ಶೋಕವ್ಯಾತಕೆ ಮನವೆ ನಿನಗೆ ಇನ್ನು

ಶೋಕವ್ಯಾತಕೆ ಮನವೆ ನಿನಗೆ ಇನ್ನು ಈ ಕುಮಾರಕ ನಿನಗೆ ಗತಿಯ ವಿಧಿಸುವನೇನೊ ಕೃಷ್ಣ ಸೋದರಮಾವ ಮತ್ತೆ ಭೀಮಸೇನ ಜೇಷ್ಠ ಪಿತೃ ಪಾರ್ಥಾದಿ ಮಹಧೀರರು ಇಷ್ಟು ಮಂದಿರಲಾಗಿ ಅಭಿಮನ್ಯು ಪ್ರಾಣವನು ಬಿಟ್ಟು ಹೋಗಲು ಒಬ್ಬರಾದರುಳುಹಿದರೇನೊ ||1|| ವಸಿಷ್ಠ ಮುನಿಪರಿಗೆ ನೂರುಮಂದಿ ಸುತರು ಅಸಮ ಸಾಸಿಗರು ಮಹ ಶೀಲಜ್ಞರು ಕುಶಲದಿಂದಿರುತಿರ್ದು ಅ-ಕಾಲ ಮೃತ್ಯುವಿನ ವಶರಾಗಿ ಪೋದರು ನೋಡಿ ಅಚ್ಚರಿಯ||2|| ಇಂಥವರಿಗೀ ರೀತಿ ನಿನಗಾವ ಸ್ವಾತಂತ್ರ್ಯ ಸಂತೋಷವನು ತೊಡೋ ಮನಸಿನಲ್ಲಿ ಕಂತು ಜನಕ ನಮ್ಮ ವಿಜಯವಿಠ್ಠಲನಂಘ್ರಿ ಸ್ವಾಂತದಲ್ಲಿ ನೆನೆನೆನೆದು ಸುಖಿಯಾಗು ಮನವೆ||3||

ಶೋಕವ್ಯಾತಕೆ ಮನವೆ ನಿನಗೆ ಇನ್ನು Read More »

ಶೋಕವಾಗುವುದು ಯಾತಕೆ ಎಲಾ

ಶೋಕವಾಗುವುದು ಯಾತಕೆ ಎಲಾ | ಕಾಕುಲಾತೀ ಸಲ್ಲ ಕರಣಶುದ್ಧನಾಗು ಜೀವಕ್ಕೆ ಎಂಬೆನೆ ಆನಂತಕಲ್ಪಕ್ಕೆ ಜೀವನಿತ್ಯ ಸುಖೀ ಎಲ್ಲಿದ್ದರೂ ಸಾವೆ ಹುಟ್ಟೀಯಲ್ಲಿ ಸತತದಲಿ ಚರಿಸಿದರು ಜೀವ ಉಂಬುವದೆತ್ತ ಪ್ರಾಪ್ತವಾದ ಕ್ಲೇಶ ||1|| ಶರೀರಕೆಂಬೆನೆ ಚೇತನ ತಪ್ಪಿದರೆ ಇರುವುದು ಜಡವಾಗಿ ಬಿದ್ದುಕೊಂಡು ಹಿರಿದಾಗಿ ತಿಳಿವುದು ಜಡಕೆ ಲೇಪನವುಂಟೆ ಚರಾಚರದಲಿ ಇದೆ ಸಿದ್ಧವಾಗಿಪ್ಪಯಾ ||2|| ಪಾರ ನೋಡುವದು ಈ ಪರಿ ಜ್ಞಾನದಲಿದು ಸಾರ ಕಾಣಿಸದು ಸಂಸಾರದೊಳಗೆ ಮಾರಜನಕ ನಮ್ಮ ವಿಜಯವಿಠ್ಠಲ ಹರಿಯ ಸಾರದಲೆ ಅಭಿಮಾನ ಬಿಡದವಗೆ ಇದೆ ಉಂಟು ||3||

ಶೋಕವಾಗುವುದು ಯಾತಕೆ ಎಲಾ Read More »

ಶುಭಸುಂದರ ಕಾಯಾ ವಿಭುವೆ ಸುರಗುರುರಾಯಾ

ಶುಭಸುಂದರ ಕಾಯಾ ವಿಭುವೆ ಸುರಗುರುರಾಯಾ | ಅಭಿವಂದಿಸುವೆನೊ ಜೀಯ್ಯಾ ನಿರುತ ಅಂತರದೊಳು ಹರಿಗೆ ಸಮ್ಮೊಗನಾಗಿ ಕರವ ಜೋಡಿಸಿ ಬಿನ್ನೈಪಾ || ಗುರುವೆ ಎನ್ನಯ ಮಾತು ಕೇಳೊ ದುರಿತ ರಾಶಿ | ಪರಿಹಾರ ಮಾಡಿಸಯ್ಯಾ ||1|| ಮಾರುತಿ ಸದಾಗತಿ ಭಾರತೀಪತಿ ಯತಿ | ಮಾರಾರಾತಿಗೆ ನೀ ಗತಿ || ಮಾರುತ್ತರ ಕಾಣೆ ಮಾರುತಿ ಮಾರಿಗಳಿಗೆ ನಿರುತ ಮಾರಕ ನೀನಹುದೋ||2|| ವಾಯು ಎನಗೆ ಸಂಪೂರ್ಣಾಯು ಪಾಲಿಸೊ ಸರ್ವ | ಸಾಯುಜ್ಯ ಸಾರೂಪ್ಯನೆ || ಕುಯುಕ್ತಿ ಜನರ ಗದಾಯುದ್ಧದಿಂದಟ್ಟಿ | ಈ

ಶುಭಸುಂದರ ಕಾಯಾ ವಿಭುವೆ ಸುರಗುರುರಾಯಾ Read More »

ಶುಭವೀವ ನಿರುತದಲಿ ಮಂದಹಾಸಾ

ಶುಭವೀವ ನಿರುತದಲಿ ಮಂದಹಾಸಾ ಅಭಯಗಿರಿಯ ವಾಸಾ ಶ್ರೀ ಶ್ರೀನಿವಾಸ ಧೇನಿಪರ ಮನ ಚಿಂತಾಮಣಿಯೋ | ದೇವ | ನೀನೆ ಗತಿಯೆಂಬುವರ ಧಣಿಯೋ || e್ಞÁನಮಯ ಸುಖದ ಸಂದಣಿಯೋ | ಪುಣ್ಯ | ಕಾನÀನವಾಸ ಸುರರ ಖಣಿಯೋ ||1|| ಶರಣರಿಗೆ ವಜ್ರ ಪಂಜರನೋ | ದೇವ | ದುರುಳರಿಗೆ ವೀರ ಜರ್ಝರನೋ || ದುರಿತಕದಳಿಗೆ ಕುಂಜರನೋ | ವರಕಲ್ಪ ಕಲ್ಪ ವಿಚಲನೋ ||2|| ಪರಮೇಷ್ಠಿ ಶಿವರೊಳಗೆ ಯಿಪ್ಪ | ದೇವ | ಮರುತನ್ನ ಹೆಗಲೇರಿ ಬಪ್ಪಾ || ಶರಣರಿಗೆ

ಶುಭವೀವ ನಿರುತದಲಿ ಮಂದಹಾಸಾ Read More »

ಶುಕಪಿತನ ಪದಕಂಜ ಪದುಪಾ

ಶುಕಪಿತನ ಪದಕಂಜ ಪದುಪಾ | ಅಖಿಳ ಲೋಕದ ಗುರುವೆ ಸುಖ ತೀರ್ಥ ಮುನಿಪಾ ಮತಿ ತಿರಸ್ಕಾರವಾಗಿ ನಿತ್ಯ ನೈಮಿತ್ಯಗಳು | ಗತಿ ತಪ್ಪಿ ಪೋಗಿರಲು ಸರ್ವ ದೇವತೆಗಳು || ಪಥವ ಕಾಣದೆ ನೆರೆದು ಯೋಚಿಸಿ ತಮ್ಮೊಳು | ಅತಿಶಯದಿ ವೊದರಿ ಕೇಳು ಭವನದಾ | ಪತಿಯಾದ ಬೊಮ್ಮಗುಸರಿದರಂದು ಮೇಲು||1|| ತುತಿಸಲಾಕ್ಷಣ ಕೇಳಿ ಅಜನು ಶಿರದೂಗಿದನು | ಕೃತಭುಜರ ಸಹವಾಗಿ ಹರಿಪುರಕೆ ಸಾಗಿದನು | ನತನಾಗಿ ಶಿರಿಪತಿಯ ಪದಯುಗಕೆ ಬಾಗಿದನು | ಗತಿ ನೀನೆ ಎಂದು ಕೂಗಿದನು ಹರಿ

ಶುಕಪಿತನ ಪದಕಂಜ ಪದುಪಾ Read More »

ಶಿವನ ನೋಡಿರೊ ಇಂದು ಸ್ತವನ ಮಾಡಿರೊ

ಶಿವನ ನೋಡಿರೊ ಇಂದು ಸ್ತವನ ಮಾಡಿರೊ | ತವಕದಿಂದ ತಿಳಿದು ಅವಗುಣಂಗಳ ತೊರೆದು ನಿತ್ಯ ಅಂತಕಾಪುರ ವೈರಿ | ದಿನಾಂತ ವೃಷಭನೇರಿ | ಶಾಂತಿ ಸಹಿತ ಜನರಂಗಣದಿ | ನಿಂತು ಮಾತು | ಲಾಲಿಪ ಮಹಿಮ ||1|| ಸುರಜನತೆ ಪ್ರೀತ ಸರ್ವದ | ಅಸುರ ವೈರಿಯು ನೇಮದಿಂದ | ವಸುಧೆಯಾಳಗೆ ಬಲಿದಾನೇಕಾ | ದಶರುದ್ರರೊಳು ಬಲು ಗುಣವಂತ ||2|| ದಕ್ಷ ಪ್ರಜೇಶ್ವರನಧ್ವರ | ರಕ್ಷಣೆ ಮಾಡಿದ ದಕ್ಷಮೂರ್ತಿ | ಮೋಕ್ಷಕೆ ಮನಸು ಕೊಡುವ | ನಿಟಲೇಕ್ಷವಂತ ಶಾಂತ

ಶಿವನ ನೋಡಿರೊ ಇಂದು ಸ್ತವನ ಮಾಡಿರೊ Read More »

ಶಾರದಾಂಬಿಕೆ ನಿತ್ಯ ಶಾರದಾ ಕೊಡು ಎನಗೆ

ಶಾರದಾಂಬಿಕೆ ನಿತ್ಯ ಶಾರದಾ ಕೊಡು ಎನಗೆ | ಸಾರುವೆ ನಾ ನಿನ್ನ ಪುಂಡರೀಕ ನಯನೆ ಪುಂಡರೀಕನ ರಾಣಿ ಪುಂಡರೀಕಗಮನೆ | ಪುಂಡರೀಕ ಚರ್ಮಾಂಬರ | ಪುಂಡರೀಕನಾಥನುತೆ ಪುಂಡರೀಕವೆ ನಮಗೆ ||1|| ಶುಚಿ ಶರೀರಳೆ ಎನ್ನ ಶುಚಿಯ ಮಾಡುವ ಈ | ಶುಚಿಯೊಳಗೆ ನಿನ್ನ ಕೀರ್ತಿ ಶುಚಿಯಾಗಿ ಮನದಲ್ಲಿ | ಶುಚಿ ಜನ ಪೇಳುತಿದೆ | ಶುಚಿ ಮಾರ್ಗವನೆ ತೋರಿಸೆ ||2|| ಕೌಂಶಿಕ ವಾಣಿಯೆ ಕೌಂಶಿಕ ಬಿಂಬಸದನೆ | ಕೌಂಶಿಕವೇಣಿ ಕರುಣಿ | ಕೌಂಶಿಕ ವಿಜಯವಿಠ್ಠಲನಲ್ಲಿಕೌಂಶಿಕದವನ ಮಾಡು||3||

ಶಾರದಾಂಬಿಕೆ ನಿತ್ಯ ಶಾರದಾ ಕೊಡು ಎನಗೆ Read More »

ಶರಣು ಶ್ರೀ ವ್ಯಾಸಮುನಿ

ಶರಣು ಶ್ರೀ ವ್ಯಾಸಮುನಿ ಚರಣಾಬ್ಜ್ಬ ಭೃಂಗ ಜಯ ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ ಗುರು ಪುರಂದರದಾಸರೆ ನಿಮಗೆ ಪಾಕಶಾಸನಪುರದ ಚಿನಿವಾರ ವರದಪ್ಪ ನಾ ಕುಮಾರನಾಗಿ ಜನಿಸಿ ಸಂಸಾರದೊಳು ನೇಕ ಬಗೆಯಿಂದ ವಿಷಯಾನಂತೆ ಸಂಚರಿಸಿ ಲೌಕಿಕವನ್ನೆ ತೊರೆದು ಈ ಕಲಿಯುಗದಲ್ಲಿ ತುಂಗಾತೀರ ಪಂಪಾ ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ ||1|| ಕಾಮಕ್ರೋಧ ಲೋಭ ಮದ ಮತ್ಸರ ಡಂಭ ಈ ಮರಿಯಾದಿಗಳ ಮರ್ಮವನೆ

ಶರಣು ಶ್ರೀ ವ್ಯಾಸಮುನಿ Read More »

ಶರಣು ಶೇಷಾಚಲ ನಿವಾಸಗೆ

ಶರಣು ಶೇಷಾಚಲ ನಿವಾಸಗೆ | ಶರಣು ವರಹ ತಿಮ್ಮಪ್ಪಗೆ | ಶರಣು ಅಲಮೇಲುಮಂಗ ರಮಣಗೆ ಶರಣು ತಿರುವೆಂಗಳೇಶಗೆ ಧರಣಿಧರ ಗೋವಿಂದ ಮಾಧವ | ನರಹರಿ ಮಧುಸೂದನಾ | ಮುರಹರ ಮುಕುಂದ ಅಚ್ಯುತ | ಗಿರಿಜನುತ ನಾರಾಯಣಾ ||1|| ಕ್ಷೀರ ವಾರಿಧಿಶಯನ ವಾಮನ | ಮಾರ ಜನಕ ಗೋಪಿ ಜನ | ಜಾರ ನವನೀತ | ಚೋರ ರಿಪು ಸಂಹಾರ ಹರಿ ದಾಮೋದರ ||2|| ಗರುಡಗಮನನೆ ಗರಳ ತಲ್ಪನೆ | ಕರುಣಾಳುಗಳ ಒಡೆಯನೆ | ಉರಗ ಗಿರಿ ಸಿರಿ

ಶರಣು ಶೇಷಾಚಲ ನಿವಾಸಗೆ Read More »

ಶರಣು ಶರಣು ಲಿಂಗಾ

ಶರಣು ಶರಣು ಲಿಂಗಾ | ಶರಣು ಶ್ರೀ ಭಸಿತಾಂಗಾ | ಶರಣು ಗಗನ ಗಂಗಾಧರ ಗೋರಾಜ ತುರಂಗ | ಗುರುಕುಲೋತ್ತುಂಗಾ ಅಂತರಿಕ್ಷ ಪುರಹರ | ಸಂತರ ಮನೋಹರ | ಅಂತಕನ ಗೆದ್ದೆ | ದಂತಿ ಚರ್ಮವ ಪೊದ್ದೆ | ಕಂತು ಮುನಿಯ ಗೆಲಿದೆ ಮಂತ್ರಿವಂದಿತ ಶೀಲ | ಸಂತತಿಗಳ ಪಾಲ | ಅಂತರಂಗದಲೆನ್ನ ಗ್ರಂಥಿಯ ಹರಿಸಿ ನಿರಂತರ ಸಂತರಿಸೋ||1|| ಮನ ವೈರಾಗ್ಯದಧಿಪತಿಯೇ | ಮುನಿದು ದುರ್ವಾಸ ಶುಕ ಯತಿಯೆ | ವನದೊಳು ರಾಯನ | ವನುತಿಯ ಮಾಡಿದ

ಶರಣು ಶರಣು ಲಿಂಗಾ Read More »

ಶರಣು ಶರಣು

ಶರಣು ಶರಣು ಶರಣು ಭಾರತಿದೇವಿಗೆ ಶರಣು ವಾಯುರಮಣಿಗೆ ಶರಣು ಶರಣರ ಪೊರೆವ ಕರುಣಿಗೆ ಶರಣು ಸುರವರ ದೇವಿಗೆ ಶ್ರಧ್ಧೆ ಭಾರತಿ ಭಾಗ್ಯ ಸಂಪನ್ನೆ ಪದ್ಮ ಮಂದಿರ ನಂದನೆ ಬುದ್ಧಿ ವರದಾಯಕಳೆ ಕರುಣಾಬ್ಧಿಯೆ ಭಕ್ತರ ಪ್ರಿಯಳೆ ||1|| ಖಗ ಪನ್ನಗ ಗಿರಿಶರಿಂದಲಿ ಮಿಗಿಲೆನಿಪೆ ಶತಗುಣದಲಿ ಮೃಗನ ನಾಭಿ ನೊಸಲಿಗೊಪ್ಪುವ ಮೃಗಕಲಾನನೆ ದೇವಿಯೆ||2|| ಇಂದ್ರಸೇನಳೆ ವಿಪ್ರಕನ್ನಿಕೆ ಚಂದ್ರಾಧಿಷ್ಠನ ವಾಸಳೆ ಇಂದ್ರನುತ ಸಿರಿ ವಿಜಯವಿಠ್ಠಲನ ವಂದಿಪ ದ್ರೌಪದಿ ದೇವಿಯೆ||3||

ಶರಣು ಶರಣು Read More »

ಶರಣು ವಾಯು ತನುಜ ಶರಣು ಭಾಸ್ಕರ ತೇಜ

ಶರಣು ವಾಯು ತನುಜ ಶರಣು ಭಾಸ್ಕರ ತೇಜ | ಶರಣು ರಾಜಾಧಿರಾಜ | ಶರಣು ಗೋಸಹಜ | ಶರಣಾರ ಸುರಭೋಜ ಸೂತ್ರನಾಮಕ ದೇವ | ಸ್ತೋತ್ರ ಮಾಳ್ಪರ ಕಾವ | ಚಿತ್ರ ಮಹಿಮರ ಕಾವ ವಿ | ಚಿತ್ರ ಶರೀರ ಸ | ತ್ಪಾತ್ರನೆ ಸುಮನಸದಲಿಗರಳ ಹೇಮ | ಪಾತ್ರಿಯೊಳಗೆ ಸವಿದು ಶ್ರೀಪತಿಯ ಶತ | ಪತ್ರ ಪಾದವ ಕಾ | ಲತ್ರಯ ನೆನೆಸುವನೆ ||1|| e್ಞÁನ ಭಕುತಿ ವೈರಾಗ್ಯ ನೀ ನೀಯೋ ಇದೆ ಭಾಗ್ಯ ನಾನಾವದೂ

ಶರಣು ವಾಯು ತನುಜ ಶರಣು ಭಾಸ್ಕರ ತೇಜ Read More »

ಶರಣು ಮಾರುತನ ರಾಣಿಗೆ

ಶರಣು ಮಾರುತನ ರಾಣಿಗೆ | ಶರಣು ನಿತ್ಯ ಕಲ್ಯಾಣಿಗೆ | ಶರಣು ಶರಣು ಲೋಕ ಜನನಿಗೆ | ಶರಣು ಮುಂದಣ ವಾಣಿಗೆ ಶ್ರದ್ಧೆ ಭಾರತಿ ಭಾಗ್ಯ ಸಂಪನ್ನೆ | ಪದ್ಮ ಮಂದಿರ ನಂದನೆ | ಭದ್ರ ಫಲದಾಯಕಳೆ ಕರುಣಾಬ್ಧಿಯೇ ಭಕ್ತರಪ್ರಿಯೇ ||1|| ಖಗಪನ್ನಗ ನಗಮಗಳ ಪತಿಯಿಂದ ಮಿಗಿಲೆನಿಪೆ ಶತಗುಣದಲಿ | ಮೃಗನಾಭಿ ನೊಸಲಲ್ಲಿ ಶೋಭಿಸೆ | ಮೃಗಕುರುಹ ಸಿರಿಮೊಗದವಳೆ||2|| ಇಂದ್ರಸೇನಳೆ ವಿಪ್ರ ಕನ್ನಿಕೆ | ಚಂದ್ರದಿ ಸ್ಥಾನವಾಸಳೆ | ಇಂದ್ರನುತ ಸಿರಿ ವಿಜಯವಿಠ್ಠಲನ |ವಂದಿಸುವ ದ್ರೌಪದಿದೇವಿ ||3||

ಶರಣು ಮಾರುತನ ರಾಣಿಗೆ Read More »

ಶರಣು ಗಿರಿಯ ತಿಮ್ಮಾ

ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಸ್ಮರ ಕೋಟಿ ಲಾವಣ್ಯ | ನಿರುತ ದೇವ ವರೇಣ್ಯ | ಕರಿರಾಜನ ಭಂಗ | ಹರಿಸಿದ ಶಿರಿ ರಂಗ | ಸುರವಿನುತ ವಿಹಂಗ | ತುರಗ ತುರಗ ವದನ | ಪರಮ ವಾರಿಜ ಸದನ | ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ ||1|| ಆದಿ ಮೂಲನೆ

ಶರಣು ಗಿರಿಯ ತಿಮ್ಮಾ Read More »

ಶಂಭೋ ಸ್ವಯಂಭು ಸಂಭವ

ಶಂಭೋ ಸ್ವಯಂಭು ಸಂಭವ-ನಂಬಿದೆ ಕಾಯೊ ಜಂಭಾರಿಸುತ ಅಭವ ಅಂಬರ ಪುರಹರ ಸಾಂಬ ತ್ರಿಯಂಬಕ ಶಂಬಕಾರಿ ರಿಪುಗಂಭೀರ ಕರುಣಿ ಭಸಿತ ಭೂಷಿತ ಶರೀರ-ಭಕ್ತರುದ್ಧಾರ ವಿಷಕಂಠ ದುರಿತಹರ ಪಶುಪತಿ ಫಣಿಹಾರ-ಪಾವನಕಾರ ತ್ರಿಶೂಲ ಡಮರುಗಧರ ನೊಸಲನಯನ ವಿಕಸಿತಾಂಬುಜ ಮುಖ ಶಶಿಧರ ಮತ್ತರಕ್ಕಸ ಮದ ಮರ್ದನ ಘಸಣೆಗೊಳಿಪ ತಾಮಸವ ಕಳೆದು ಮಾ- ನಸದಲಿ ರಂಗನ ಬಿಸಜ ಪಾದವ ತೋರೊ ||1|| ರಜತ ಪರ್ವತ ನಿವಾಸ ನಿರ್ಮಲ ಭಾಸ ಗಜವೈದ್ಯನಾಶ ಗಿರೀಶ ಸುಜನರ ಮನೋವಿಲಾಸ ವ್ಯೋಮಕೇಶ ತ್ರಿಜಗದಲ್ಲಣ ಗೌರೀಶ ಅಜಸುತನಧ್ವರ ಭಜನೆಯ ಕೆಡಸಿದೆ ಅಜಗರ

ಶಂಭೋ ಸ್ವಯಂಭು ಸಂಭವ Read More »

ಶ್ರೀರಾಮರ ಪೂಜಿಸಲಿಲ್ಲ – ಮೈಮರೆತೆನಲ್ಲ

ಶ್ರೀರಾಮರ ಪೂಜಿಸಲಿಲ್ಲ – ಮೈಮರೆತೆನಲ್ಲ ಬಾಲತ್ವದಲಿ ಬಲು ಲೀಲೆಯಿಂದಲಿ ನಾನುಕಾಲವ ಕಳೆದೆನಲ್ಲ – ಮೈಮರೆತೆನಲ್ಲ ||1|| ಸತಿಸುತರೆ ಎನಗೆ ಗತಿಯೆಂದು ತಿಳಿದು ನಾನುಮತಿಗೆಟ್ಟು ಭ್ರಾಂತನಾದೆನಲ್ಲ – ಮೈಮರೆತೆನಲ್ಲ ||2|| ಹೊನ್ನ ಗಳಿಸಿ ಪರರಿಗೆ ಅನ್ನವಿಕ್ಕಲಿಲ್ಲಚೆನ್ನಕೇಶವನ ನಂಬಲಿಲ್ಲ – ಮೈಮರೆತೆನಲ್ಲ||3||

ಶ್ರೀರಾಮರ ಪೂಜಿಸಲಿಲ್ಲ – ಮೈಮರೆತೆನಲ್ಲ Read More »

ಶ್ರೀರಾಮ ಎನ್ನಿರೊ ಮೂಜಗದವರೆಲ್ಲ

ಶ್ರೀರಾಮ ಎನ್ನಿರೊ ಮೂಜಗದವರೆಲ್ಲಈರೇಳು ಭುವನ ತನ್ನುದರದೊಳಿಟ್ಟನ ಅನಿಮಿಷರಂದದಿ ವನವಾಸಕೆ ಹೋದವನ _ ಶ್ರೀರಾಮ ಎನ್ನಿರೊಮನಸಿಜ ನಾರಿಯ ಪಿತನ ಕೊಂದನ ಪಿತನ ಪೊತ್ತವನ _ ಶ್ರೀರಾಮ ಎನ್ನಿರೊಘನ ಕೋಡ ಕೊನೆಯಿಂದ ಧರಣಿಯ ತಾಳ್ದವನ _ ಶ್ರೀರಾಮ ಎನ್ನಿರೊದಿನಕರನಳಿವಿನಲಿ ಪಗೆಯ ಗೆದ್ದಾತನ _ ಶ್ರೀರಾಮ ಎನ್ನಿರೊ||1|| ಗಜವನೇರಿದವನ ತಂದೆಯ ತಾಯನಳೆದವನ _ ಶ್ರೀರಾಮ ಎನ್ನಿರೊಭುಜಬಲದಿಂದ ಭೂಪಾಲರ ಗೆದ್ದವನ _ ಶ್ರೀರಾಮ ಎನ್ನಿರೊನಿಜಮುನಿಗಳ ವನದಿಂದ ತನಯರ ತಂದವನ _ ಶ್ರೀರಾಮ ಎನ್ನಿರೊಭುಜಗಧರನ ಕೈಯ ಆಯುಧವನು ತಂದವನ _ ಶ್ರೀರಾಮ ಎನ್ನಿರೊ ||2||

ಶ್ರೀರಾಮ ಎನ್ನಿರೊ ಮೂಜಗದವರೆಲ್ಲ Read More »

ಶೇಷಶಯನ ನಿನ್ನ ಪರಮ ಭಾಗವತರ

ಶೇಷಶಯನ ನಿನ್ನ ಪರಮ ಭಾಗವತರ ಸಹವಾಸದೊಳಿರಿಸು ಕಂಡ್ಯ ಎನ್ನನು ಬೇಸರಿಸದೆ ನಿನ್ನ ಹೃದಯಾಬ್ಜದೊಳಗಿರುವದಾಸರೊಳಿರಿಸು ಕಂಡ್ಯ ಎನ್ನನು ತಂದೆಯೊಡಲನು ಸೀಳಿಸಿದವರೊಳು, ದೇ-ವೇಂದ್ರನ ತಲೆಗೆ ತಂದವರೊಳು, ದು-ರ್ಗಂಧ ಪೆಣ್ಣಿಗೆ ಚಂದನದ ಕಂಪನಿತ್ತಂಥಬಾಂಧವರೊಳಗಿರಿಸು ಕಂಡ್ಯ ಎನ್ನನು ||1|| ತೋಯಜವೆಂಬ ಪುಷ್ಪದ ಪೆಸರವರೊಳುತಾಯ ಸೊಸೆಗೆ ಮಕ್ಕಳಿತ್ತವರೊಳುಆಯದಿ ದ್ವಾದಶಿ ವ್ರತವ ಸಾಧಿಸಿದಂಥರಾಯರೊಳಿರಿಸು ಕಂಡ್ಯ ಎನ್ನನು||2|| ಗಿಳಿನಾಯಿ ಪೆಸರಿನವರೊಳು, ಮುಗಿಲಹೊಳೆಯ ಹೊಟ್ಟೆಲಿ ಹುಟ್ಟಿದವರೊಳುಕೆಳದಿಯ ಜರಿದು ಶ್ರೀಹರಿದಿನ ಗೆದ್ದಂಥಹಳಬರೊಳಿರಿಸು ಕಂಡ್ಯ ಎನ್ನನು||3|| ಅಂಕಕ್ಕೆ ರಥವ ನಡೆಸಿದವರೊಳು, ನಿ-ಶ್ಶಂಕೆ ಧರ್ಮವ ಗೆದ್ದ ಹಿರಿಯರೊಳುಲಂಕೆಯ ಅನುದಿನ ಸ್ಥಿರರಾಜ್ಯವಾಳಿದಕಿಂಕರರೊಳಿರಿಸು ಕಂಡ್ಯ ಎನ್ನನು

ಶೇಷಶಯನ ನಿನ್ನ ಪರಮ ಭಾಗವತರ Read More »

ಶರಣು ಶರಣುಶರಣು ದಶರಥ

ಶರಣು ಶರಣುಶರಣು ದಶರಥ ರಾಮದೂತಗೆ ಶರಣು ಕುರುಕುಲಾಧೀಶಗೆಶರಣು ವೈಷ್ಣವ ಮತ ವಿಲಾಸಗೆಶರಣು ಮುಖ್ಯಪ್ರಾಣಗೆ ವಾರಿಧಿಯನು ವೇಗದಿ ದಾಟಿ ವನವ ಕಿತ್ತಿದಾತಗೆಮೇರೆಯಿಲ್ಲದೆ ಅಸುರರ ಸಂಹರಿಸಿದ ರಣಶೂರಗೆವಾರಿಜಾಕ್ಷಿ ಸೀತಾದೇವಿಗೆ ವರದ ಮುದ್ರಿಕೆಯನಿತ್ತಗೆಧೀರತನದಲಿ ಅಕ್ಷಕುಮಾರನ ಪ್ರಾಣವನು ಕೊಂಡಗೆ ||1|| ರಾಜಸೂಯವ ರಚಿಸಬೇಕೆಂದು ರಾಜರ ಸೀಳಿದಾತಗೆರಾಜಮುಖಿಯಳ ರಕ್ಷಿಸಿ ಮೃಗರಾಜಗೆ ಒಲಿದಾತಗೆತ್ರಿಜಗವಂದಿತ ದೇವಗೆ ಸಜ್ಜನಪ್ರಿಯ ಎನಿಪಗೆರಾಜ ಧರ್ಮಗೆ ಅನುಜನಾದಗೆ ರಾಜಪೂಜಿತ ರಾಜಗೆ||2|| ಧಾರಿಣಿಯೊಳು ದುರ್ವಾದಿ ದೈತ್ಯರ ಗಂಟಲಗಾಣವಾದಗೆಮೂರೇಳು ಮತವನೆಲ್ಲ ಮುರಿದ ಧೀರ ಮಧ್ವರಾಯಗೆಸಾರ ತತ್ತ್ವಗಳನೆಲ್ಲ ಶೋಧಿಸಿ ಸೂರೆ ಮಾಡಿದಾತಗೆಊರ್ವಿಯೊಳು ವರ ದೇವತಾದಿಕೇಶವ ದೊರೆ ದಾಸಗೆ

ಶರಣು ಶರಣುಶರಣು ದಶರಥ Read More »

ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್

ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ || ಶರೀರಂ ಸುರೂಪಂ ತಥಾ ವಾ ಕಲತ್ರಂ ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ಗುರೋರಂಘ್ರಿಪದ್ಮೇ ಮನಶ್ಚೇನ್ನ ಲಗ್ನಂ ||   ಷಡಂಗಾದಿವೇದೋ ಮುಖೇ  ಶಾಸ್ತ್ರವಿದ್ಯಾ ಕವಿತ್ವಾದಿಗದ್ಯಂ  ಸುಪದ್ಯಾಂ ಕರೋತಿ ಗುರೋರಂಘ್ರಿಪದ್ಮೇ ಮನಶ್ಚೇನ್ನ ಲಗ್ನಂ ||   ವಿದೇಶೇಷು ಮಾನ್ಯಃ ಸ್ವದೇಶೇಷು ಧನ್ಯಃ ಸದಾಚಾರವೃತ್ತೇಷು ಮತ್ತೋ ನ ಚಾನ್ಯಃ ಗುರೋರಂಘ್ರಿಪದ್ಮೇ ಮನಶ್ಚೇನ್ನ ಲಗ್ನಂ ||   ನ ಭೋಗೇ ನ ಯೋಗೇ ನ ವಾ ವಾಜಿರಾಜೌ ನ

ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ Read More »

ಶಿವಾನಂದಲಹರೀ

ಕಲಾಭ್ಯಾಂ ಚೂಡಾಲಂಕೃತಶಶಿಕಲಾಭ್ಯಾಂ ನಿಜತಪಃ- ಫಲಾಭ್ಯಾಂ ಭಕ್ತೇಷು ಪ್ರಕಟಿತಫಲಾಭ್ಯಾಂ ಭವತು ಮೇ । ಶಿವಾಭ್ಯಾಮಸ್ತೋಕತ್ರಿಭುವನಶಿವಾಭ್ಯಾಂ ಹೃದಿ ಪುನ- ರ್ಭವಾಭ್ಯಾಮಾನಂದಸ್ಫುರದನುಭವಾಭ್ಯಾಂ ನತಿರಿಯಮ್ ॥ 1॥ ಗಲಂತೀ ಶಂಭೋ ತ್ವಚ್ಚರಿತಸರಿತಃ ಕಿಲ್ಬಿಷರಜೋ ದಲಂತೀ ಧೀಕುಲ್ಯಾಸರಣಿಷು ಪತಂತೀ ವಿಜಯತಾಮ್ । ದಿಶಂತೀ ಸಂಸಾರಭ್ರಮಣಪರಿತಾಪೋಪಶಮನಂ ವಸಂತೀ ಮಚ್ಚೇತೋಹೃದಭುವಿ ಶಿವಾನಂದಲಹರೀ ॥ 2॥ ತ್ರಯೀವೇದ್ಯಂ ಹೃದ್ಯಂ ತ್ರಿಪುರಹರಮಾದ್ಯಂ ತ್ರಿನಯನಂ ಜಟಾಭಾರೋದಾರಂ ಚಲದುರಗಹಾರಂ ಮೃಗಧರಮ್ । ಮಹಾದೇವಂ ದೇವಂ ಮಯಿ ಸದಯಭಾವಂ ಪಶುಪತಿಂ ಚಿದಾಲಂಬಂ ಸಾಂಬಂ ಶಿವಮತಿವಿಡಂಬಂ ಹೃದಿ ಭಜೇ ॥ 3॥ ಸಹಸ್ರಂ ವರ್ತಂತೇ ಜಗತಿ

ಶಿವಾನಂದಲಹರೀ Read More »

ಶಿವಾಷ್ಟಕಂ

ಪ್ರಭುಂ ಪ್ರಾಣನಾಥಂ ವಿಭುಂ ವಿಶ್ವನಾಥಂ ಜಗನ್ನಾಥನಾಥಂ ಸದಾನಂದಭಾಜಮ್ । ಭವದ್ಭವ್ಯಭೂತೇಶ್ವರಂ ಭೂತನಾಥಂ ಶಿವಂ ಶಂಕರಂ ಶಂಭುಮೀಶಾನಮೀಡೇ ॥ 1॥ ಗಲೇ ರುಂಡಮಾಲಂ ತನೌ ಸರ್ಪಜಾಲಂ ಮಹಾಕಾಲಕಾಲಂ ಗಣೇಶಾಧಿಪಾಲಮ್ । ಜಟಾಜೂಟಗಂಗೋತ್ತರಂಗೈರ್ವಿಶಾಲಂ ಶಿವಂ ಶಂಕರಂ ಶಂಭುಮೀಶಾನಮೀಡೇ ॥ 2॥ ಮುದಾಮಾಕರಂ ಮಂಡನಂ ಮಂಡಯಂತಂ ಮಹಾಮಂಡಲಂ ಭಸ್ಮಭೂಷಾಧರಂ ತಮ್ । ಅನಾದಿಹ್ಯಪಾರಂ ಮಹಾಮೋಹಹಾರಂ ಶಿವಂ ಶಂಕರಂ ಶಂಭುಮೀಶಾನಮೀಡೇ ॥ 3॥ ವಟಾಧೋನಿವಾಸಂ ಮಹಾಟ್ಟಾಟ್ಟಹಾಸಂ ಮಹಾಪಾಪನಾಶಂ ಸದಾಸುಪ್ರಕಾಶಮ್ । ಗಿರೀಶಂ ಗಣೇಶಂ ಮಹೇಶಂ ಸುರೇಶಂ ಶಿವಂ ಶಂಕರಂ ಶಂಭುಮೀಶಾನಮೀಡೇ ॥ 4॥

ಶಿವಾಷ್ಟಕಂ Read More »

ಶಿವಮಹಿಮ್ನಸ್ತೋತ್ರಮ್

ಮಹಿಮ್ನಃ ಪಾರಂ ತೇ ಪರಮವಿದುಷೋ ಯದ್ಯಸದೃಶೀ ಸ್ತುತಿರ್ಬ್ರಹ್ಮಾದೀನಾಮಪಿ ತದವಸನ್ನಾಸ್ತ್ವಯಿ ಗಿರಃ । ಅಥಾಽವಾಚ್ಯಃ ಸರ್ವಃ ಸ್ವಮತಿಪರಿಣಾಮಾವಧಿ ಗೃಣನ್ ಮಮಾಪ್ಯೇಷ ಸ್ತೋತ್ರೇ ಹರ ನಿರಪವಾದಃ ಪರಿಕರಃ ॥ 1॥ ಅತೀತಃ ಪಂಥಾನಂ ತವ ಚ ಮಹಿಮಾ ವಾಙ್ಮನಸಯೋಃ ಅತದ್ವ್ಯಾವೃತ್ತ್ಯಾ ಯಂ ಚಕಿತಮಭಿಧತ್ತೇ ಶ್ರುತಿರಪಿ । ಸ ಕಸ್ಯ ಸ್ತೋತವ್ಯಃ ಕತಿವಿಧಗುಣಃ ಕಸ್ಯ ವಿಷಯಃ ಪದೇ ತ್ವರ್ವಾಚೀನೇ ಪತತಿ ನ ಮನಃ ಕಸ್ಯ ನ ವಚಃ ॥ 2॥ ಮಧುಸ್ಫೀತಾ ವಾಚಃ ಪರಮಮಮೃತಂ ನಿರ್ಮಿತವತಃ ತವ ಬ್ರಹ್ಮನ್ ಕಿಂ ವಾಗಪಿ

ಶಿವಮಹಿಮ್ನಸ್ತೋತ್ರಮ್ Read More »

ಶಿವನಾಮಾವಲ್ಯಷ್ಟಕಮ್

ಹೇ ಚಂದ್ರಚೂಡ ಮದನಾಂತಕ ಶೂಲಪಾಣೇ ಸ್ಥಾಣೋ ಗಿರೀಶ ಗಿರಿಜೇಶ ಮಹೇಶ ಶಂಭೋ । ಭೂತೇಶ ಭೀತಭಯಸೂದನ ಮಾಮನಾಥಂ ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ 1॥ ಹೇ ಪಾರ್ವತೀಹೃದಯವಲ್ಲಭ ಚಂದ್ರಮೌಲೇ ಭೂತಾಧಿಪ ಪ್ರಮಥನಾಥ ಗಿರೀಶಚಾಪ । ಹೇ ವಾಮದೇವ ಭವ ರುದ್ರ ಪಿನಾಕಪಾಣೇ ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ 2॥ ಹೇ ನೀಲಕಂಠ ವೃಷಭಧ್ವಜ ಪಂಚವಕ್ತ್ರ ಲೋಕೇಶ ಶೇಷವಲಯ ಪ್ರಮಥೇಶ ಶರ್ವ । ಹೇ ಧೂರ್ಜಟೇ ಪಶುಪತೇ ಗಿರಿಜಾಪತೇ ಮಾಂ ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ 3॥ ಹೇ ವಿಶ್ವನಾಥ ಶಿವ ಶಂಕರ

ಶಿವನಾಮಾವಲ್ಯಷ್ಟಕಮ್ Read More »

ಶಿವಮಾನಸಪೂಜಾ

ರತ್ನೈಃ ಕಲ್ಪಿತಮಾಸನಂ ಹಿಮಜಲೈಃ ಸ್ನಾನಂ ಚ ದಿವ್ಯಾಂಬರಂ ನಾನಾರತ್ನವಿಭೂಷಿತಂ ಮೃಗಮದಾಮೋದಾಂಕಿತಂ ಚಂದನಮ್ । ಜಾತೀಚಂಪಕಬಿಲ್ವಪತ್ರರಚಿತಂ ಪುಷ್ಪಂ ಚ ಧೂಪಂ ತಥಾ ದೀಪಂ ದೇವ ದಯಾನಿಧೇ ಪಶುಪತೇ ಹೃತ್ಕಲ್ಪಿತಂ ಗೃಹ್ಯತಾಮ್ ॥ 1॥ ಸೌವರ್ಣೇ ನವರತ್ನಖಂಡರಚಿತೇ ಪಾತ್ರೇ ಘೃತಂ ಪಾಯಸಂ ಭಕ್ಷ್ಯಂ ಪಂಚವಿಧಂ ಪಯೋದಧಿಯುತಂ ರಂಭಾಫಲಂ ಪಾನಕಮ್ । ಶಾಕಾನಾಮಯುತಂ ಜಲಂ ರುಚಿಕರಂ ಕರ್ಪೂರಖಂಡೋಜ್ಜ್ವಲಂ ತಾಂಬೂಲಂ ಮನಸಾ ಮಯಾ ವಿರಚಿತಂ ಭಕ್ತ್ಯಾ ಪ್ರಭೋ ಸ್ವೀಕುರು ॥ 2॥ ಛತ್ರಂ ಚಾಮರಯೋರ್ಯುಗಂ ವ್ಯಜನಕಂ ಚಾದರ್ಶಕಂ ನಿರ್ಮಲಂ ವೀಣಾಭೇರಿಮೃದಂಗಕಾಹಲಕಲಾ ಗೀತಂ ಚ

ಶಿವಮಾನಸಪೂಜಾ Read More »