ಅಂಗದ ನಮಾಫಟವು ಸಿಂಗದ ಗಾತ್ರವು,
ಅಂಗದ ನಮಾಫಟವು ಸಿಂಗದ ಗಾತ್ರವು, ಹಿಂಗದು ಮನದಲ್ಲಿ ನಾನಾ ವಿಕಾರವು. ಬಂದೆಹೆನೆಂದರಿಯಲಿಲ್ಲಾಗಿ, ಸಂದೇಹ ಬಿಡದಾಗಿ, ಮುಂದುಗಾಣದು ಲೋಕ, ಬೆಂದ ಮಾಯಕ್ಕಂಜಿ ನಿಮ್ಮ ಮರೆವೊಕ್ಕೆ, ಕೂಡಲಸಂಗಮದೇವಾ.
ಅಂಗದ ನಮಾಫಟವು ಸಿಂಗದ ಗಾತ್ರವು, Read More »
ಅಂಗದ ನಮಾಫಟವು ಸಿಂಗದ ಗಾತ್ರವು, ಹಿಂಗದು ಮನದಲ್ಲಿ ನಾನಾ ವಿಕಾರವು. ಬಂದೆಹೆನೆಂದರಿಯಲಿಲ್ಲಾಗಿ, ಸಂದೇಹ ಬಿಡದಾಗಿ, ಮುಂದುಗಾಣದು ಲೋಕ, ಬೆಂದ ಮಾಯಕ್ಕಂಜಿ ನಿಮ್ಮ ಮರೆವೊಕ್ಕೆ, ಕೂಡಲಸಂಗಮದೇವಾ.
ಅಂಗದ ನಮಾಫಟವು ಸಿಂಗದ ಗಾತ್ರವು, Read More »
ಹೋದೆನೂರಿಗೆ, ಇದ್ದೆ ನಾನಲ್ಲಿ, ಹೋದಡೆ ಮರಳಿತ್ತ ಬಾರೆನವ್ವಾ. ಐವರು ಭಾವದಿರು, ಐವರು ನಗೆವೆಣ್ಣು ಈ ಐವರು ಕೂಡಿ ಎನ್ನ ಕಾಡುವರು ಬೈವರು ಹೊಯ್ವರು ಮಿಗೆ ಕೇಡನುಡಿವರು. ಇವರೈವರ ಕಾಟಕ್ಕೆ ನಾನಿನ್ನಾರೆ ಕಂಡವ್ವಾ. ಅತ್ತೆ ಮಾವ ಮೈದುನ ನಗೆವೆಣ್ಣು, ಚಿತ್ತವನೊರೆದು ನೋಡುವ ಗಂಡ. ಕತ್ತಲೆಯಾದಡೆ ಕರೆದನ್ನವ ನೀಡವ್ವಾ, ಅತ್ತಿಗೆ ಹತ್ತೆಂಟ ನುಡಿವಳಮ್ಮಮ್ಮ ತಾಯೆ. ಉಪಮಾತೀತರು ಬಂಧುಬಳಗಂಗಳು. ಶ್ರೀಶೈಲ ಚೆನ್ನಮಲ್ಲಿಕಾರ್ಜುನ ಒಲಿದಡೆ ಮರಳಿ ಬಾರೆನಮ್ಮ ತಾಯೆ.
ಹೋದೆನೂರಿಗೆ, ಇದ್ದೆ ನಾನಲ್ಲಿ, Read More »
ಹಿತವಿದೆ ಸಕಲಲೋಕದ ಜನಕ್ಕೆ, ಮತವಿದೆ ಶ್ರುತಿಪುರಾಣಾಗಮದ, ಗತಿಯಿದೆ, ಭಕುತಿಯ ಬೆಳಗಿನುನ್ನತಿಯಿದೆ. ಶ್ರೀ ವಿಭೂತಿಯ ಧರಿಸಿದಡೆ ಭವವ ಪರಿವುದು ದುರಿತಸಂಕುಳವನೊರಸುವುದು ಹರನ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯದಲ್ಲಿರಿಸುವುದು. ನಿರುತವಿದು ನಂಬು ಮನುಜಾ, ಜನನಭೀತಿ ಈ ವಿಭೂತಿ. ಮರಣಭಯದಿಂದ ಅಗಸ್ತ್ಯ ಕಾಶ್ಯಪ ಜಮದಗ್ನಿಗಳು ಧರಿಸಿದರಂದು ನೋಡಾ. ಶ್ರೀಶೈಲ ಚೆನ್ನಮಲ್ಲಿಕಾರ್ಜುನನ ಒಲಿವ ವಿಭೂತಿ.
ಹಿತವಿದೆ ಸಕಲಲೋಕದ ಜನಕ್ಕೆ, Read More »
ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ. ತಡೆವೆನೆಂದಡೆ ಮೀರಿ ಹೋಹನವ್ವಾ. ಒಪ್ಪಚ್ಚಿ ಅಗಲಿದಡೆ ಕಳವಳಗೊಂಡೆ. ಚೆನ್ನಮಲ್ಲಿಕಾರ್ಜುನನ ಕಾಣದೆ ಆನಾರೆಂದರಿಯೆ ಕೇಳಾ, ತಾಯೆ.
ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ. Read More »
ಹಿಡಿಯದಿರು ತಡೆಯದಿರು ಬಿಡುಬಿಡು ಕೈಯಸೆರಗ. ಭಾಷೆಯ ಬರೆದುಕೊಟ್ಟ ಸತ್ಯಕ್ಕೆ ತಪ್ಪಿದರೆ ಅಘೋರ ನರಕವೆಂದರಿಯಾ ? ಚೆನ್ನಮಲ್ಲಿಕಾರ್ಜುನನ ಕೈವಿಡಿದ ಸತಿಯ ಮುಟ್ಟಿದರೆ ಕೆಡುವೆ ಕಾಣಾ ಮರುಳೆ.
ಹಿಡಿಯದಿರು ತಡೆಯದಿರು ಬಿಡುಬಿಡು ಕೈಯಸೆರಗ. Read More »
ಹಿಂದಣ ಹಳ್ಳ, ಮುಂದಣ ತೊರೆ, ಸಲ್ಲುವ ಪರಿಯೆಂತು ಹೇಳಾ ? ಹಿಂದಣ ಕೆರೆ, ಮುಂದಣ ಬಲೆ, ಹದುಳವಿನ್ನೆಲ್ಲಿಯದು ಹೇಳಾ ? ನೀನಿಕ್ಕಿದ ಮಾಯೆ ಕೊಲುತಿಪ್ಪುದು ಕಾಯಯ್ಯಾ, ಕಾಯಯ್ಯಾ ಚೆನ್ನಮಲ್ಲಿಕಾರ್ಜುನಾ.
ಹಿಂದಣ ಹಳ್ಳ, ಮುಂದಣ ತೊರೆ, Read More »
ಹೋದೆನೂರಿಗೆ, ಇದ್ದೆ ನಾನಲ್ಲಿ, ಹೋದಡೆ ಮರಳಿತ್ತ ಬಾರೆನವ್ವಾ. ಐವರು ಭಾವದಿರು, ಐವರು ನಗೆವೆಣ್ಣು ಈ ಐವರು ಕೂಡಿ ಎನ್ನ ಕಾಡುವರು ಬೈವರು ಹೊಯ್ವರು ಮಿಗೆ ಕೇಡನುಡಿವರು. ಇವರೈವರ ಕಾಟಕ್ಕೆ ನಾನಿನ್ನಾರೆ ಕಂಡವ್ವಾ. ಅತ್ತೆ ಮಾವ ಮೈದುನ ನಗೆವೆಣ್ಣು, ಚಿತ್ತವನೊರೆದು ನೋಡುವ ಗಂಡ. ಕತ್ತಲೆಯಾದಡೆ ಕರೆದನ್ನವ ನೀಡವ್ವಾ, ಅತ್ತಿಗೆ ಹತ್ತೆಂಟ ನುಡಿವಳಮ್ಮಮ್ಮ ತಾಯೆ. ಉಪಮಾತೀತರು ಬಂಧುಬಳಗಂಗಳು. ಶ್ರೀಶೈಲ ಚೆನ್ನಮಲ್ಲಿಕಾರ್ಜುನ ಒಲಿದಡೆ ಮರಳಿ ಬಾರೆನಮ್ಮ ತಾಯೆ.
ಹೋದೆನೂರಿಗೆ, ಇದ್ದೆ ನಾನಲ್ಲಿ, Read More »
ಹೊಳೆವ ಕೆಂಜೆಡೆಗಳ, ಮಣಿಮಕುಟದ, ಒಪ್ಪುವ ಸುಲಿಪಲ್ಗಳ, ನಗೆಮೊಗದ, ಕಂಗಳ ಕಾಂತಿಯ, ಈರೇಳುಭುವನವ ಬೆಳಗುವ ದಿವ್ಯಸ್ವರೂಪನ ಕಂಡೆ ನಾನು. ಕಂಡೆನ್ನ ಕಂಗಳ ಬರ ಹಿಂಗಿತ್ತೆನಗೆ. ಗಂಡಗಂಡರೆಲ್ಲರ ಹೆಂಡಿರಾಗಿ ಆಳುವ ಗರುವನ ಕಂಡೆ ನಾನು. ಜಗದಾದಿ ಶಕ್ತಿಯೊಳು ಬೆರಸಿ ಮಾತನಾಡುವ ಪರಮಗುರು ಚೆನ್ನಮಲ್ಲಿಕಾರ್ಜುನನ ನಿಲವ ಕಂಡು ಬದುಕಿದೆನು
ಹೊಳೆವ ಕೆಂಜೆಡೆಗಳ, ಮಣಿಮಕುಟದ, ಒಪ್ಪುವ ಸುಲಿಪಲ್ಗಳ, Read More »
ಹೊಳೆ ಕೆಂಜೆಡೆಯ ಮೇಲೆ ಎಳೆವೆಳದಿಂಗಳು, ಫಣಿಮಣಿ ಕರ್ಣಕುಂಡಲ ನೋಡವ್ವಾ ; ರುಂಡಮಾಲೆಯ ಕೊರಳವನ ಕಂಡಡೆ ಒಮ್ಮೆ ಬರಹೇಳವ್ವಾ ? ಗೋವಿಂದನ ನಯನ ಉಂಗುಟದ ಮೇಲಿಪ್ಪುದು, ಚೆನ್ನಮಲ್ಲಿಕಾರ್ಜುನದೇವನ ಕುರುಹವ್ವಾ.
ಹೊಳೆ ಕೆಂಜೆಡೆಯ ಮೇಲೆ ಎಳೆವೆಳದಿಂಗಳು, Read More »
ಹೊನ್ನು ಮುರಿದಡೆ ಬೆಸಸಬಹುದಲ್ಲದೆ, ಮುತ್ತು ಒಡೆದಡೆ ಬೆಸಸಬಹುದೆ ? ಮನ ಮುರಿದಡೆ ಮನಕೊಬ್ಬರೊಡೆಯರುಂಟೆ ? ಚೆನ್ನಮಲ್ಲಿಕಾರ್ಜುನ ಸಾಕ್ಷಿಯಾಗಿ ಬೇಟವುಳ್ಳಲ್ಲಿ ಬೆರೆಸೆ ಘನ
ಹೊನ್ನು ಮುರಿದಡೆ ಬೆಸಸಬಹುದಲ್ಲದೆ, Read More »
ಹೆದರದಿರು ಮನವೆ, ಬೆದರದಿರು ತನುವೆ, ನಿಜವನರಿತು ನಿಶ್ಚಿಂತನಾಗಿರು. ಫಲವಾದ ಮರನ ಕಲ್ಲಲಿ ಇಡುವುದೊಂದು ಕೋಟಿ, ಎಲವದಮರನ ಇಡುವರೊಬ್ಬರ ಕಾಣೆ. ಭಕ್ತಿಯುಳ್ಳವರ ಬೈವರೊಂದುಕೋಟಿ, ಭಕ್ತಿಯಿಲ್ಲದವರ ಬೈವರೊಬ್ಬರ ಕಾಣೆ. ನಿಮ್ಮ ಶರಣರ ನುಡಿಯೆ ಎನಗೆ ಗತಿ, ಸೋಪಾನ, ಚೆನ್ನಮಲ್ಲಿಕಾರ್ಜುನಾ.
ಹೆದರದಿರು ಮನವೆ, ಬೆದರದಿರು ತನುವೆ, Read More »
ಹೆಣ್ಣು ಹೆಣ್ಣಾದಡೆ ಗಂಡಿನಸೂತಕ. ಗಂಡು ಗಂಡಾದಡೆ ಹೆಣ್ಣಿನಸೂತಕ. ಮನದಸೂತಕ ಹಿಂಗಿದಡೆ ತನುವಿನ ಸೂತಕಕ್ಕೆ ತೆರಹುಂಟೆ ? ಅಯ್ಯಾ, ಮೊದಲಿಲ್ಲದ ಸೂತಕಕ್ಕೆ ಮರುಳಾಯಿತ್ತು ಜಗವೆಲ್ಲ. ಎನ್ನ ದೇವ ಚೆನ್ನಮಲ್ಲಿಕಾರ್ಜುನನೆಂಬ ಗರುವಂಗೆ ಜಗವೆಲ್ಲ ಹೆಣ್ಣು ನೋಡಾ ಅಯ್ಯಾ.
ಹೆಣ್ಣು ಹೆಣ್ಣಾದಡೆ ಗಂಡಿನಸೂತಕ. Read More »
ಹಾಲಹಿಡಿದು ಬೆಣ್ಣೆಯನರಸಲುಂಟೆ ? ಲಿಂಗವಹಿಡಿದು ಪುಣ್ಯತೀರ್ಥಕ್ಕೆ ಹೋಗಲುಂಟೆ ? ಲಿಂಗದ ಪಾದತೀರ್ಥ ಪ್ರಸಾದವ ಕೊಂಡು ಅನ್ಯಬೋಧೆ ಅನ್ಯಶಾಸ್ತ್ರಕ್ಕೆ ಹಾರೈಸಲೇತಕ್ಕೆ ? ಇಷ್ಟಲಿಂಗವಿದ್ದಂತೆ ಸ್ಥಾವರಲಿಂಗಕ್ಕೆ ಶರಣೆಂದೆನಾದಡೆ ತಡೆಯದೆ ಹುಟ್ಟಿಸುವನು ಶ್ವಾನನ ಗರ್ಭದಲ್ಲಿ. ಅದೆಂತೆಂದಡೆ ಶಿವಧರ್ಮಪುರಾಣದಲ್ಲಿ ‘ಇಷ್ಟಲಿಂಗಮವಿಶ್ವಸ್ಯ ತೀರ್ಥಲಿಂಗಸ್ಯ ಪೂಜಕಃ ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್’ || ಎಂದುದಾಗಿ, ಇದನರಿದು ಗುರು ಕೊಟ್ಟ ಲಿಂಗದಲ್ಲಿಯೆ ಎಲ್ಲಾ ತೀರ್ಥಂಗಳೂ ಎಲ್ಲಾ ಕ್ಷೇತ್ರಂಗಳೂ ಇದ್ದಾವೆಂದು ಭಾವಿಸಿ ಮುಕ್ತರಪ್ಪುದಯ್ಯಾ. ಇಂತಲ್ಲದೆ ಗುರು ಕೊಟ್ಟ ಲಿಂಗವ ಕಿರಿದುಮಾಡಿ, ತೀರ್ಥಲಿಂಗವ ಹಿರಿದುಮಾಡಿ ಹೋದಾತಂಗೆ ಅಘೋರ ನರಕ ತಪ್ಪದು ಕಾಣಾ
ಹಾಲಹಿಡಿದು ಬೆಣ್ಣೆಯನರಸಲುಂಟೆ ? Read More »
ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲಡೆ ಹಾವಿನ ಸಂಗವೆ ಲೇಸು ಕಂಡಯ್ಯಾ. ಕಾಯದ ಸಂಗವ ವಿವರಿಸಬಲ್ಲಡೆ ಕಾಯದ ಸಂಗವೆ ಲೇಸು ಕಂಡಯ್ಯಾ. ತಾಯಿ ರಕ್ಕಸಿಯಾದಂತೆ ಕಾಯವಿಕಾರವು. ಚೆನ್ನಮಲ್ಲಿಕಾರ್ಜುನಯ್ಯಾ, ನೀನೊಲಿದವರು ಕಾಯಗೊಂಡಿದ್ದರೆನಬೇಡ.
ಹಾವಿನ ಹಲ್ಲ ಕಳೆದು ಹಾವನಾಡಿಸಬಲ್ಲಡೆ Read More »
ಹೂವು ಕಂದಿದಲ್ಲಿ ಪರಿಮಳವನರಸುವರೆ ? ಕಂದನಲ್ಲಿ ಕುಂದನರಸುವರೆ ? ಎಲೆ ದೇವ, ಸ್ನೇಹವಿದ್ದ ಠಾವಿನೊಳು ದ್ರೋಹವಾದ ಬಳಿಕ ಮರಳಿ ಸದ್ಗುಣವನರಸುವರೆ ? ಎಲೆ ದೇವ, ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೆ ? ಕೇಳಯ್ಯಾ, ಶ್ರೀಶೈಲ ಚೆನ್ನಮಲ್ಲಿಕಾರ್ಜುನಾ ಹೊಳೆಯಿಳಿದ ಬಳಿಕ ಅಂಬಿಗಂಗೇನುಂಟು ?
ಹೂವು ಕಂದಿದಲ್ಲಿ ಪರಿಮಳವನರಸುವರೆ ? Read More »
ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ, ಬೆಳೆದೆನು ಅಸಂಖ್ಯಾತರ ಕರುಣದೊಳಗೆ. ಭಾವವೆಂಬ ಹಾಲು, ಸುe್ಞನವೆಂಬ ತುಪ್ಪ, ಪರಮಾರ್ಥವೆಂಬ ಸಕ್ಕರೆಯನಿಕ್ಕಿದರು ನೋಡಾ. ಇಂತಪ್ಪ ತ್ರಿವಿಧಾಮೃತವನು ದಣಿಯಲೆರೆದು ಸಲಹಿದಿರೆನ್ನ. ವಿವಾಹವ ಮಾಡಿದಿರಿ, ಸಯವಪ್ಪ ಗಂಡಂಗೆ ಕೊಟ್ಟಿರಿ, ಕೊಟ್ಟ ಮನೆಗೆ ಕಳುಹಲೆಂದು ಅಸಂಖ್ಯಾತರೆಲ್ಲರೂ ನೆರೆದು ಬಂದಿರಿ. ಬಸವಣ್ಣ ಮೆಚ್ಚಲು ಒಗತನವ ಮಾಡುವೆ. ಚೆನ್ನಮಲ್ಲಿಕಾರ್ಜುನನ ಕೈವಿಡಿದು ನಿಮ್ಮ ತಲೆಗೆ ಹೂವ ತಹೆನಲ್ಲದೆ ಹುಲ್ಲ ತಾರೆನು. ಅವಧರಿಸಿ, ನಿಮ್ಮಡಿಗಳೆಲ್ಲರೂ ಮರಳಿ ಬಿಯಂಗೈವುದು, ಶರಣಾರ್ಥಿ.
ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ, Read More »
ಹುಟ್ಟದ ಯೋನಿಯಲ್ಲಿ ಹುಟ್ಟಿಸಿ, ಬಾರದ ಭವಂಗಳಲ್ಲಿ ಬರಿಸಿ, ಉಣ್ಣದ ಊಟವನುಣಿಸಿ ವಿಧಿಗೊಳಗಾಗಿಸುವ ಕೇಳಿರಣ್ಣಾ. ತನ್ನವರೆಂದಡೆ ಮನ್ನಿಸುವನೆ ಹತ್ತರಿದ್ದ ಭೃಂಗಿಯ ಚರ್ಮವ ಕಿತ್ತೀಡಾಡಿಸಿದವನು ಮತ್ತೆ ಕೆಲಂಬರ ಬಲ್ಲನೆ? ಇದನರಿತು ಬಿಡದಿರು ಬಿಡದಿರು. ಚೆನ್ನಮಲ್ಲಿಕಾರ್ಜುನನಿಂತಹ ಸಿತಗನವ್ವಾ.
ಹುಟ್ಟದ ಯೋನಿಯಲ್ಲಿ ಹುಟ್ಟಿಸಿ, Read More »
ಹುಟ್ಟು ಹೊರೆಯ ಕಟ್ಟಳೆಯ ಕಳೆದನವ್ವಾ. ಹೊನ್ನು ಮಣ್ಣಿನ ಮಾಯೆಯ ಮಾಣಿಸಿದನವ್ವಾ. ಎನ್ನ ತನುವಿನ ಲಜ್ಜೆಯನಿಳುಹಿ, ಎನ್ನ ಮನದ ಕತ್ತಲೆಯ ಕಳೆದ ಚೆನ್ನಮಲ್ಲಿಕಾರ್ಜುನಯ್ಯನೊಳಗಾದವಳ ಏನೆಂದು ನುಡಿಸುವಿರವ್ವಾ ?
ಹುಟ್ಟು ಹೊರೆಯ ಕಟ್ಟಳೆಯ ಕಳೆದನವ್ವಾ. Read More »
ಹಸಿವೆ ನೀನು ನಿಲ್ಲು ನಿಲ್ಲು ತೃಷೆಯೆ ನೀನು ನಿಲ್ಲು ನಿಲ್ಲು ನಿದ್ರೆಯೆ ನೀನು ನಿಲ್ಲು ನಿಲ್ಲು ಕಾಮವೆ ನೀನು ನಿಲ್ಲು ನಿಲ್ಲು ಕ್ರೋಧವೆ ನೀನು ನಿಲ್ಲು ನಿಲ್ಲು ಮೋಹವೆ ನೀನು ನಿಲ್ಲು ನಿಲ್ಲು ಲೋಭವೆ ನೀನು ನಿಲ್ಲು ನಿಲ್ಲು ಮದವೆ ನೀನು ನಿಲ್ಲು ನಿಲ್ಲು ಮಚ್ಚರವೆ ನೀನು ನಿಲ್ಲು ನಿಲ್ಲು ಸಚರಾಚರವೆ ನೀನು ನಿಲ್ಲು ನಿಲ್ಲು ನಾನು ಚೆನ್ನಮಲ್ಲಿಕಾರ್ಜುನದೇವರ ಅವಸರದ ಓಲೆಯನೊಯ್ಯುತ್ತಲಿದ್ದೇನೆ ಶರಣಾರ್ಥಿ.
ಹಸಿವೆ ನೀನು ನಿಲ್ಲು ನಿಲ್ಲು Read More »
ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು ದೇಗುಲಗಳುಂಟು. ಚೆನ್ನಮಲ್ಲಿಕಾರ್ಜುನಯ್ಯಾ, ಆತ್ಮಸಂಗಾತಕ್ಕೆ ನೀನೆನಗುಂಟು.
ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. Read More »
ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ, ವಿಷಯ ವಿಕಾರವೆನ್ನನಿರಿಸಿ ಹೋದವು ಕಾಣಾ ತಂದೆ. ಅದೇ ಕಾರಣ ನೀವು ಅರಸಿಕೊಂಡು ಬಂದಿರಣ್ಣ. ನೀವು ಅರಸುವ ಅರಕೆ – ಎನ್ನೊಳಗಾಯಿತ್ತು. ಎನ್ನ ದೇವ ಚೆನ್ನಮಲ್ಲಿಕಾರ್ಜುನ ತನ್ನೊಳಗೆನ್ನನಿಂಬಿಟ್ಟುಕೊಂಡನಾಗಿ ಇನ್ನು ನಿನ್ನ ತಂದೆ ತಾಯಿತನವನೊಲ್ಲೆ ನಾನು.
ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ, Read More »
ಹಸೆ ಹಂದರವನಿಕ್ಕಿ, ತೊಂಡಿಲ ಬಾಸಿಗವ ಕಟ್ಟಿ, ಮದುವೆಯಾದೆನಲ್ಲಾ ನಾನು ಮಚ್ಚಿ ಮದುವೆಯಾದೆನಲ್ಲಾ ನಾನು. ಗಂಡನೆ, ನಿನಗೋತು ಕೈವಿಡಿದವಳನು ಮತ್ತೊಬ್ಬರು ಕೈವಿಡಿದರೆ ನಿನ್ನಭಿಮಾನವ ಪರರೆಳದೊಯಿದಂತೆ ಕಾಣಾ ಚೆನ್ನಮಲ್ಲಿಕಾರ್ಜುನಾ.
ಹಸೆ ಹಂದರವನಿಕ್ಕಿ, ತೊಂಡಿಲ ಬಾಸಿಗವ ಕಟ್ಟಿ, Read More »
ಹಣ್ಣ ಮೆದ್ದ ಬಳಿಕ ಆ ಮರನನಾರು ತರಿದಡೇನು ? ಹೆಣ್ಣ ಬಿಟ್ಟ ಬಳಿಕ ಆಕೆಯನಾರು ಕೂಡಿದಡೇನು ? ಮಣ್ಣ ಬಿಟ್ಟ ಬಳಿಕ ಆ ಕೆಯ್ಯನಾರು ಉತ್ತಡೇನು ? ಚೆನ್ನ ಮಲ್ಲಿಕಾರ್ಜುನನರಿಯದ ಬಳಿಕ ಆ ಕಾಯವ ನಾಯಿ ತಿಂದಡೇನು, ನೀರು ಕುಡಿದಡೇನು?
ಹಣ್ಣ ಮೆದ್ದ ಬಳಿಕ ಆ ಮರನನಾರು ತರಿದಡೇನು ? Read More »
ಹರಿಯ ನುಂಗಿತ್ತು ಮಾಯೆ, ಅಜನ ನುಂಗಿತ್ತು ಮಾಯೆ ಇಂದ್ರನ ನುಂಗಿತ್ತು ಮಾಯೆ, ಚಂದ್ರನ ನುಂಗಿತ್ತು ಮಾಯೆ ಬಲ್ಲೆನೆಂಬ ಬಲುಗೈಯರ ನುಂಗಿತ್ತು ಮಾಯೆ, ಅರಿಯೆನೆಂಬ ಅe್ಞನಿಗಳ ನುಂಗಿತ್ತು ಮಾಯೆ, ಈರೇಳುಭುವನವನಾರಡಿಗೊಂಡಿತ್ತು ಮಾಯೆ, ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ಮಾಯವ ಮಾಣಿಸಾ ಕರುಣಿ.
ಹರಿಯ ನುಂಗಿತ್ತು ಮಾಯೆ, Read More »
ಹರನೆ ನೀನೆನಗೆ ಗಂಡನಾಗಬೇಕೆಂದು ಅನಂತಕಾಲ ತಪಸ್ಸಿದ್ದೆ ನೋಡಾ. ಹಸೆಯಮೇಲಣ ಮಾತ ಬೆಸಗೊಳಲಟ್ಟಿದಡೆ, ಶಶಿಧರನ ಹತ್ತಿರಕೆ ಕಳುಹಿದರೆಮ್ಮವರು. ಭಸ್ಮವನೆ ಹೂಸಿ, ಕಂಕಣವನೆ ಕಟ್ಟಿದರು ಚೆನ್ನಮಲ್ಲಿಕಾರ್ಜುನ ತನಗೆ ನಾನಾಗಬೇಕೆಂದ.
ಹರನೆ ನೀನೆನಗೆ ಗಂಡನಾಗಬೇಕೆಂದು Read More »