Akka Mahadevi

ತನುವಿಕಾರದಿಂದ ಸವದು ಸವದು,

ತನುವಿಕಾರದಿಂದ ಸವದು ಸವದು, ಮನವಿಕಾರದಿಂದ ನೊಂದು ಬೆಂದವರೆಲ್ಲಾ ಬೋಳಾಗಿ ; ದಿನ ಜವ್ವನಂಗಳು ಸವದು ಸವದು, ಜಂತ್ರ ಮುರಿದು ಗತಿಗೆಟ್ಟವರೆಲ್ಲಾ ಬೋಳಾಗಿದ ‘ಹೇಸಿ, ಒಲ್ಲೆ ಸಂಸಾರವನೆಂಬರು ‘ ವೈರಾಗ್ಯವ ಬಲ್ಲವರಲ್ಲ ಕೇಳವ್ವಾ. ಕನ್ನೆಯಳಿಯದ ಜವ್ವನ ಸತಿಗಲ್ಲದೆ ಚೆನ್ನಮಲ್ಲಿಕಾರ್ಜುನದೇವಗಲ್ಲ ಕೇಳವ್ವಾ.

ತನುವಿಕಾರದಿಂದ ಸವದು ಸವದು, Read More »

ತನುವೆಂಬ ಸಾಗರ ತುಂಬಲು,

ತನುವೆಂಬ ಸಾಗರ ತುಂಬಲು, ಮನವೆಂಬುದು ಹರುಗೋಲಾಯಿತ್ತು ಅಂಬಿಗಾ. ಎನ್ನ ಗಮ್ಮನೆ ತೆಗೆಯೋ ಅಂಬಿಗಾ. ತೊರೆದು ದಾಂಟಿಹೆನೆಂಬ ಭರವಸ ಕರಘನ, ಗಮ್ಮನೆ ತೆಗೆಯೋ ಅಂಬಿಗಾ. ಸಿರಿಶೈಲ ಚೆನ್ನಮಲ್ಲಿಕಾರ್ಜುನಾ ನಿನ್ನ ಕಾಣಲು ಬಂದಿಹೆ ಅಂಬಿಗಾ.

ತನುವೆಂಬ ಸಾಗರ ತುಂಬಲು, Read More »

ತನುವಬೇಡಿದಡೆ ತನುವಕೊಟ್ಟು ಶುದ್ಧವಪ್ಪೆ.

ತನುವಬೇಡಿದಡೆ ತನುವಕೊಟ್ಟು ಶುದ್ಧವಪ್ಪೆ. ಮನವ ಬೇಡಿದಡೆ ಮನವಕೊಟ್ಟು ಶುದ್ಧವಪ್ಪೆ. ಧನವ ಬೇಡಿದಡೆ ಧನವ ಕೊಟ್ಟು ಶುದ್ಧವಪ್ಪೆ. ನೀನಾವುದ ಬೇಡಿದಡೂ ಓಸರಿಸಿದಡೆ, ಕೈವಾರಿಸಿದಡೆ ಹಿಡಿದು ಮೂಗ ಕೊಯಿ. ಎನ್ನ ಕಲಿತನದ ಬಿನ್ನಪವ ಕಡೆತನಕ ನಡೆಸದಿರ್ದಡೆ ತಲೆದಂಡ ಕಾಣಾ ಚೆನ್ನಮಲ್ಲಿಕಾರ್ಜುನಾ.

ತನುವಬೇಡಿದಡೆ ತನುವಕೊಟ್ಟು ಶುದ್ಧವಪ್ಪೆ. Read More »

ತನುವನುವಾಯಿತ್ತು, ಮನವನುವಾಯಿತ್ತು,

ತನುವನುವಾಯಿತ್ತು, ಮನವನುವಾಯಿತ್ತು, ಪ್ರಾಣವನುವಾಯಿತ್ತು. ಮುನಿದು ಬಾರದ ಪರಿ ಇನ್ನೆಂತು ಹೇಳಾ ? ಎನ್ನ ಪ್ರಾಣದಲ್ಲಿ ಸಂದು, ಎನ್ನ ಮನಕ್ಕೆ ಮನವಾಗಿ ನಿಂದ ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಕಾಣದಡೆ ಆನೆಂತು ಬದುಕುವೆನಯ್ಯಾ ?

ತನುವನುವಾಯಿತ್ತು, ಮನವನುವಾಯಿತ್ತು, Read More »

ತನು ಶುದ್ಧವಾಯಿತ್ತು ಶಿವಭಕ್ತರೊಕ್ಕುದ ಕೊಂಡೆನ್ನ.

ತನು ಶುದ್ಧವಾಯಿತ್ತು ಶಿವಭಕ್ತರೊಕ್ಕುದ ಕೊಂಡೆನ್ನ. ಮನ ಶುದ್ಧವಾಯಿತ್ತು ಅಸಂಖ್ಯಾತರ ನೆನದೆನ್ನ. ಕಂಗಳು ಶುದ್ಧವಾಯಿತ್ತು ಸಕಲಗಣಂಗಳ ನೋಡಿ ಎನ್ನ. ಶ್ರೋತ್ರ ಶುದ್ಧವಾಯಿತ್ತು ಅವರ ಕೀರ್ತಿಯ ಕೇಳಿ ಎನ್ನ. ಭಾವನೆ ಎನಗಿದು ಜೀವನ ಲಿಂಗತಂದೆ. ನೆಟ್ಟನೆ ನಿಮ್ಮ ಮನಮುಟ್ಟಿ ಪೂಜಿಸಿ ಭವಗೆಟ್ಟೆ ನಾನು ಚೆನ್ನಮಲ್ಲಿಕಾರ್ಜುನಾ.

ತನು ಶುದ್ಧವಾಯಿತ್ತು ಶಿವಭಕ್ತರೊಕ್ಕುದ ಕೊಂಡೆನ್ನ. Read More »

ತನು ನಿಮ್ಮ ರೂಪಾದ ಬಳಿಕ

ತನು ನಿಮ್ಮ ರೂಪಾದ ಬಳಿಕ ಆರಿಗೆ ಮಾಡುವೆ ? ಮನ ನಿಮ್ಮ ರೂಪಾದ ಬಳಿಕ ಆರ ನೆನೆವೆ ? ಪ್ರಾಣ ನಿಮ್ಮ ರೂಪಾದ ಬಳಿಕ ಆರನಾರಾಧಿಸುವೆ ? ಅರಿವು ನಿಮ್ಮಲ್ಲಿ ಸ್ವಯವಾದ ಬಳಿಕ ಆರನರಿವೆ ? ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮಿಂದ ನೀವೆಯಾದಿರಾಗಿ ನಿಮ್ಮನೆ ಅರಿವುತ್ತಿರ್ದೆನು.

ತನು ನಿಮ್ಮ ರೂಪಾದ ಬಳಿಕ Read More »

ತನು ಕರಗದವರಲ್ಲಿ

ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು. ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು. ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು. ಅರಿವು ಕಣ್ದೆರೆಯದವರಲ್ಲಿ ಆರತಿಯನೊಲ್ಲೆಯಯ್ಯಾ ನೀನು. ಭಾವಶುದ್ಭವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯಾ ನೀನು. ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯಾ ನೀನು. ತ್ರಿಕರಣ ಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯಾ ನೀನು. ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯಾ ನೀನು. ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ ಚೆನ್ನಮಲ್ಲಿಕಾರ್ಜುನಯ್ಯಾ ? ಇದರೊಂದಿಗೆ ಕೆಳಕಂಡ ವಚನ “ತನು ಕರಗದವರಲ್ಲಿ” ಧ್ವನಿಮುದ್ರಿತಲಾಗಿಸಿದೆ. 218 ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು. ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯಾ ನೀನು. ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು. ಅರಿವು ಕಣ್ದೆರೆಯದವರಲ್ಲಿ

ತನು ಕರಗದವರಲ್ಲಿ Read More »

ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ

ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ ಷಟ್‍ಚಕ್ರಂಗಳಲ್ಲಿ ಹುಟ್ಟಿರ್ದ ಷಟ್ಕಮಲಂಗಳನು ಆಧಾರ ತೊಡಗಿ ಆe್ಞಚಕ್ರವೇ ಕಡೆಯಾಗುಳ್ಳ ಬ್ರಹ್ಮಾದಿಗಳ ಸ್ಥಾನಂಗಳ ಗುರೂಪದೇಶದಿಂದೆ ಭಾವಿಸುವುದು. ಆe್ಞಚಕ್ರದತ್ತಣಿಂದೆ ಊಧ್ರ್ವ ಭಾಗವಾದ ಬ್ರಹ್ಮರಂಧ್ರದಲ್ಲಿಯಾಯಿತ್ತಾದಡೆ ಸಹಸ್ರದಳ ಕಮಲವನು ಭಾವಿಸುವುದು. ಆ ಸಹಸ್ರದಳ ಕಮಲದಲ್ಲಿ ನಿರ್ಮಲವಾದ ಚಂದ್ರಮಂಡಲವನು ಧ್ಯಾನಿಸುವುದು. ಆ ಚಂದ್ರಮಂಡಲದ ಮಧ್ಯದಲ್ಲಿ ವಾಲಾಗ್ರ ಮಾತ್ರದೋಪಾದಿಯಲ್ಲಿ ಪರಮ ಸೂಕ್ಷ್ಮರಂಧ್ರವನು ಉಪದೇಶದಿಂದರಿವುದು. ಆ ಸೂಕ್ಷ್ಮರಂಧ್ರವನೆ ಕೈಲಾಸಸ್ಥಾನವಾಗಿ ಅರಿದು ಆ ಕೈಲಾಸದಲ್ಲಿ ಇರುತಿರ್ದ ಪರಮೇಶ್ವರನನು ಸಮಸ್ತ ಕಾರಣಂಗಳಿಗೆ ಕಾರಣವಾಗಿದ್ದಾತನಾಗಿ ಧ್ಯಾನಿಸುವುದಯ್ಯಾ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.

ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ Read More »

ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ,

ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ, ಹಲವು ಪ್ರಾಣಿಯ ಕೊಂದು, ನಲಿನಲಿದಾಡುವ. ತನ್ನ ಮನೆಯಲೊಂದು ಶಿಶು ಸತ್ತಡೆ ಅದಕ್ಕೆ ಮರುಗುವಂತೆ ಅವಕೇಕೆ ಮರುಗ ? ಅದೆಂತೆಂದಡೆ ‘ಸ್ವಾತ್ಮಾನಮಿತರಂ ಚೇತಿ ಭಿನ್ನತಾ ನೈವ ದೃಶ್ಯತಾಂ ಸರ್ವಂ ಚಿಜ್ಜ್ಯೋತಿರೇವೇತಿ ಯಃ ಪಶ್ಯತಿ ಸ ಪಶ್ಯತಿ’ ಎಂದುದಾಗಿ, ಜಾಲಗಾರನ ದುಃಖ ಜಗಕೆಲ್ಲ ನಗೆಗೆಡೆ. ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಭಕ್ತನಾಗಿರ್ದು ಜೀವಹಿಂಸೆ ಮಾಡುವ ಮಾದಿಗರನೇನೆಂಬೆನಯ್ಯಾ ?

ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ, Read More »

ಜಲದ ಮಂಟಪದ ಮೇಲೆ ಉರಿಯ ಚಪ್ಪರವನಿಕ್ಕಿ,

ಜಲದ ಮಂಟಪದ ಮೇಲೆ ಉರಿಯ ಚಪ್ಪರವನಿಕ್ಕಿ, ಆಲಿಕಲ್ಲ ಹಸೆಯ ಹಾಸಿ ಬಾಸಿಗವ ಕಟ್ಟಿ, ಕಾಲಿಲ್ಲದ ಹೆಂಡತಿಗೆ ತಲೆಯಿಲ್ಲದ ಗಂಡ ಬಂದು ಮದುವೆಯಾದನು. ಎಂದೆಂದೂ ಬಿಡದ ಬಾಳುವೆಗೆ ಕೊಟ್ಟರೆನ್ನ. ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆನ್ನ ಮದುವೆಯ ಮಾಡಿದರೆಲೆ ಅವ್ವಾ.

ಜಲದ ಮಂಟಪದ ಮೇಲೆ ಉರಿಯ ಚಪ್ಪರವನಿಕ್ಕಿ, Read More »

ಜಂಗಮವೆನ್ನ ಪ್ರಾಣ, ಜಂಗಮವೆನ್ನ ಜೀವ,

ಜಂಗಮವೆನ್ನ ಪ್ರಾಣ, ಜಂಗಮವೆನ್ನ ಜೀವ, ಜಂಗಮವೆನ್ನ ಪುಣ್ಯದ ಫಲ, ಜಂಗಮವೆನ್ನ ನಿಧಿನಿಧಾನ, ಜಂಗಮವೆನ್ನ ಹರುಷದ ಮೇರೆ. ಚೆನ್ನಮಲ್ಲಿಕಾರ್ಜುನಾ, ಜಂಗಮದ ತಿಂಥಿಣಿಯಲ್ಲಿ ಓಲಾಡುವೆನು.

ಜಂಗಮವೆನ್ನ ಪ್ರಾಣ, ಜಂಗಮವೆನ್ನ ಜೀವ, Read More »

ಜಂಗಮದ ಕೈ ಹೊಯ್ದು ಹೊಯ್ದು ನಕ್ಕು ಕೆಟ್ಟರಯ್ಯ ?

ಜಂಗಮದ ಕೈ ಹೊಯ್ದು ಹೊಯ್ದು ನಕ್ಕು ಕೆಟ್ಟರಯ್ಯ ? ಸರಸದಲ್ಲಿ ಮುಟ್ಟಿ ಪೂಜಿಸುವರೆ ನಿಮಗೆ ಲಿಂಗವಿಲ್ಲ. ಹುತ್ತಿನೊಳಗೆ ಕೈಯನಿಕ್ಕೆ ಸರ್ಪದಷ್ಟವಾದರೆ ಮತ್ತೆ ಗಾರುಡವುಂಟೆ ಚೆನ್ನಮಲ್ಲಿಕಾರ್ಜುನಾ ?

ಜಂಗಮದ ಕೈ ಹೊಯ್ದು ಹೊಯ್ದು ನಕ್ಕು ಕೆಟ್ಟರಯ್ಯ ? Read More »

ಚಿಲಿಮಿಲಿ ಎಂದು ಓದುವ ಗಿಳಿಗಳಿರಾ,

ಚಿಲಿಮಿಲಿ ಎಂದು ಓದುವ ಗಿಳಿಗಳಿರಾ, ನೀವು ಕಾಣಿರೆ, ನೀವು ಕಾಣಿರೆ. ಸರವೆತ್ತಿ ಪಾಡುವ ಕೋಗಿಲೆಗಳಿರಾ, ನೀವು ಕಾಣಿರೆ, ನೀವು ಕಾಣಿರೆ. ಎರಗಿ ಬಂದಾಡುವ ತುಂಬಿಗಳಿರಾ, ನೀವು ಕಾಣಿರೆ, ನೀವು ಕಾಣಿರೆ. ಕೊಳನತಡಿಯೊಳಾಡುವ ಹಂಸೆಗಳಿರಾ, ನೀವು ಕಾಣಿರೆ, ನೀವು ಕಾಣಿರೆ. ಗಿರಿ ಗಹ್ವರದೊಳಗಾಡುವ ನವಿಲುಗಳಿರಾ, ನೀವು ಕಾಣಿರೆ, ನೀವು ಕಾಣಿರೆ. ಚೆನ್ನಮಲ್ಲಿಕಾರ್ಜುನನೆಲ್ಲಿದ್ದಹನೆಂದು ಹೇಳಿರೆ.

ಚಿಲಿಮಿಲಿ ಎಂದು ಓದುವ ಗಿಳಿಗಳಿರಾ, Read More »

ಚಿನ್ನಕ್ಕರಿಸಿನ ಚಿನ್ನಕ್ಕರಿಸಿನ ಚಿನ್ನಕ್ಕರಿಸಿನವ ಕೊಳ್ಳಿರವ್ವಾ.

ಚಿನ್ನಕ್ಕರಿಸಿನ ಚಿನ್ನಕ್ಕರಿಸಿನ ಚಿನ್ನಕ್ಕರಿಸಿನವ ಕೊಳ್ಳಿರವ್ವಾ. ಎಮ್ಮ ನಲ್ಲನ ಮೈಯ ಹತ್ತುವ ಅರಿಸಿನವ ಕೊಳ್ಳಿರವ್ವಾ. ಒಳಗುಂದದರಿಸಿನವ ಮಿಂದು ಚೆನ್ನಮಲ್ಲಿಕಾರ್ಜುನನ ಅಪ್ಪಿರವ್ವಾ.

ಚಿನ್ನಕ್ಕರಿಸಿನ ಚಿನ್ನಕ್ಕರಿಸಿನ ಚಿನ್ನಕ್ಕರಿಸಿನವ ಕೊಳ್ಳಿರವ್ವಾ. Read More »

ಚರಾಚರಾತ್ಮಕ ಪ್ರಪಂಚವೆಲ್ಲ

ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು, ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು, ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎ ಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾe್ಞÉಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು

ಚರಾಚರಾತ್ಮಕ ಪ್ರಪಂಚವೆಲ್ಲ Read More »

ಚಕ್ರ ಬೆಸಗೆಯ್ವಡೆ ಅಲಗಿನ ಹಂಗೇಕೆ ?

ಚಕ್ರ ಬೆಸಗೆಯ್ವಡೆ ಅಲಗಿನ ಹಂಗೇಕೆ ? ಮಾಣಿಕ್ಯದ ಬೆಳಗುಳ್ಳಡೆ ದೀಪದ ಹಂಗೇಕೆ ? ಪರುಷ ಕೈಯ್ಯಲುಳ್ಳಡೆ ಸಿರಿಯ ಹಂಗೇಕೆ ? ಕಾಮಧೇನು ಕರೆವಡೆ ಕರುವಿನ ಹಂಗೇಕೆ ? ಎನ್ನದೇವ ಚೆನ್ನಮಲ್ಲಿಕಾರ್ಜುನಲಿಂಗವು ಕರಸ್ಥಳದೊಳಗುಳ್ಳಡೆ ಇನ್ನಾವ ಹಂಗೇಕೆ ?

ಚಕ್ರ ಬೆಸಗೆಯ್ವಡೆ ಅಲಗಿನ ಹಂಗೇಕೆ ? Read More »

ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ

ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ ತನ್ನ ನೆಳಲಿಂಗೆ ತಾನೆ ಹೋರಿ ಸಾವಂತೆ ಆನೆಯ ಗತಿ ಆನೆಯ ಮತಿ. ಆನೆಯಹುದು, ಆನೆಯಲ್ಲ, ಅದನೇನೆಂಬೆ ? ನೀನೆನ್ನ ಕರಸ್ಥಲದಲ್ಲಿ ಸಿಲ್ಕಿದೆಯಾಗಿ ನೀ ನಾನೆಂಬ ಭ್ರಾಂತೇಕೆ ? ನಾನು ನೀನಲ್ಲದ ತೆರಹಿಲ್ಲ, ಚೆನ್ನಮಲ್ಲಿಕಾರ್ಜುನಾ.

ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ Read More »

ಚಂದನವ ಕಡಿದು ಕೊರೆದು ತೇದಡೆ

ಚಂದನವ ಕಡಿದು ಕೊರೆದು ತೇದಡೆ ನೊಂದೆನೆಂದು ಕಂಪ ಬಿಟ್ಟಿತ್ತೆ ? ತಂದು ಸುವರ್ಣವ ಕಡಿದೊರೆದಡೆ ಬೆಂದು ಕಳಂಕ ಹಿಡಿಯಿತ್ತೆ ? ಸಂದುಸಂದು ಕಡಿದ ಕಬ್ಬನು ತಂದು ಗಾಣದಲ್ಲಿಕ್ಕಿ ಅರೆದಡೆ, ಬೆಂದು ಪಾಕಗುಡದೆ ಸಕ್ಕರೆಯಾಗಿ ನೊಂದೆನೆಂದು ಸಿಹಿಯ ಬಿಟ್ಟಿತ್ತೆ ? ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮುಂದಿಳುಹಲು ನಿಮಗೇ ಹಾನಿ. ಎನ್ನ ತಂದೆ ಚೆನ್ನಮಲ್ಲಿಕಾರ್ಜುನಯ್ಯಾ, ನೀ ಕೊಂದಡೆಯೂ ಶರಣೆಂಬುದ ಮಾಣೆ.

ಚಂದನವ ಕಡಿದು ಕೊರೆದು ತೇದಡೆ Read More »

ಘನವ ಕಂಡೆ, ಅನುವ ಕಂಡೆ,

ಘನವ ಕಂಡೆ, ಅನುವ ಕಂಡೆ, ಆಯತ ಸ್ವಾಯತ ಸನ್ನಿಹಿತ ಸುಖವ ಕಂಡೆ. ಅರಿವರಿದು ಮರಹ ಮರೆದೆ. ಕುರುಹಿನ ಮೋಹ ಮೊರೆಗೆಡದೆ ಚೆನ್ನಮಲ್ಲಿಕಾರ್ಜುನಾ, ನಿಮ್ಮನರಿದು ಸೀಮೆಗೆಟ್ಟೆನು.

ಘನವ ಕಂಡೆ, ಅನುವ ಕಂಡೆ, Read More »

ಗಿರಿಯೊಳು ಮನದೊಳು ಗಿಡಗಿಡದತ್ತ

ಗಿರಿಯೊಳು ಮನದೊಳು ಗಿಡಗಿಡದತ್ತ ದೇವ, ಎನ್ನದೇವ, ಬಾರಯ್ಯಾ, ತೋರಯ್ಯಾ ನಿಮ್ಮ ಕರುಣವನೆಂದು, ನಾನು ಅರಸುತ್ತ ಅಳಲುತ್ತ ಕಾಣದೆ ಸುಯಿದು ಬಂದು ಕಂಡೆ. ಶರಣರ ಸಂಗದಿಂದ ಅರಸಿ ಹಿಡಿದಿಹೆನಿಂದು ನೀನಡಗುವ ಠಾವ ಹೇಳಾ ಚೆನ್ನಮಲ್ಲಿಕಾರ್ಜುನಾ.

ಗಿರಿಯೊಳು ಮನದೊಳು ಗಿಡಗಿಡದತ್ತ Read More »

ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು ?

ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು ? ಕೊಳಕ್ಕಲ್ಲದೆ ಕಿರುವಳ್ಳಕ್ಕೆಳಸುವುದೆ ಹಂಸೆ ? ಮಾಮರ ತಳಿತಲ್ಲದೆ ಸರಗೈವುದೆ ಕೋಗಿಲೆ ? ಪರಿಮಳವಿಲ್ಲದ ಪುಷ್ಪಕ್ಕೆಳಸುವುದೆ ಭ್ರಮರ ? ಎನ್ನ ದೇವ ಚೆನ್ನಮಲ್ಲಿಕಾರ್ಜುನಂಗಲ್ಲದೆ ಅನ್ಯಕ್ಕೆಳಸುವುದೆ ಎನ್ನ ಮನ ? ಪೇಳಿರೆ, ಕೆಳದಿಯರಿರಾ ?

ಗಿರಿಯಲಲ್ಲದೆ ಹುಲ್ಲುಮೊರಡಿಯಲ್ಲಾಡುವುದೆ ನವಿಲು ? Read More »

ಗೂಗೆ ಕಣ್ಣ ಕಾಣಲರಿಯದೆ ರವಿಯ ಬಯ್ವುದು.

ಗೂಗೆ ಕಣ್ಣ ಕಾಣಲರಿಯದೆ ರವಿಯ ಬಯ್ವುದು. ಕಾಗೆ ಕಣ್ಣ ಕಾಣಲರಿಯದೆ ಶಶಿಯ ಬಯ್ವುದು. ಕುರುಡ ಕಣ್ಣ ಕಾಣಲರಿಯದೆ ಕನ್ನಡಿಯ ಬಯ್ವನು. ಇವರ ಮಾತೆಲ್ಲವು ಸಹಜವೆ ನರಕಸಂಸಾರದಲ್ಲಿ ಹೊದಕುಳಿಗೊಳುತ್ತ ಶಿವನಿಲ್ಲ ಮುಕ್ತಿಯಿಲ್ಲ, ಹುಸಿಯೆಂದಡೆ ನರಕದಲ್ಲಿಕ್ಕದೆ ಬಿಡುವನೆ ಚೆನ್ನಮಲ್ಲಿಕಾರ್ಜುನಯ್ಯ

ಗೂಗೆ ಕಣ್ಣ ಕಾಣಲರಿಯದೆ ರವಿಯ ಬಯ್ವುದು. Read More »

ಗುಣ ದೋಷ ಸಂಪಾದನೆಯ ಮಾಡುವನ್ನಕ್ಕ

ಗುಣ ದೋಷ ಸಂಪಾದನೆಯ ಮಾಡುವನ್ನಕ್ಕ ಕಾಮದ ಒಡಲು, ಕ್ರೋಧದ ಗೊತ್ತು, ಲೋಭದ ಇಕ್ಕೆ, ಮೋಹದ ಮಂದಿರ, ಮದದಾವರಣ, ಮತ್ಸರದ ಹೊದಕೆ. ಆ ಭಾವವರತಲ್ಲದೆ ಚೆನ್ನಮಲ್ಲಿಕಾರ್ಜುನನ ಅರಿವುದಕ್ಕೆ ಇಂಬಿಲ್ಲ ಕಾಣಿರಣ್ಣಾ.

ಗುಣ ದೋಷ ಸಂಪಾದನೆಯ ಮಾಡುವನ್ನಕ್ಕ Read More »

ಗುರುವಿನ ಕರುಣದಿಂದ ಲಿಂಗವ ಕಂಡೆ, ಜಂಗಮನ ಕಂಡೆ.

ಗುರುವಿನ ಕರುಣದಿಂದ ಲಿಂಗವ ಕಂಡೆ, ಜಂಗಮನ ಕಂಡೆ. ಗುರುವಿನ ಕರುಣದಿಂದ ಪಾದೋದಕವ ಕಂಡೆ, ಪ್ರಸಾದವ ಕಂಡೆ. ಗುರುವಿನ ಕರುಣದಿಂದ ಸಜ್ಜನ ಸದ್ಭಕ್ತರ ಸದ್ಗೋಷ್ಠಿಯ ಕಂಡೆ. ಚೆನ್ನಮಲ್ಲಿಕಾರ್ಜುನಯ್ಯಾ, ನಾ ಹುಟ್ಟಲೊಡನೆ ಶ್ರೀಗುರು ವಿಭೂತಿಯ ಪಟ್ಟವ ಕಟ್ಟಿ ಲಿಂಗಸ್ವಾಯತವ ಮಾಡಿದನಾಗಿ ಧನ್ಯಳಾದೆನು.

ಗುರುವಿನ ಕರುಣದಿಂದ ಲಿಂಗವ ಕಂಡೆ, ಜಂಗಮನ ಕಂಡೆ. Read More »

ಗುರುವೆಂಬ ತೆತ್ತಿಗನು

ಗುರುವೆಂಬ ತೆತ್ತಿಗನು ಲಿಂಗವೆಂಬಲಗನು ಮನನಿಷ್ಠೆಯೆಂಬ ಕೈಯಲ್ಲಿ ಕೊಡಲು, ಕಾದಿದೆ ಗೆಲಿದೆ ಕಾಮನೆಂಬವನ, ಕ್ರೋಧಾದಿಗಳು ಕೆಟ್ಟು, ವಿಷಯಂಗಳೋಡಿದವು. ಅಲಗು ಎನ್ನೊಳು ನಟ್ಟು ಆನಳಿದ ಕಾರಣ ಚೆನ್ನಮಲ್ಲಿಕಾರ್ಜುನಲಿಂಗವ ಕರದಲ್ಲಿ ಹಿಡಿದೆ.

ಗುರುವೆಂಬ ತೆತ್ತಿಗನು Read More »