ ಹಿ ವಕ್ರೋಪಿ, ಚಂದ್ರಃ ಸರ್ವತ್ರ ವಂದ್ಯತೇ|| ಸೀತಾರಾಮಾಗುಣಗ್ರಾಮ, ಪುಣ್ಯಾರಣ್ಯವಿಹಾರಿಣೌ | ವಂದೇ ವಿಶುದ್ಧವಿಜ್ಞಾನೌ, ಕವೀಶ್ವರಕಪೀಶ್ವರೌ ||

ಶ್ರೀ ರಾಮನಾಮ-ಸಂಕೀರ್ತನಮ್ Read More »

ಶಿವಶಿವಾ, ಶ್ರೀಗುರುಲಿಂಗಯ್ಯದೇವರು ತನ್ನ ಕರಸ್ಥಲವ ತಂದು

ಶಿವಶಿವಾ, ಶ್ರೀಗುರುಲಿಂಗಯ್ಯದೇವರು ತನ್ನ ಕರಸ್ಥಲವ ತಂದು ಎನ್ನ ಶಿರಸ್ಥಲದ ಮೇಲಿರಿಸಿದ ಬಳಿಕ ಎನ್ನ ಭವಂ ನಾಸ್ತಿಯಾಯಿತ್ತು. ಎನ್ನ ತನ್ನಂತೆ ಮಾಡಿದ, ತನ್ನ ಎನ್ನಂತೆ ಮಾಡಿದ ; ಎನ್ನಲ್ಲಿ ತನ್ನಲ್ಲಿ ತೆರಹಿಲ್ಲದೆ ಮನಕ್ಕೆ ತೋರಿದ. ತನ್ನ ಕರಸ್ಥಲದೊಳಗಿದ್ದ ಶಿವಲಿಂಗದೇವರನು ಎನ್ನ ಕರಸ್ಥಲದೊಳಗೆ ಮೂರ್ತಿಗೊಳಿಸಿದ. ಎನ್ನ ಕರಸ್ಥಲದೊಳಗಿದ್ದ ಶಿವಲಿಂಗದೇವರನು ಎನ್ನ ತನುವಿನ ಮೇಲೆ ಮೂರ್ತಿಗೊಳಿಸಿದ. ಎನ್ನ ತನುವಿನ ಮೇಲಣ ಶಿವಲಿಂಗದೇವರನು ಎನ್ನ ಮನವೆಂಬ ಮಂಟಪದೊಳಗೆ ಮೂರ್ತಿಗೊಳಿಸದ. ಎನ್ನ ಮನವೆಂಬ ಮಂಟಪದೊಳಗೆ ಮೂರ್ತಿಗೊಳಿಸಿದ ಶಿವಲಿಂಗದೇವರನು ಎನ್ನ e್ಞನವೆಂಬ ಮಂಟಪದೊಳಗೆ ಮೂರ್ತಿಗೊಳಿಸಿದ. ಎನ್ನ

ಶಿವಶಿವಾ, ಶ್ರೀಗುರುಲಿಂಗಯ್ಯದೇವರು ತನ್ನ ಕರಸ್ಥಲವ ತಂದು Read More »

ಶಿವಶಿವಾ, ಕರ್ಮಕ್ಷಯವಾದಲ್ಲಿ

ಶಿವಶಿವಾ, ಕರ್ಮಕ್ಷಯವಾದಲ್ಲಿ ಕರ್ಮದ ಮಾತ ಕೇಳಿಸಿದೆಯಯ್ಯಾ ? ಪಾಪಲೇಪವಳಿದಲ್ಲಿ ಪಾಪದ ಮಾತ ಕೇಳಿಸಿದೆಯಲ್ಲಯ್ಯಾ ? ಶಿವಶಿವಾ, ಭವದ ಬಟ್ಟೆಯನಗಲಿದಲ್ಲಿ ? ಬಂಧನದ ನುಡಿಯನಾಡಿಸಿದೆಯಲ್ಲಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ, ನೀನೆ ಗಂಡನೆಂದಿದ್ದಲ್ಲಿ, ಪರಪುರುಷರ ಮಾತನಾಡಿಸಿದೆಯಲ್ಲಯ್ಯಾ ?

ಶಿವಶಿವಾ, ಕರ್ಮಕ್ಷಯವಾದಲ್ಲಿ Read More »

ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ.

ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ. ಶಿವಭಕ್ತರು ಪರಿಣಾಮಿಸಿದಡೆ, ಶಿವನು ಪರಿಣಾಮಿಸುವ ನೋಡಾ. ಭಕ್ತದೇಹಿಕದೇವನೆಂದು ಶ್ರುತಿ ಹೊಗಳುವ ಕಾರಣ, ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು ನೋಡಾ. ತಾಯಿನೊಂದಡೆ ಒಡಲಶಿಶು ನೋವತೆರನಂತೆ, ಭಕ್ತರು ನೊಂದಡೆ ತಾ ನೋವ ನೋಡಾ ಚೆನ್ನಮಲ್ಲಿಕಾರ್ಜುನ.

ಶಿವಭಕ್ತರ ರೋಮನೊಂದಡೆ, ಶಿವನು ನೋವ ನೋಡಾ. Read More »

ಶಿವನು ತಾನೆ ಗುರುವಾಗಿ ಬಂದು

ಶಿವನು ತಾನೆ ಗುರುವಾಗಿ ಬಂದು ಮಹಾಘನಲಿಂಗವ ವೇದಿಸಿಕೊಟ್ಟ ಪರಿಯೆಂತೆಂದೊಡೆ ಆತ್ಮಗೂಡಿ ಪಂಚಭೂತಂಗಳನೆ ಷಡಂಗವೆಂದೆನಿಸಿ, ಆ ಅಂಗಕ್ಕೆ ಕಲೆಗಳನೆ ಷಡುಶಕ್ತಿಗಳೆನಿಸಿ, ಆ ಶಕ್ತಿಗಳಿಗೆ ಷಡ್ವಿಧ ಭಕ್ತಿಯನಳವಡಿಸಿ, ಆ ಭಕ್ತಿಗಳಿಗೆ ಭಾವನಮನಬುದ್ಧಿಚಿತ್ತ ಅಹಂಕಾರಗಳನೆ ಹಸ್ತಂಗಳೆಂದೆನಿಸಿ, ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ ಪಂಚಲಿಂಗಂಗಳನೆ ಷಡ್ವಿಧ ಲಿಂಗಂಗಳೆಂದೆನಿಸಿ, ಆ ಮಂತ್ರಲಿಂಗಂಗಳಿಗೆ ಹೃದಯಗೂಡಿ ಪಂಚೇಂದ್ರಿಯಂಗಳನೆ ಮುಖಂಗಳೆಂದೆನಿಸಿ, ಆ ಮುಖಂಗಳಿಗೆ ತನ್ಮಾತ್ರಂಗಳನೆ ದ್ರವ್ಯ ಪದಾರ್ಥಗಳೆಂದೆನಿಸಿ, ಆ ದ್ರವ್ಯಪದಾರ್ಥಂಗಳು ಆಯಾ ಮುಖದ ಲಿಂಗಗಳಲ್ಲಿ ನಿರಂತರ ಸಾವಧಾನದಿಂದ ಅರ್ಪಿತವಾಗಿ ಬೀಗಲೊಡನೆ ಅಂಗಸ್ಥಲಂಗಳಡಗಿ, ತ್ರಿವಿಧ ಲಿಂಗಾಂಗ ಸ್ಥಲಂಗಳುಳಿದು, ಕಾಯಗುರು, ಪ್ರಾಣಲಿಂಗ, ನ

ಶಿವನು ತಾನೆ ಗುರುವಾಗಿ ಬಂದು Read More »

ಶಿವಗಣಂಗಳ ಮನೆಯಂಗಳ

ಶಿವಗಣಂಗಳ ಮನೆಯಂಗಳ ವಾರಣಾಸಿಯೆಂಬುದು ಹುಸಿಯೆ, ಪುರಾತನರ ಮನೆಯಂಗಳದಲ್ಲಿ ಅಷ್ಟಾಷಷ್ಟಿ ತೀರ್ಥಂಗಳು ನೆಲೆಸಿಪ್ಪವಾಗಿ. ಅದೆಂತೆಂದಡೆ ಅದಕ್ಕೆ ಆಗಮ ಸಾಕ್ಷಿ ‘ಕೇದಾರಸ್ಯೋದಕೆ ಪೀತೇ ವಾರಣಾಸ್ಯಾ ಮೃತೇ ಸತೀ’ ಶ್ರೀಶೈಲಶಿಖರೇ ದೃಷ್ಟೇ ಪುನರ್ಜನ್ಮ ನ ವಿದ್ಯತೇ ||ú ಎಂಬ ಶಬ್ದಕ್ಕಧಿಕವು. ಸುತ್ತಿಬರಲು ಶ್ರೀಶೈಲ, ಕೆಲಬಲದಲ್ಲಿ ಕೇದಾರ, ಅಲ್ಲಿಂದ ಹೊರಗೆ ವಾರಣಾಸಿ. ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗೆ, ಎನ್ನ ದೇವ ಚೆನ್ನಮಲ್ಲಿಕಾರ್ಜುನಾ ನಿಮ್ಮ ಭಕ್ತರ ಮನೆಯಂಗಳ ಪ್ರಯಾಗದಿಂದ ಗುರುಗಂಜಿಯಧಿಕ ನೋಡಾ ?

ಶಿವಗಣಂಗಳ ಮನೆಯಂಗಳ Read More »

ಶಿವ ಶಿವಾ, ಆದಿ ಅನಾದಿಗಳೆಂಬೆರಡಿಲ್ಲದ ನಿರವಯ ಶಿವ,

ಶಿವ ಶಿವಾ, ಆದಿ ಅನಾದಿಗಳೆಂಬೆರಡಿಲ್ಲದ ನಿರವಯ ಶಿವ, ನಿಮ್ಮ ನಿಜವನಾರಯ್ಯಾ ಬಲ್ಲವರು ವೇದಂಗಳಿಗಭೇದ್ಯನು ಶಾಸ್ತ್ರಂಗಳಿಗಸಾಧ್ಯನು ಪುರಾಣಕ್ಕೆ ಆಗಮ್ಯನು ಆಗಮಕ್ಕೆ ಅಗೋಚರನು ; ತರ್ಕಕ್ಕೆ ಅತಕ್ರ್ಯನು ವಾಙ್ಮನಾತೀತವಾಗಿಪ್ಪ ಪರಶಿವಲಿಂಗವನು ಕೆಲಂಬರು ಸಕಲನೆಂಬರು ; ಕೆಲಂಬರು ನಿಃಕಲನೆಂಬರು ಕೆಲಂಬರು ಸೂಕ್ಷ್ಮನೆಂಬರು ; ಕೆಲಂಬರು ಸ್ಥೂಲನೆಂಬರು ಈ ಬಗೆಯ ಭಾವದಿಂದ, ಹರಿ, ಬ್ರಹ್ಮ, ಇಂದ್ರ, ಚಂದ್ರ, ರವಿ, ಕಾಲ, ಕಾಮ, ದಕ್ಷ, ದೇವ, ದಾನವ, ಮಾನವರೆಲ್ಲರೂ ಕಾಣಲರಿಯದೆ ಅe್ಞನದಿಂದ ಭವಭಾರಿಗಳಾದರು. ಈ ಪರಿಯಲ್ಲಿ ಬಯಲಾಗಿ ಹೋಗಬಾರದೆಂದು ನಮ್ಮ ಬಸವಣ್ಣನು ಜಗದ್ಧಿತಾರ್ಥವಾಗಿ ಮತ್ರ್ಯಕ್ಕೆ

ಶಿವ ಶಿವಾ, ಆದಿ ಅನಾದಿಗಳೆಂಬೆರಡಿಲ್ಲದ ನಿರವಯ ಶಿವ, Read More »

ಶರಣರ ಮನ ನೋಯ ನುಡಿದೆನಾಗಿ,

ಶರಣರ ಮನ ನೋಯ ನುಡಿದೆನಾಗಿ, ಹರಜನ್ಮವಳಿದು ನರಜನ್ಮಕ್ಕೆ ಬಂದೆನು. ಹರನಟ್ಟಿದ ಬೆಸನ ಶಿರದೊಳಗಾಂತೊಡೆ, ಗಿರಿಗಳ ಭಾರವೆನಗಾದುದಯ್ಯ. ಚೆನ್ನಮಲ್ಲಿಕಾರ್ಜುನನ ಧರ್ಮದಿಂದ ಸಂಸಾರ ಕರ್ಮದ ಹೊರೆಯನಿಳುಹಿ, ನಡುದೊರೆಯ ಹಾಯಿದು ಹೋದೆನು

ಶರಣರ ಮನ ನೋಯ ನುಡಿದೆನಾಗಿ, Read More »

ಶ್ರೀಶ ವೇದವ್ಯಾಸನಾದನು

ಶ್ರೀಶ ವೇದವ್ಯಾಸನಾದನು ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಸಾಸಿರ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ವಪ್ಪದಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ ||1|| ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ-

ಶ್ರೀಶ ವೇದವ್ಯಾಸನಾದನು Read More »

ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು

ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು ವಾಸವ ವಂದಿತ ವಾತಜ ಸೇವಿತ ವಾಸುಕಿಶಯನನು ವಾರೆ ಸುನೋಟದಿ ಬೆರಳ ಸಂದಿಲಿ ಮುರಳಿ ಪಿಡಿದು, ಮುರಾರಿ ತಾನು ಹರುಷದಿಂದಲಿ ಸ್ವರವ ನುಡಿದು, ವಾರಿಜನೇತ್ರ ಅರಳು ಮಲ್ಲಿಗೆ ಸರಗಳ ಮುಡಿದು ಕೊರಳ ಪದಕ ಹಾರ ಕೌಸ್ತುಭ ಶೋಭಿತ ಮರುಳು ಮಾಡುತ ಮಡದಿಯೆಲ್ಲರ ||1|| ಗೌರಿ ಗಾಂಧಾರಿ ಗೌಳಪಂತು ಗೌರೀಶ ಭೂಷಣ ಶೌರೀ ಸಾರಂಗ ಮೋಹನವಿಂತು ಸಾವೇರಿ ಸುರುಟಿ ಭೈರವಿ ಬ್ಯಾಗಡೆ ಊದುತ ನಿಂತು ಮಾರಜನಕ ತಾನಾನಂದದಿಂದಲಿ ವೀರ ಶ್ರೀ ಕೃಷ್ಣನು ವಿಧವಿಧ ರಾಗದಿ||2|| ನಾರದ

ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು Read More »

ಶ್ರೀಮದನಂತನೀತಾ ಶ್ರೀಮದನಂತನೀತಾ

ಶ್ರೀಮದನಂತನೀತಾ ಶ್ರೀಮದನಂತನೀತಾ | ಸೀಮರಹಿತಾ ಮಹಿಮನೀತಾ | ನಾಮ ನೆನೆಯೆ ಒಲಿದು ನಿಷ್ಕಾಮ ಫಲವ ನೀವಾನೀತ ಶ್ರೀಮದಾನಂತನೀತನು ಆದಿದೈವನೀತಾ ಜೀವಾದಿಗಳಿಗಭಯದಾನೀತಾ | ಶ್ರೀಧರಣಿ ದುರ್ಗಾರಮಣನಾದಾತನೊದಾನೀತಾ | ವೇದಪಾಲಕನೀತಾ ಸನಕಾದಿಗಳಿಗೆ ಪ್ರೀತಾನೀತಾ | ಕ್ರೋಧ ದೈತ್ಯರ ಸದೆದು ನಿತ್ಯ ಸಾಧುಗಳ ಕಾಯಿದನೀತಾ||1|| ಗಜವರದನೀತಾ ಗಂಗಜನ ಮನೋಭೀಷ್ಟನೀತಾ | ಗಜ ರಜಕ ಬಿಲ್ಲು ಮಲ್ಲರ ವ್ರಜನನಾಳಿದ ದಿಟ್ಟಿನೀತಾ | ತ್ರಿಜಗ ವಂದಿತಾನೀತಾ ಅಂಗಜನ ಪೆತ್ತ ಪ್ರೇಮನೀತಾ | ವಿಜಯಸಾರಥಿ ಈತಾ | ಪಂಕಜ ಬಾಂಧವನ ಭಾಸನೀತಾ||2|| ಕಪಟನಾಟಕನೀತಾ ಕರಡಿ ಕಪಿಗಳನಾಳಿದನೀತಾ

ಶ್ರೀಮದನಂತನೀತಾ ಶ್ರೀಮದನಂತನೀತಾ Read More »

ಶ್ರೀಪತಿಯ ನೈವೇದ್ಯ ಕೊಡುವದು

ಶ್ರೀಪತಿಯ ನೈವೇದ್ಯ ಕೊಡುವದು ಧೂಪದಾಂತರ ಭೂಮಿಶೋಧನ ಆಪದಿಂ ಮಂಡಲವ ಮಾಡುತ ರಂಗವಲಿ ಹಾಕಿ ಸೂಪ ಅನ್ನವು ಅಗ್ನಿಕೋಣದಿ ಆ ಪರಮ ಅನ್ನವನು ಈಶಾ ನ್ಯಾಪೆಯಾಲೇಹಗಳ ನೈರುತದಲಿ ಇಟ್ಟು ತಥಾ ||1|| ವಾಯುದಿಶದಲಿ ಉಪಸುಭೋಜ್ಯವು ವಾಯಸಾನ್ನದ ಮಧ್ಯ ಘೃತಸಂ ಸ್ತೂಯಮಾನ ನಿವೇದನವು ಈ ಕ್ರಮದಿ ಹೀಂಗಿಟ್ಟು ಬಾಯಿಯಿಂದಲಿ ದ್ವಾದಶ ಸ್ತುತಿ ಗಾಯನದಿ ನುಡಿಯುತಲಿ ಈ ಕಡೆ ಆಯಾ ಅಭಿಮಾನಿಗಳು ದೇವತೆಗಳನು ಚಿಂತಿಸುತ ||2|| ಓದನಕ ಅಭಿಮಾನಿ ಶಶಿಪರ ಮೋದನಕ ಅಭಿಮಾನಿ ಭಾರತಿ ಆದಿವಾಕರ ಭಕ್ಷ ಕ್ಷೀರಾಬ್ಧೀಜೆ ಸರ್ಪಿಯಲಿ ಸ್ವಾದುಕ್ಷೀರಕ

ಶ್ರೀಪತಿಯ ನೈವೇದ್ಯ ಕೊಡುವದು Read More »

ಶ್ರೀನಿವಾಸನ ಕ್ಷೇತ್ರ ಎಂಥಾದೊ

ಶ್ರೀನಿವಾಸನ ಕ್ಷೇತ್ರ ಎಂಥಾದೊ ಮಾನಿಸರಿಗೊಶವಲ್ಲ ಪೊಗಳಿ ಪೇಳುವುದು ಮೇಧಾದಿ ಮುನಿ ತನ್ನ ತಪೋಸಿದ್ಧಿಗೆ ಸರ್ವ | ಮೇದಿನಿ ತಿರುಗಿ ಬರುತಲಿ ಇತ್ತಲು | ಸಾಧನಕೆ ಸೌಮ್ಯವಾದ ಭೂಮಿಯನು ನೋಡಿ ಇವ | ಮಾಧವನ ಒಲಿಸಿದನು ಮಣಿ ಮುಕ್ತಿ ತೀರದಲಿ||1|| ನೆಸಗಿದ ತಪಕೆ ಮೆಚ್ಚಿ ಹರಿ ಒಲಿದ ತೀವ್ರದಲಿ | ಬಿಸಿಜದಳ ಲೋಚನೆ ಲಕುಮಿಯಿಲ್ಲೀ || ಎಸೆವ ಮಂಜರಿ ವೃಕ್ಷದಲಿ ವಾಸವಾಗಿ | ವಸುಧಿಯೊಳು ವಾಸವಾಗಿ ಅಗ್ರದಲಿ ಮೆರೆದನು ||2|| ಪರಮೇಷ್ಠಿ ಬಂದು ಈ ಕ್ಷೇತ್ರದಲಿ ನಿಂದು ಚ

ಶ್ರೀನಿವಾಸನ ಕ್ಷೇತ್ರ ಎಂಥಾದೊ Read More »

ಶ್ರೀನಾಥ ಶ್ರೀನಾಥ ಶ್ರೀನಾಥ

ಶ್ರೀನಾಥ ಶ್ರೀನಾಥ ಶ್ರೀನಾಥ ಮೋಹಿನೀ ರೂಪ ತಾ ತಾಳಿದಾನೆ ಸುಕಲಾಪ ತಾನೋಡಿಸುವುದು ಹೃತ್ತಾಪ ವನಂಬೆನೆ ಹರಿಯ ಪ್ರತಾಪ ಬಂಗಾರದ ಲತೆಯಂತೆ ಬಳುಕುವಳು ಬಾಜು ಬಂದಿಗೆ ಗೊಂಡೆಗಳ ಕಟ್ಟಿಹಳು ಮುಂಗಾಲಿಲೆ ನಿರಿಗಿಗಳ ಚಿಮ್ಮುವಳು ಮೋಹನ ಮಾಲೆಗಳ ಕಟ್ಟಿಹಳು ಕುಂಭ ಕುಚದ ಭಾರಕ್ಕೆ ತಡಿಯಳೂ ತುದಿಬೆರಳಲಿ ಗಲ್ಲವನೊತ್ತಿಹಳು ರಂಗು ಕೇಸರಿ ಗಂಧ ಹಚ್ಚಿಹಳು ರಾಜೀವದ ಮಂಜರಿಯ ಪೋಲುವಳು ಹೊಂಗ್ಯಾದಿಗೆ ಪೋಲುವ ಮೈಬಣ್ಣ ಹೊಮ್ಮಸದಲಿ ಹೋಲುವ ಈ ಹೆಣ್ಣು ಹಿಂಗಡೆಯಲಿ ವರ ಹೆರಳು ಭಂಗಾರ ಹಿಮ್ಮಡಿ ಬಡಿಯೋದು ಸರ್ಪಾಕಾರ ಭಂಗಿಸುವಳು ಬಹು

ಶ್ರೀನಾಥ ಶ್ರೀನಾಥ ಶ್ರೀನಾಥ Read More »

ಶ್ರೀ ವನಿತೆ ವೈನತೇಯ ವಾರುತೆ

ಶ್ರೀ ವನಿತೆ ವೈನತೇಯ ವಾರುತೆ ದೇವಾದಿ ವರವಿನುತೆ ಕಾವದು ಯೆನ್ನ ನೀ ವದಿಗಿ ಮುನ್ನೆ ಈವದು ವರ ಆವದುವಲ್ಲೆ ದೇವಿ ನಿನ್ನಯ ರಾಜೀವ ಚರಣದ ಸೇವೆಯ ಪಾಲಿಸು ಕೋವಿದರೊಡನೆ ಸಮಸ್ತಲೋಕ ವಂದಿತೆ ಸಂತತ ಮತ್ತೆ ತಾಮಸ e್ಞÁನ ಹರತೆ ಸಾಮಗಾಯನ ಪ್ರೀತೆ ಸಕಲವಿದ್ಯಾತೀತೆ ರೋಮ ರೋಮ ಗುಣ ಭರಿತೆ ರಾಮನ್ನ ಪದ ನಾಮವನ್ನು ನಾ ಮರೆಯದಂತೆ ನೀ ಮನಸು ಕೊಡು ಹೇಮಾಂಬರೆ ಕಾಂಚಿದಾಮೆ ಅಮಮ ನಿ- ಸ್ಸೀಮ ಮಹಿಮೆ ಭಕ್ತಸ್ತೋಮ ವನಧಿ ಸೋಮೆ ಕಾಮ ಜನನಿ ತ್ರಿಧಾಮೆ

ಶ್ರೀ ವನಿತೆ ವೈನತೇಯ ವಾರುತೆ Read More »

ಶ್ರೀ ವನಜಲೋಚನ ಭವ ಮೋಚನಾ

ಶ್ರೀ ವನಜಲೋಚನ ಭವ ಮೋಚನಾ | ಭಾವಿಸುವೊದು ಸೂಚನಾ | ಪಾವನರಂಗಾ | ಜೀವಾಂತರಂಗ | ಜೀವ ತುರಂಗಾ | ಗ್ರೀವ ರಿಪು ಭಂಗಾ | ದೇವ ಎನ್ನಯ | ಹೃದ್ದಾವರೆಯಲಿ ನಿಲ್ಲು | ಆವಾವ ಬಗೆ ಸು | ರೂಹ | ಆವಾಗ ತೋರುತ ನಂದನಂದನಾ ಆನಂದಾ | ನಾಗನಾ | ಬಂಧಾ | ಹಿಂದುಗೈಸಿದ ಮುಕುಂದಾ | ಅಂದು ಬೀಡಾದೆಕ್ಕೆಂದಾ | ದಾ ಖಳನ ಕೊಂದೆ | ನಂದವ್ರಜದ ಗೋವಿಂದಾ | ಯಶೋದೆ ಕಂದಾ

ಶ್ರೀ ವನಜಲೋಚನ ಭವ ಮೋಚನಾ Read More »

ಶ್ರೀ ಲತಾಂಗಿರ ರಮಾಕೃಷ್ಣನು

ಶ್ರೀ ಲತಾಂಗಿರ ರಮಾಕೃಷ್ಣನು ಬಾಲ ಲೀಲೆಯ ಜಗಕೆ ತೋರುತ ||1|| ಆಡಿಪಾಡುತ ಕೂಡಿ ರಮಿಸುತ ಗಾಡಿಗಾರನು ಅವಳ ಹೆಗಲನೇರಿಸಿ ||2|| ತಾನೆ ಸುಂದರೀ ಎಂದು ಗರ್ವಿಸೆ ದೀನನಾಥನು ಅದೃಶ್ಯನಾದನು ||3|| ಅಗರು ಕಸ್ತೂರೀ ಪೂಸಿ ಹೃದಯಕೇ ಮೊಗರು ಕುಚಗಳ ಮುಖದ ಕಮಲವು ||4|| ಎತ್ತ ಪೋದನೋ ರಂಗ ಎನುತಲಿ ಚಿತ್ತ ಭ್ರಮೆಯಲಿ ಹುಡುಕುತ್ತಿದ್ದರು ||5|| ಎಲ್ಲಿ ಪೋದನೋ ಕೃಷ್ಣ ಎನುತಲಿ ಮತ್ತೆ ಸಖಿಯರು ಹುಡುಕುತ್ತಿದ್ದರು ||6|| ಸುತ್ತ ಗೋಕುಲಾದೊಳಗೆ ಸ್ತ್ರೀಯರೂ ಮತ್ತೆ ಕೃಷ್ಣನ ಪಾದ ಕಾಣದೇ ||7||

ಶ್ರೀ ಲತಾಂಗಿರ ರಮಾಕೃಷ್ಣನು Read More »

ಶ್ರೀ ಮಾರುತನ ಮಾನಿನಿ ಭಾರತೀದೇವಿ

ಶ್ರೀ ಮಾರುತನ ಮಾನಿನಿ ಭಾರತೀದೇವಿ ಆ ಮಹಾಭಕುತಿಗಭಿಮಾನಿ ಕಾಮಾಂತಕ ಸುತ್ರಾಮ ಕಾಮ ರವಿ ಸೋಮವಿನುತೆ ಮದಸಾಮಜ ಗಮನೆ ನೀಲಕುಂತಳೆ ಮೋಹನ್ನೇ-ಸುವಾಣಿ ಚನ್ನೆ ಬಾಲಾರ್ಕ ತಿಲಕರನ್ನೆ ಫಾಲೆ ವಿಶಾಲೆ ಗುಣರನ್ನೆ -ಕುಂದರದನ್ನೆ ಮೂರ್ಲೋಕದೊಳು ಪಾವನ್ನೆ ಕಾಳವ್ಯಾಳ ವೇಣಿ ಮ್ಯಾಲೆ ರ್ಯಾಗಟೆ ಪೊ ನ್ನೊಲೆ ಚವುರಿಗೊಂಡ್ಯ ಹೆರಳು ಭಂಗಾರ ಕು- ಟ್ಟಿಲ ಚಂಪಕ ನಾಸಿಕ ನೀಲೋ ತ್ಪಲೆ ನೇತ್ರಳೆ ಪಾಂಚಾಲಿ ಕಾಳಿ ನಮೋ ||1|| ಪೊಳಿವೊ ಕೆಂದುಟಿ ನಸುನಗೆ ಪತ್ತು ದಿಕ್ಕಿಗೆ ಬೆಳಕು ತುಂಬಿರಲು ಮಿಗೆ ಥಳಕು ವೈಯಾರದ ಬಗೆ

ಶ್ರೀ ಮಾರುತನ ಮಾನಿನಿ ಭಾರತೀದೇವಿ Read More »

ಶ್ರೀ ಮಹಾಲಕುಮಿ ದೇವಿಯೆ,

ಶ್ರೀ ಮಹಾಲಕುಮಿ ದೇವಿಯೆ, ಕೋಮಲಾಂಗಿಯೆ ಸಾಮಗಾಯನ ಪ್ರಿಯೆ ಹೇಮಗರ್ಭ ಕಾಮಾರಿ ಶಕ್ರಸುರ ಸ್ತೋಮ ವಂದಿತಳೆ ಸೋಮ ಸೋದರಿಯೆ ಬಟ್ಟುಕುಂಕುಮ ನೊಸಲೋಳೆ ಮುತ್ತಿನ ಹೊಸ ಕಟ್ಟಾಣಿ ತ್ರಿವಳಿ ಕೊರಳೋಳೆ ಇಟ್ಟ ಪೊನ್ನೋಲೆ ಕಿವಿಯೋಳೆ ಪವಳದ ಕೈಯ ಕಟ್ಟ ಕಂಕಣ ಕೈಬಳೆ ತೊಟ್ಟ ಕುಪ್ಪಸ ಬಿಗಿದುಟ್ಟ ಪೀತಾಂಬರ ಘಟ್ಟಿ ವಡ್ಯಾಣ ಕಾಲಂದಿಗೆ ರುಳಿಗೆಜ್ಜೆ ಬೆಟ್ಟಿಲಿ ಪೊಳೆವುದು ವೆಂಟಿಕೆ ಕಿರುಪಿಲ್ಲಿ ಇಟ್ಟು ಶೋಭಿಸುವ ಅಷ್ಟಸಂಪನ್ನೆ ||1|| ಸಕಲ ಶುಭಗುಣಭರಿತಳೆ ಏಕೋದೇವಿಯೆ ವಾಕುಲಾಲಿಸಿ ನೀ ಕೇಳೆ ನೋತನೀಯನ್ನ ಮಹಲೀಲೆ ಕೊಂಡಾಡುವಂಥ ಏಕಮನವ ಕೊಡು

ಶ್ರೀ ಮಹಾಲಕುಮಿ ದೇವಿಯೆ, Read More »

ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ

ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ ಆ ಮಹಾತತ್ವ ತಾರತಮ್ಯಗಳ ತಿಳಿದು ಕಾಮ ಕ್ರೋಧಗಳೆಲ್ಲ ಹಳಿದು ಗುರು ಹನುಮಂತ ಭೀಮ ಮಧ್ವಮುನಿಯ ಸಾರಿರಯ್ಯ | ಅಯ್ಯಯ್ಯಾ ಅಂಜನೇಯ ಗರ್ಭದಲಿ ಜನಿಸಿ ಆಕಾಶದಲ್ಲಿ ಕಂಜನಾಪ್ತನ ತುಡುಕಿ ಕಿಷ್ಕಿಂಧದಲಿ ಕಪಿ ರಂಜನನ ಕೂಡಿ ಪಂಪಾ ತೀರದಲಿ ದೇವಂಜನ ಪಾದವ ಕಂಜನಮಿತನಾಗಿ ಬಂದು ಮುದ್ರೆಯ ಧರಿಸಿ ಜನಕಾತ್ಮಜಗೆಯಿತ್ತು ಅಕ್ಷರಿ ಎನೊ ಭಂಜನವ ಮಾಡಿ ಲಂಕೆಯನುರಿಪಿ ಬಂದ ಪ್ರ ಭಂಜನಿಯ ಭಜಿಸಿರಯ್ಯಾ | ಅಯ್ಯಯ್ಯಾ ||1|| ಧರ್ಮನಂದನೊಡನೆ ಜನಿಸಿ ಹಾಲಹಲ ಉಂಡು ಸೀರ್ಮುಟ್ಟಿ ಪೋಗಿ

ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ Read More »

ಶ್ರೀ ಕಮಲನೇತುರ ಪುಣ್ಯಗಾತುರ |

ಶ್ರೀ ಕಮಲನೇತುರ | ಪುಣ್ಯಗಾತುರ | ಸಾಕಾರ ಕ್ಷಣ ಮಾತುರ | ನೀ ಕರುಣದಿಂದ | ವಾಕು ಲಾಲಿಸು | ಬೇಕು ವೇಗದಲಿ | ಗೋಕುಲಾಂಬುಧಿ ರಾಕಾಂಬುಜ ಲಾ | ವಕರ ತೊಲಗಿಸಿ | ಸಾಕುವುದೆನ್ನ ನಿ | ಜಕರ ವಿಡಿದೂ ದೇವಕಿ ಗರ್ಭ ಸಂಭೂತ | ನಿತ್ಯ ಅಜಾತಾ | ಪಾವನ ಬಲು ಚರಿತಾ | ಕೋವಿದರರಸ ಶತ | ಕುಂಭ ಮಕುಟನೀತಾ | ಮಾವ ಮರ್ದನ ನಿರ್ಭೀತಾ || ದೇವಮರರ ಕಾ | ವ

ಶ್ರೀ ಕಮಲನೇತುರ ಪುಣ್ಯಗಾತುರ | Read More »

ಶೋಭಾನ ಶೋಭಾನವೆನ್ನಿರೆ ಸುರರಂಗನಿಯರೆಲ್ಲ

ಶೋಭಾನ | ಶೋಭಾನವೆನ್ನಿರೆ ಸುರರಂಗನಿಯರೆಲ್ಲ ಶೋಭಾನವೆನ್ನಿ ಶುಭವೆನ್ನಿ ಪ ಮಂಗಳದೇವಿಯ ರಮಣ ಬಾ | ಶೃಂಗಾರದ ಗುಣನಿಧಿಯೆ ಬಾ | ಅಂಗಜಜನಕ ಅರವಿಂದದಾಳಾಕ್ಷನೆ ರಂಗಾ ಬಾ || ಭವಭವ ಭಂಗಾ ಬಾ | ದೇವೋತ್ತುಂಗಾ ಬಾ | ಜಗದಂತರಂಗಾ ಬಾ ಹಸೆಯ ಜಗುಲಿಗೆ||1|| ಸಂಕುರುಷಣ ಅನಿರುದ್ಧಾ ಬಾ | ಪಂಕಜ ಸಂಭವನಯ್ಯ ಬಾ | ಕುಂಕುಮಾಂಕಿತನೆ ಭಕುತ ಕುಮುದ ಮೃಗಾಂಕ ಬಾ || ನಿಷ್ಕಳಂಕಾ ಬಾ ಶಂಖಚಕ್ರಾಂಕ ಬಾ | ಅಹಿಪರಿಯಂಕÀ ಬಾ ಹಸೆಯ ಜಗುಲಿಗೆ ||2||

ಶೋಭಾನ ಶೋಭಾನವೆನ್ನಿರೆ ಸುರರಂಗನಿಯರೆಲ್ಲ Read More »