ಸ್ತಿಮಿತ-ಚಿತ್ ಸಿಂಧು ವಿದಿ ಉತಿಹಿಲ್ ಕಿ ಜ್ಯೋತಿ-ಘನ

ಬಾಗೇಶ್ರೀ—ಆಡಾ ಸ್ತಿಮಿತ-ಚಿತ್ ಸಿಂಧು ವಿದಿ ಉತಿಹಿಲ್ ಕಿ ಜ್ಯೋತಿ-ಘನ,ಕೋಟಿ ಸೂರ್ಯ ಗೋಲೈಯೇ, ಛಾಂಚೆ ಧಾಲಾ ಕಾಂತಿ ಜೆನ।ಮಾಯಾ-ಖಂಡಿತ ಅಖಂಡ ಬಾರಿ, ಬುಜ್ಜಿ ಲೀಲಾ ಕೇಬಾ ಹೆನ॥ ಉಜಲ್ ಬಾಲಕ ಬೇಸೆ, ಅಖಂಡ ಘರ್ ಪ್ರವೇಶೇ,ಪ್ರೇಮಘನ ಬಾಹು ಪಾಶೆ ಕಾಹಾರೆ ಕರ್ಡೆ ಧಾರಣ॥ ಉತೋ ಬೀರ್ ಆಂಕಿ ಮೆಲಿ, ಛಾಡೋ ಧ್ಯಾನ್ ಚಾಲೋ ಚಾಲಿ,ಧರಣೀ ಡುಬಾಲ್ ಬುಜ್ಜಿ ಅವಿದ್ಯಾ ಕಾಮ ಕಂಚನ್॥ ಸುಧೀರ್ ಧೀರ್ ಪರಶೆ, ಯೋಗೀ ಚಾಯ ಸಹರಶೆ,ಕಂಟಕಿತ ತನುಮನ, ನೀರಬೇ ಭಾಸೆ ಬಯಾನ;ತಾರಾ ಜ್ವಲಿ’ ಛಾಯಾ […]

ಸ್ತಿಮಿತ-ಚಿತ್ ಸಿಂಧು ವಿದಿ ಉತಿಹಿಲ್ ಕಿ ಜ್ಯೋತಿ-ಘನ Read More »

ಸೋಜುಗಾದ ಸೂಜುಮಲ್ಲಿಗೆ ಮಾದೇವ

ಸೋಜುಗಾದ ಸೂಜುಮಲ್ಲಿಗೆ ಮಾದೇವ ನಿಮ್ಮ ಮಂಡೆ ಮ್ಯಾಲೆ ದುಂಡು ಮಲ್ಲಿಗೆ ಅಂದಾವರೆ ಮುಂದಾವರೆ ಮತ್ತೆ ತಾವರೆ ಪುಷ್ಪ ಚಂದಕ್ಕಿ ಮಾಲೆ ಬಿಲ್ಪತ್ರೆ ಮಾದೇವ ನಿಮ್ಗೆ ಚಂದಕ್ಕಿ ಮಾಲೆ ಬಿಲ್ಪತ್ರೆ ತುಳಸಿ ದಳವ ಮಾದಪ್ನ ಪೂಜೆಗೆ ಬಂದು ಮಾದೇವ ನಿಮ್ಮ ಸೋಜುಗಾದ ಸೂಜುಮಲ್ಲಿಗೆ ಮಾದೇವ ನಿಮ್ಮ ಮಂಡೆ ಮ್ಯಾಲೆ ದುಂಡು ಮಲ್ಲಿಗೆ ತಪ್ಪಾಳೆ ಬೆಳಗಿವ್ನಿ ತುಪ್ಪಾವ ಕಾಯಿಸ್ಯೀವ್ನಿ ಕಿತ್ತಾಳೆ ಹಣ್ಣ ತಂದಿವ್ನಿ ಮಾದೇವ ನಿಮ್ಗೆ ಕಿತ್ತಾಳೆ ಹಣ್ಣ ತಂದ್ಯೀವ್ನಿ ಮಾದಪ್ಪ ಕಿತ್ತಾಳಿ ಬರುವ ಪರಸೇಗೆ ಮಾದೇವ ನಿಮ್ಮ ಸೋಜುಗಾದ

ಸೋಜುಗಾದ ಸೂಜುಮಲ್ಲಿಗೆ ಮಾದೇವ Read More »

ಸುಖಕರ್ತಾ ದುಃಖಹರ್ತಾ

ಸುಖಕರ್ತಾ ದುಃಖಹರ್ತಾ ವಾರ್ತಾ ವಿಥ್ಯಾಚಿ ನುರವೀ ಪುರವೀ ಪ್ರೇಮ ಕೃಪಾ ಜಯಾಚಿ| ಸರ್ವಾಂಗ ಸುಂದರ ಉಟಿ ಸೇಂದುರಾಚಿ ಕಂಠಿ ಝಳಕೇ ಮಾಳ ಮುಕ್ತಫಳಾಚಿ ಜಯದೇವ ಜಯದೇವ ಜಯ ಮಂಗಳಮೂರ್ತಿ ದರ್ಶನ ಮಾತ್ರೆ ಮನ ಕಾಮನ ಪುರತಿ|| ರತ್ನಖಚಿತ ಫರಾ ತುಝ ಗೌರೀಕುವರಾ| ಚಂದನಾಚೀ ಉಟೀ ಕುಂಕುಮ ಕೇಶರಾ ಹೀರೆ ಜಡಿತ ಮುಕುಟ ಶೋಭತೋ ಬರಾ| ರುಣಝಣತಿ ನೂಪುರ ಚರಣೀ ಘಾಘರಿಯಾ|| ಜಯದೇವ ಜಯದೇವ ಜಯ ಮಂಗಳಮೂರ್ತಿ ದರ್ಶನ ಮಾತ್ರೆ ಮನ ಕಾಮನ ಪುರತಿ|| ಲಂಬೋದರ ಪೀತಾಂಬರ ಫಣಿವರಬಂಧನಾ

ಸುಖಕರ್ತಾ ದುಃಖಹರ್ತಾ Read More »

ಸ್ನಾನವ ಮಾಡಿರೊ ಜ್ಞಾನ ತೀರ್ಥದಲ್ಲಿ

ಸ್ನಾನವ ಮಾಡಿರೊ ಜ್ಞಾನ ತೀರ್ಥದಲ್ಲಿಮಾನವರೆಲ್ಲ ಮೌನದೊಳಗೆ ನಿಂದು ತನ್ನ ತಾನರಿತುಕೊಂಬುದೆ ಒಂದು ಸ್ನಾನಅನ್ಯಾಯ ಮಾಡದಿರುವುದೊಂದು ಸ್ನಾನಅನ್ನದಾನವ ಮಾಡುವುದೊಂದು ಸ್ನಾನ – ಹರಿನಿನ್ನ ಧ್ಯಾನವೆ ನಿತ್ಯ ಗಂಗಾ ಸ್ನಾನ 1 ಪರಸತಿಯ ಭ್ರಮಿಸದಿದ್ದರೆ ಒಂದು ಸ್ನಾನಪರನಿಂದೆಯ ಮಾಡದಿದ್ದರೊಂದು ಸ್ನಾನಪರೋಪಕಾರ ಮಾಡುವುದೊಂದು ಸ್ನಾನಪರತತ್ತ್ವವನರಿತುಕೊಂಬುದೆ ಒಂದು ಸ್ನಾನ2 ಸಾಧು ಸಜ್ಜನರ ಸಂಗವೆ ಒಂದು ಸ್ನಾನಭೇದಾಭೇದವಳಿದಡೆ ಒಂದು ಸ್ನಾನಆದಿಮೂರುತಿ ಕಾಗಿನೆಲೆಯಾದಿಕೇಶವನಪಾದ ಧ್ಯಾನವೆ ನಿತ್ಯ ಗಂಗಾ ಸ್ನಾನ 3

ಸ್ನಾನವ ಮಾಡಿರೊ ಜ್ಞಾನ ತೀರ್ಥದಲ್ಲಿ Read More »

ಸಾರದಾ ರೂಪತಾಳಿ

ಸಾರದಾ ರೂಪತಾಳಿ ಬಂದಿಹಳು ತಾಯಿ ಕಾಳಿ ಅದನರಿತೆ ರಾಮಕೃಷ್ಣ ಪೂಜಿಸಿದರು ಭಾವ ತಾಳಿ || ಆದ್ಯಾಶಕ್ತಿ ನೀ ಮಾತೆ ಸರ್ವಜೀವ ಮುಕ್ತಿದಾತೆ | ಮಹಾಲಕ್ಷ್ಮಿ ಸರಸ್ವತಿ ಗುಪ್ತರೂಪ ಜ್ಞಾನದಾತೆ || ಸೀತಾ ರಾಧಾ ಅನ್ನಪೂರ್ಣಾ ಕಾಯ ಪಡೆದ ಭುವಿಯು ಧನ್ಯ | ಪ್ರೇಮದಿಂದ ತಾಯಿಯೆಂದು ಕರೆವ ಮನುಜ ಜಗದಿ ಮಾನ್ಯ || ದೀನಜನರ ಉದ್ಧರಿಸೆ ದೀನರೂಪ ತಾಳಿ ಬಂದೆ | ಅಭಯೇ ನೀನು ಉಭಯಕರದಿ ಅಭಯವನ್ನು ನೀಡಲೆಂದೆ || -ಸ್ವಾಮಿ ಶಾಸ್ತ್ರನಂದ

ಸಾರದಾ ರೂಪತಾಳಿ Read More »

ಸಂಜೆಯಾಗಲು ತವಕಿಪುದು

ಸಂಜೆಯಾಗಲು ತವಕಿಪುದು ಮನ ದಕ್ಷಿಣೇಶ್ವರ ಯಾತ್ರೆಗೆ | ಪರಮಹಂಸರ ತೀರ್ಥವಾಣಿಯ ಪಂಚ ಅಮೃತದ ಪಾತ್ರೆಗೆ || ಗುಪ್ತದಫ್ತರ ಬರೆಯುತಿರ್ಪ ಮಹೇಂದ್ರಗುಪ್ತನ ನೋಡುವೆ | ಪ್ರಶ್ನವರ್ಷವ ಕರೆಯುತಿರ್ಪ ನರೇಂದ್ರ ವಾದವನಾಲಿಪೆ || ಅತ್ತ ಕೇಶವಚಂದ್ರಸೇನನ ಭಕ್ತಿನಮನವ ಕಾಣುವೆ | ಇತ್ತ ಮತ್ತ ಗಿರೀಶಘೋಷನ ಚಂದ್ರ ಚಿತ್ತದಿ ತೊಯ್ಯುವೆ || -ಕುವೆಂಪು

ಸಂಜೆಯಾಗಲು ತವಕಿಪುದು Read More »

ಸುಂದರಲಾಲಾ ನಂದದುಲಾಲಾ

ಸುಂದರಲಾಲಾ ನಂದದುಲಾಲಾ ನಾಚತ ಶ್ರೀ ವೃಂದಾವನಮೇ ಭಾಲೇ ಚಂದನ ತಿಲಕ ಮನೋಹರ ಅಲಕಾ ಶೋಭೆ ಕಪೋಲನ ಮೇ || ಶಿರೇ ಚೂಡಾ ನಯನ ವಿಶಾಲಾ ಕುಂದಮಾಲಾ ಹಿಯಾಪರ ಡೋಲೇ ಪಹಿರಣ ಪೀತ ಪಟಾಂಬರ ಬೋಲೇ ಝನುಝನು ನೂಪುರ ಚರಣನಮೇ || ಕೋಯಿ ಗಾವತ ಪಂಚಮ ತಾನ ವಂಶೀಪುಕಾರೋ ರಾಧಾನಾಮ ಮಂಗಲ ತಾಲ ಮೃದಂಗ ರಸಾಲ ಬಾಜಾವತ ಕೋಈ ರಂಗನಮೇ || ರಾಧಾಕೃಷ್ಣ ಎಕತನು ಹೋಯ ನಿಧುವನಮೇ ಜೋ ರಂಗಮಚಾ ಈ ವಿಶ್ವರೂಪ ಜೋ ಭಗವಾನ್ ಸೋಹಿ ಲೀಲಾಕರತ

ಸುಂದರಲಾಲಾ ನಂದದುಲಾಲಾ Read More »

ಶ್ರೀರಾಮಕೃಷ್ಣ-ನಾಮ-ಸಂಕೀರ್ತನದಿಂದ

ಸರ್ವಜೀವಪಾಪನಾಶಕಾರಣಂ ಭವೇಶ್ವರಂ ಸ್ವೀಕೃತಂ ಚ ಗರ್ಭವಾಸದೇಹಪಾಶಮೀದೃಶಮ್ | ಯಾಪಿತಂ ಸ್ವಲೀಲಯಾ ಚ ಯೇನ ದಿವ್ಯಜೀವನಂ ತಂ ನಮಾಮಿ ದೇವದೇವರಾಮಕೃಷ್ಣಮೀಶ್ವರಮ್ || -ಸ್ವಾಮಿ ವಿರಜಾನಂದ ಓಂಶ್ರೀವಿವೇಕಾನಂದಾದಿ-ಸಚ್ಛಿಷ್ಯಸುಪೂಜಿತಾಯ ಶ್ರೀಶಾರದಾದೇವ್ಯಾsವಿರತ-ಸೇವಿತಾಯ ಶ್ರೀರಾಮಕೃಷ್ಣ- ಪರಮಹಂಸಾಯ ಅವತಾರವರಿಷ್ಠಾಯ ಚ ತೇ ನಮಃ || ಜೀವನಕಥನಮ್ ಪರಬ್ರಹ್ಮ-ಪರಾಶಕ್ತಿ-ಜಗದ್ರೂಪ- ರಾಮಕೃಷ್ಣ ಧರ್ಮರಕ್ಷಣಾಯ ಜಗತಿ ದೇಹಧಾರಿ ರಾಮಕೃಷ್ಣ ಜನ್ಮಪೂತ-ವಂಗದೇಶ-ವಿಪ್ರವಂಶ ರಾಮಕೃಷ್ಣ ಚಂದ್ರಮಣಿ-ಕ್ಷುಧೀರಾಮ-ಸೌಖ್ಯದಾತೃ- ರಾಮಕೃಷ್ಣ ಶೈಶವೇsಪಿ ಶಿಲ್ಪಗೀತ-ಕಲಾನಿಪುಣ ರಾಮಕೃಷ್ಣ ಪಕ್ಷಿಪಂಕ್ತಿ-ದರ್ಶನಾತ್ ಸಮಾಧಿಮಾಪ್ತ ರಾಮಕೃಷ್ಣ ಸಪ್ತಮಾಬ್ದ-ಲುಪ್ತಪಿತೃಪ್ರೇಮ-ಬಾಲ ರಾಮಕೃಷ್ಣ ಬಾಲ್ಯ ಏವ ವಿರಾಗಾಗ್ನಿ-ದಹ್ಯಮಾನ ರಾಮಕೃಷ್ಣ ಭೂತಭುವಿ ಧ್ಯಾನಮಗ್ನ-ಬಾಲಯೋಗಿ ರಾಮಕೃಷ್ಣ ಭಿಕ್ಷು-ಯೋಗಿ-ಸಾಧು-ಸಂಗ-ಮೋದಮಾನ ರಾಮಕೃಷ್ಣ ವಿಶಾಲಾಕ್ಷಿಸದ್ಮಪಥೇ

ಶ್ರೀರಾಮಕೃಷ್ಣ-ನಾಮ-ಸಂಕೀರ್ತನದಿಂದ Read More »

ಸೆಜ್ಜೆಯನುಪ್ಪರಿಸಿ ಶಿವಲಿಂಗ ಕರಸ್ಥಲಕ್ಕೆ ಬರಲು,

ಸೆಜ್ಜೆಯನುಪ್ಪರಿಸಿ ಶಿವಲಿಂಗ ಕರಸ್ಥಲಕ್ಕೆ ಬರಲು, ಪ್ರಜ್ವಲಿಸಿ ತೊಳತೊಳಗಿ ಬೆಳಗುತ್ತಿಹ ಕಾಂತಿಯೊಳು ಪ್ರಜ್ವಲಿಸಿ, ದೃಷ್ಟಿನಟ್ಟು ಒಜ್ಜರಿಸಿ ಸುರಿವ ಅಶ್ರುಜಲ ಶಿವಸುಖ ಸಾರಾಯನಲ್ಲಿ ಸಜ್ಜನಸತಿಯ ರತಿಯೊಡಗೂಡಿ ಲಜ್ಜೆಗೆಟ್ಟು ನಿಮ್ಮ ನೆರೆದೆನು ಚೆನ್ನಮಲ್ಲಿಕಾರ್ಜುನಾ.

ಸೆಜ್ಜೆಯನುಪ್ಪರಿಸಿ ಶಿವಲಿಂಗ ಕರಸ್ಥಲಕ್ಕೆ ಬರಲು, Read More »

ಸ್ಥಾನಭೇದ ಸಂಶಯ

ಸ್ಥಾನಭೇದ ಸಂಶಯ ಆಧಾರ ಸ್ವಾದಿಷ್ಟ ಮಣಿಪೂರಕ ಅನಾಹತ ವಿಶುದ್ಧಿ ಎಂಬ ಷಟ್‍ಚಕ್ರಂಗಳ ವರ್ತನೆಯ ನುಡಿದಡೇನು ? ಆದಿ ಅನಾದಿಯ ಕೇಳಿದಡೇನು ? ತನ್ನಲ್ಲಿದ್ದುದ ತಾನರಿಯದನ್ನಕ್ಕ ಉನ್ಮನಿಯ ರಭಸದ ಸಿಂಹಾಸನದ ಮೇಲೆ ಚೆನ್ನಮಲ್ಲಿಕಾರ್ಜುನನ ಭೇದಿಸಲರಿಯರು.

ಸ್ಥಾನಭೇದ ಸಂಶಯ Read More »

ಸಾವಿಲ್ಲದ ಕೇಡಿಲ್ಲದ ರೂಹಿಲ್ಲದ ಚೆಲುವಂಗೆ ನಾನೊಲಿದೆ.

ಸಾವಿಲ್ಲದ ಕೇಡಿಲ್ಲದ ರೂಹಿಲ್ಲದ ಚೆಲುವಂಗೆ ನಾನೊಲಿದೆ. ಎಡೆಯಿಲ್ಲದ ಕಡೆಯಿಲ್ಲದ ತೆರಹಿಲ್ಲದ ಕುರುಹಿಲ್ಲದ ಚೆಲುವಂಗೆ ನಾನೊಲಿದೆ ಎಲೆ ಅವ್ವಗಳಿರಾ ? ಭವವಿಲ್ಲದ ಭಯವಿಲ್ಲದ ನಿರ್ಭಯ ಚೆಲುವಂಗೊಲಿದೆ ನಾನು. ಸೀಮೆಯಿಲ್ಲದ ನಿಸ್ಸೀಮಂಗೊಲಿದೆ ನಾನು. ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆ ಮಿಗೆ ಮಿಗೆ ಒಲಿದೆ ಎಲೆ ಅವ್ವಗಳಿರಾ.

ಸಾವಿಲ್ಲದ ಕೇಡಿಲ್ಲದ ರೂಹಿಲ್ಲದ ಚೆಲುವಂಗೆ ನಾನೊಲಿದೆ. Read More »

ಸಾವಿರ ಹೊನ್ನಿಂಗೆ ಸಾದಕೊಂಡು

ಸಾವಿರ ಹೊನ್ನಿಂಗೆ ಸಾದಕೊಂಡು ಸುಣ್ಣವ ಬೆರಸಿದಂತೆ ಮಾಡಿದೆಯಯ್ಯಾ. ಮೂರು ಲಕ್ಷದ ಬೆಲೆಗೆ ರತ್ನವ ಕೊಂಡು ಮಡುವಿನಲ್ಲಿ ಇಟ್ಟಂತೆ ಮಾಡಿದೆಯಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ಮುಟ್ಟಿ ಪಾವನವ ಮಾಡಿ ಕಷ್ಟಸಂಸಾರಿಗೊಪ್ಪಿಸುವಂತೆ ಮಾಡಿದೆಯಯ್ಯಾ.

ಸಾವಿರ ಹೊನ್ನಿಂಗೆ ಸಾದಕೊಂಡು Read More »

ಸೂರ್ಯಪ್ರಕಾಶ ಆಕಾಶದ ವಿಸ್ತೀರ್ಣ,

ಸೂರ್ಯಪ್ರಕಾಶ ಆಕಾಶದ ವಿಸ್ತೀರ್ಣ, ವಾಯುವಿನ ಚಲನೆಯೆಲ್ಲಾ ಹಗಲಿನ ಪೂಜೆ. ಚಂದ್ರಪ್ರಕಾಶ ನಕ್ಷತ್ರ ಅಗ್ನಿವಿದ್ಯುತ್ತಾದಿ ದೀಪ್ತಿಮಯವೆನಿಸಿಪ್ಪವೆಲ್ಲಾ ಇರುಳಿನ ಪೂಜೆ. ನಿನ್ನ ಪ್ರಕಾಶದಲ್ಲಿ ಎನ್ನ ಮರದಿಪ್ಪೆನಯ್ಯಾ ಚೆನ್ನಮಲ್ಲಿಕಾರ್ಜುನಾ.

ಸೂರ್ಯಪ್ರಕಾಶ ಆಕಾಶದ ವಿಸ್ತೀರ್ಣ, Read More »

ಸುಟ್ಟ ಬೂದಿಯೊಳಗೊಂದು ಸುಡದ ಬೂದಿಯ ಕಂಡೆ,

ಸುಟ್ಟ ಬೂದಿಯೊಳಗೊಂದು ಸುಡದ ಬೂದಿಯ ಕಂಡೆ, ಆ ಸುಡದ ಬೂದಿಯ ಬೆಟ್ಟವ ಮಾಡಿದಾತನ ಗುಟ್ಟನಾರು ಕಂಡುದಿಲ್ಲ. ನಾನು ಆತನನರಿದು ಶರಣೆಂದು ಬದುಕಿದೆ. ಆ ಬೆಟ್ಟದ ಮೇಲೆ ಅನೇಕ ವಸ್ತುಗಳ ಕಂಡು ಚರಿಸುತ್ತಿದ್ದೇನೆ ಚೆನ್ನಮಲ್ಲಿಕಾರ್ಜುನಾ.

ಸುಟ್ಟ ಬೂದಿಯೊಳಗೊಂದು ಸುಡದ ಬೂದಿಯ ಕಂಡೆ, Read More »

ಸುಖದ ಸುಖಿಗಳ ಸಂಭಾಷಣೆಯಿಂದ

ಸುಖದ ಸುಖಿಗಳ ಸಂಭಾಷಣೆಯಿಂದ ದುಃಖಕ್ಕೆ ವಿಶ್ರಾಮವಾಯಿತ್ತು. ಭಾವಕ್ಕೆ ತಾರ್ಕಣೆಯಾದಲ್ಲಿ, ನೆನಹಕ್ಕೆ ವಿಶಾಮವಾಯಿತ್ತು. ಬೆಚ್ಚು ಬೆರಸಲೊಡನೆ ಮಚ್ಚು ಒಳಕೊಂಡಿತ್ತಯ್ಯಾ, ಚೆನ್ನಮಲ್ಲಿಕಾರ್ಜುನಯ್ಯಾ ನಿಮ್ಮ ಶರಣರ ಸಂಗದಿಂದ.

ಸುಖದ ಸುಖಿಗಳ ಸಂಭಾಷಣೆಯಿಂದ Read More »

ಸರ್ಪನ ಬಾಯ ಕಪ್ಪೆ ನೊಣಕ್ಕೆ ಹಾರುವಂತೆ

ಸರ್ಪನ ಬಾಯ ಕಪ್ಪೆ ನೊಣಕ್ಕೆ ಹಾರುವಂತೆ ಆಪ್ಯಾಯನ ಬಿಡದು. ಕಾಯವರ್ಪಿತವೆಂಬ ಹುಸಿಯ ನೋಡಾ. ನಾನು ಭಕ್ತಳೆಂಬ ನಾಚಿಕೆಯ ನೋಡಾ. ನಾನು ಯುಕ್ತಳೆಂಬ ಹೇಸಿಕೆಯ ನೋಡಾ. ಓಗರವಿನ್ನಾಗದು, ಪ್ರಸಾದ ಮುನ್ನಿಲ್ಲ ; ಚೆನ್ನಮಲ್ಲಿಕಾರ್ಜುನಯ್ಯ ಉಪಚಾರದರ್ಪಿತವನವಗಡಿಸಿ ಕಳೆವ

ಸರ್ಪನ ಬಾಯ ಕಪ್ಪೆ ನೊಣಕ್ಕೆ ಹಾರುವಂತೆ Read More »

ಸಪ್ತಧಾತುಗಳಿಂದ ಬಳಸಲ್ಪಟ್ಟ ಈ ಶರೀರವೆ

ಸಪ್ತಧಾತುಗಳಿಂದ ಬಳಸಲ್ಪಟ್ಟ ಈ ಶರೀರವೆ ಶಿವನ ಪಟ್ಟಣವೆಂದು ಹೇಳಲ್ಪಟ್ಟಿತ್ತು. ಈ ಪಿಂಡವೆಂಬ ಪಟ್ಟಣದಲ್ಲಿ ಸೂಕ್ಷ್ಮವಾದಂಥಧಾರಾಕಾಶದಿಂದ ಮನೋಹರವಾಗಿದ್ದ ಹೃದಯಕಮಲವೆ ಅಂತಃಪುರವು. ಅಲ್ಲಿ ನಿತ್ಯಪರಿಪೂರ್ಣತ್ವದಿಂದ ಸಿದ್ಧನಾಗಿ ಸಚ್ಚಿದಾನಂದವೇ ಕುರುಹಾಗುಳ್ಳ ಪರಮಶಿವನು ಜಲದಲ್ಲಿ ತೋರುತ್ತಿರ್ದ ಆಕಾಶದೋಪಾದಿಯಲ್ಲಿ ಪ್ರತ್ಯಕ್ಷವಾಗಿ ಪ್ರಕಾಶವೇ ಸ್ವರೂಪವಾಗುಳ್ಳಾತನಾಗಿ ಇರುತಿರ್ದನು. ಆ ಜಲಮಧ್ಯದಲ್ಲಿಯ ಆಕಾಶ ಬಿಂಬದಲ್ಲಿರುತಿರ್ದ ಘಟಾಕಾಶದೋಪಾದಿಯಲ್ಲಿ ಖಂಡಿತನಾಗಿರ್ದ ಚಿದ್ರೂಪನಾದ ಶಿವನನು ಭಾವಿಸುವುದಯ್ಯ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.

ಸಪ್ತಧಾತುಗಳಿಂದ ಬಳಸಲ್ಪಟ್ಟ ಈ ಶರೀರವೆ Read More »

ಸದ್ಗುರು ಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ

ಸದ್ಗುರು ಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ ತಚ್ಫಿಷ್ಯನ ಮಸ್ತಕದ ಮೇಲೆ ತನ್ನ ಹಸ್ತವನಿರಿಸಿದಡೆ ಲೋಹದ ಮೇಲೆ ಪರುಷ ಬಿದ್ದಂತಾಯಿತ್ತಯ್ಯಾ. ಒಪ್ಪುವ ಶ್ರೀ ವಿಭೂತಿಯ ನೊಸಲಿಂಗೆ ಪಟ್ಟವಕಟ್ಟಿದಡೆ ಮುಕ್ತಿರಾಜ್ಯದ ಒಡೆತನಕ್ಕೆ ಪಟ್ಟವಕಟ್ಟಿದಂತಾಯಿತ್ತಯ್ಯಾ. ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನವೆಂಬ ಪಂಚಕಳಶದಭಿಷೇಕವ ಮಾಡಿಸಲು, ಶಿವನ ಕರುಣಾಮೃತದ ಸೋನೆ ಸುರಿದಂತಾಯಿತ್ತಯ್ಯಾ. ನೆರೆದ ಶಿವಗಣಂಗಳ ಮಧ್ಯದಲ್ಲಿ ಮಹಾಲಿಂಗವನು ಕರತಳಾಮಳಕವಾಗಿ ಶಿಷ್ಯನ ಕರಸ್ಥಲಕ್ಕೆ ಇತ್ತು, ಅಂಗದಲ್ಲಿ ಪ್ರತಿಷ್ಠಿಸಿ, ಪ್ರಣವಪಂಚಾಕ್ಷರಿಯುಪದೇಶವ ಕರ್ಣದಲ್ಲಿ ಹೇಳಿ, ಕಂಕಣವ ಕಟ್ಟಿದಲ್ಲಿ, ಕಾಯವೆ ಕೈಲಾಸವಾಯಿತ್ತು ; ಪ್ರಾಣವೆ ಪಂಚಬ್ರಹ್ಮಮಯಲಿಂಗವಾಯಿತ್ತು. ಇಂತು ಮುಂದ

ಸದ್ಗುರು ಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ Read More »

ಸತಿ ಎಂಬುದು ಮಾಟ, ಪತಿಯೆಂಬುದು ಮಾಟ,

ಸತಿ ಎಂಬುದು ಮಾಟ, ಪತಿಯೆಂಬುದು ಮಾಟ, ತನುವೆಂಬುದು ಮಾಯೆ, ಮನವೆಂಬುದು ಮಾಯೆ, ಸುಖವೆಂಬುದು ಮಾಯೆ, ಚೆನ್ನಮಲ್ಲಿಕಾರ್ಜುನನೆನಗೆ ಕೈಹಿಡಿದ ಗಂಡನಲ್ಲದೆ ಮಿಕ್ಕಿನವರೆಲ್ಲರೂ ಮೂಗಿಲ್ಲದ ಬಣ್ಣದ ಬೊಂಬೆಗಳು ಕಾಣಯ್ಯಾ.

ಸತಿ ಎಂಬುದು ಮಾಟ, ಪತಿಯೆಂಬುದು ಮಾಟ, Read More »

ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು

ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು ನಿಚ್ಚಲೊಂದು ಉಪದೇಶ ಮಂತ್ರವ ಕಲಿತಂತೆ. ಬಚ್ಚಬ¾Âಯ ಭವಿಗಳ ಸಂಗದಲ್ಲಿದ್ದರೆ ಕಿಚ್ಚಿನೊಳಗೆ ಬಿದ್ದ ಕೀಡೆಯಂತಪ್ಪುದಯ್ಯ. ಸುಚಿತ್ತದಿಂದ ನಿಮ್ಮ ಸದ್ಭಕ್ತರ ಸಂಗದಲ್ಲಿರಿಸದಿರ್ದಡೆ ನಾನಿನ್ನೆತ್ತ ಸಾರುವೆನು ಹೇಳಾ ಚೆನ್ನಮಲ್ಲಿಕಾರ್ಜುನಾ ?

ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು Read More »

ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು.

ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು. ಸಟೆದಿಟವೆಂಬ ಎರಡುವಿಡಿದು ನುಡಿವುದೀ ಲೋಕವೆಲ್ಲವು. ಸಟೆದಿಟವೆಂಬ ಎರಡುವಿಡಿದು ನಡೆವನೆ ಶರಣನು ? ಗುರುಲಿಂಗಜಂಗಮದಲ್ಲಿ ಸಟೆಯ ಬಳಸಿದಡೆ ಅವನು ತ್ರಿವಿಧಕ್ಕೆ ದ್ರೋಹಿ, ಅಘೋರ ನರಕಿ. ಉಂಬುದೆಲ್ಲ ಕಿಲ್ಬಿಷ, ತಿಂಬುದೆಲ್ಲ ಅಡಗು, ಕುಡಿವುದೆಲ್ಲ ಸುರೆ. ಹುಸಿಯೆಂಬುದೆ ಹೊಲೆ, ಶಿವಭಕ್ತಂಗೆ ಹುಸಿಯೆಂಬುದುಂಟೆ ಅಯ್ಯಾ ? ಹುಸಿಯನಾಡಿ ಲಿಂಗವ ಪೂಜಿಸಿದಡೆ ಹೊಳ್ಳ ಬಿತ್ತಿ ಫಲವನರಸುವಂತೆ,

ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು. Read More »

ಸಂಸಾರಸಂಗದಲ್ಲಿರ್ದೆ ನೋಡಾ ನಾನು.

ಸಂಸಾರಸಂಗದಲ್ಲಿರ್ದೆ ನೋಡಾ ನಾನು. ಸಂಸಾರ ನಿಸ್ಸಾರವೆಂದು ತೋರಿದನೆನಗೆ ಶ್ರೀಗುರು. ಅಂಗವಿಕಾರದ ಸಂಗವ ನಿಲಿಸಿ, ಲಿಂಗವನಂಗದ ಮೇಲೆ ಸ್ಥಾಪ್ಯವ ಮಾಡಿದನೆನ್ನ ಗುರು, ಹಿಂದಣ ಜನ್ಮವ ತೊಡೆದು, ಮುಂದಣ ಪ ಥವ ತೋರಿದನೆನ್ನ ತಂದೆ. ಚೆನ್ನಮಲ್ಲಿಕಾರ್ಜುನನ ನಿಜವ ತೋರಿದನೆನ್ನ ಗುರು.

ಸಂಸಾರಸಂಗದಲ್ಲಿರ್ದೆ ನೋಡಾ ನಾನು. Read More »

ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ.

ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ. ಎನ್ನ ವಂಶವಂಶದಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯಾ. ಎನ್ನುವನರಸಿಯರಸಿ ಹಿಡಿದು ಕೊಲುತ್ತಿದೆಯಯ್ಯಾ. ನಿನ್ನ ನಾ ಮರೆಹೊಕ್ಕೆ ಕಾಯಯ್ಯಾ. ಎನ್ನ ಬಿನ್ನಪವನವಧರಿಸಾ, ಚೆನ್ನಮಲ್ಲಿಕಾರ್ಜುನಾ.

ಸಂಸಾರವೆಂಬ ಹಗೆಯಯ್ಯಾ ಎನ್ನ ತಂದೆ. Read More »

ಸಂಸಾರವ ನಿರ್ವಾಣವ ಮಾಡಿ,

ಸಂಸಾರವ ನಿರ್ವಾಣವ ಮಾಡಿ, ಮನವ ವಜ್ರತುರಗವ ಮಾಡಿ, ಜೀವವ ರಾವುತನ ಮಾಡಿ, ಮೇಲಕ್ಕೆ ಉಪ್ಪರಿಸಲೀಯದೆ, ಮುಂದಕ್ಕೆ ಮುಗ್ಗರಿಸಲೀಯದೆ ಈ ವಾರುವನ ಹಿಂದಕ್ಕೆ ಬರಸೆಳೆದು ನಿಲಿಸಿ, ಮೋಹರವಾಗಿದ್ದ ದಳದ ಮೇಲೆ, ಅಟ್ಟಿ ಮುಟ್ಟಿ ತಿವಿದು ಹೊಯಿದು ನಿಲಿಸಲಎರಿಯದೆ, ಧವಳಬಣ್ಣದ ಕೆಸರುಗಲ್ಲ ಮೆಟ್ಟಿ ತೊತ್ತಳದುಳಿವುತ್ತಲು ಇದಾರಯ್ಯಾ. ಅಂಗಡಿಯ ರಾಜಬೀದಿಯೊಳಗೆ ಬಿದ್ದ ರತ್ನಸೆಟ್ಟಿ ಈ ಥಳಥಳನೆ ಹೊಳವ ಪ್ರಜ್ವಲಿತವ ಕಾಣದೆ ಹಳಹಳನೆ ಹಳಸುತ್ತೈದಾರೆ ಅಯ್ಯಾ. ಆಧಾರಸ್ಥಾನದ ಇಂಗಳವನಿಕ್ಕಿ ವಾಯು ಪವನದಿಂದ ನಿಲಿಸಲು, ಆ ಅಗ್ನಿಯ ಸೆಕೆ ಹೋಗಿ ಬ್ರಹ್ಮರಂಧ್ರವ ಮುಟ್ಟಲು, ಅಲ್ಲಿರ್ದ

ಸಂಸಾರವ ನಿರ್ವಾಣವ ಮಾಡಿ, Read More »

ಸಂಗನಬಸವಣ್ಣನ ಪಾದವ ಕಂಡೆನಾಗಿ

ಸಂಗನಬಸವಣ್ಣನ ಪಾದವ ಕಂಡೆನಾಗಿ ಎನ್ನ ಅಂಗ ನಾಸ್ತಿಯಾಯಿತ್ತು. ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣ ಬಯಲಾಯಿತ್ತು. ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನಗೆ ಅರಿವು ಸ್ವಾಯತವಾಯಿತ್ತು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಕರುಣವ ಪಡೆದೆನಾಗಿ ಎನಗಾವ ಜಂಜಡವೂ ಇಲ್ಲವಯ್ಯಾ ಪ್ರಭುವೆ.

ಸಂಗನಬಸವಣ್ಣನ ಪಾದವ ಕಂಡೆನಾಗಿ Read More »