Purandara Dasa

ಹುವ್ವ ತರುವರ ಮನೆಗೆ

ಹುವ್ವ ತರುವರ ಮನೆಗೆ ಹುಲ್ಲ ತರುವ ಅವ್ವ ಲಕುಮೀರಮಣ ಇವಗಿಲ್ಲ ಗರುವ|| ಒಂದು ದಳ ಶ್ರೀತುಳಸಿ ಬಿಂದು ಗಂಗೋದಕವ ಇಂದಿರಾರಮಣಗೆ ಅರ್ಪಿತವೆನುತ| ಒಂದೇ ಮನಸಿನಲಿ ಸಿಂಧುಶಯನ ಎನೆ ಎಂದೆಂದು ವಾಸಿಪನಾ ಮಂದಿರದೊಳಗೆ|| ಪಾಂಡವರ ಮನೆಯೊಳಗೆ ಕುದುರೆಗಳ ತಾ ತೊಳೆದು ಪುಂಡರೀಕಾಕ್ಷ ತಾ ಹುಲ್ಲನು ತಿನಿಸಿ| ಅಂಡಜವಾಹನ ನಮ್ಮ ಪುರಂದರವಿಟ್ಠಲನು ತೊಂಡರಿಗೆ ತೊಂಡನಾಗಿ ಸಂಚರಿಸುತಿಹನು|| —-ಪುರಂದರದಾಸ

ಹುವ್ವ ತರುವರ ಮನೆಗೆ Read More »

ಹಾಂಗೆ ಇರಬೇಕು

ಹಾಂಗೆ ಇರಬೇಕು ಸಂಸಾದಲ್ಲಿ ಹ್ಯಾಂಗೆ ಬರೆದಿತ್ತೊ ಪ್ರಾಚೀನದಲ್ಲಿ|| ಪಕ್ಷಿ ಅಂಗಳದಲ್ಲಿ ಬಂದು ಕೂತಂತೆ ಆ ಕ್ಷಣದಲ್ಲಿ ಹಾರಿ ಹೋದಂತೆ|| ನಾನಾ ಪರಿಯಲಿ ಸಂತೆ ನೆರೆದಂತೆ ನಾನಾ ಪಂಥವ ಹಿಡಿದು ಹೋದಂತೆ|| ಮಕ್ಕಳು ಆಡಿ ಮನೆ ಕಟ್ಟಿದಂತೆ ಆಟ ಸಾಕೆಂದು ಅಳಿಸಿ ಪೋದಂತೆ|| ವಸತಿಕಾರನು ವಸತಿ ಕಂಡಂತೆ ಹೊತ್ತಾರೆದ್ದು ಹೊರಟು ಹೋದಂತೆ|| ಸಂಸಾರಪಾಶವ ನೀನೇ ಬಿಡಿಸಯ್ಯಾ ಕಂಸಾರಿ ಪುರಂದರವಿಟ್ಠಲರಾಯ|| —-ಪುರಂದರದಾಸ

ಹಾಂಗೆ ಇರಬೇಕು Read More »

ಹಂಸ ನಿನ್ನಲಿ ನೀ ನೋಡೋ

ಹಂಸ ನಿನ್ನಲಿ ನೀ ನೋಡೋ| ಭವ- ಪಾಶಮುಕ್ತನಾಗಿ ಹರಿಯನ್ನು ಕೂಡೋ|| ಪಕ್ಕಗಳೆರಡುಂಟು ನಿನಗೆ| ನೀ ಹೊಕ್ಕು ಹೋಗುವೆ ಮೂರು ಪಂಜರದೊಳಗೆ| ಲೆಕ್ಕವಿಲ್ಲದ ದಾರಿ ನಿನಗೆ| ಈಗ ಸಿಕ್ಕಿದೆಯೋ ಮಾಯಾಪಾಶದೊಳಗೆ|| ಹಬ್ಬದ ಸವಿಗೆ ನೀ ಬಂದೆ| ಬಲು ಕೊಬ್ಬಿಲಿ ಕಾಣದೆ ವಿಷದೊಳು ಬಿದ್ದೆ| ದಿಬ್ಬಣದಲಿ ಮೈಯ ಮರೆತೆ| ನೀ ಒಬ್ಬನೆ ಹೋಗಿ ಕಾಲಕ್ಕೆ ಗುರಿಯಾದೆ|| ಯಾರಿಗೆ ಯಾರು ಮತ್ತಿಲ್ಲ| ನಡು- ದಾರಿಯೊಳಗೆ ಕೈಯ ಬಿಡುವರೆ ಎಲ್ಲ| ದೂರ ಹೋಯಿತು ಪ್ರಾಯವೆಲ್ಲ| ಸಿರಿ ಪುರಂದರವಿಟ್ಠಲನಲದೆ ಬೇರೆಯಿಲ್ಲ|| —-ಪುರಂದರದಾಸ

ಹಂಸ ನಿನ್ನಲಿ ನೀ ನೋಡೋ Read More »

ಹರಿದಾಸರ ಸಂಗ

ಹರಿದಾಸರ ಸಂಗ ದೊರಕಿತು ಎನಗೀಗ | ವರಗುರು ಉಪದೇಶ ನೆರವಾಯ್ತು|| ಮಾಯದ ಸಂಸಾರ ಮಮಕಾರ ತಗ್ಗಿತು| ತೋಯಜಾಕ್ಷನ ನಾಮ ಜಿಹ್ವೆಯೊಳ್ ನೆಲಸಿತು|| ಏನೆಂದು ಹೇಳಲಿ ಆನಂದ ಸಂಭ್ರಮ ಆ ನಂದಗೋಪನ ಕಂದನ ಮಹಿಮೆಯ| ಎನ್ನ ವಂಶಗಳೆಲ್ಲ ಪಾವನವಾದವು ಶ್ರೀಪುರಂದರವಿಟ್ಠಲಯ್ಯ ದೊರಕಿದ|| —-ಪುರಂದರದಾಸ

ಹರಿದಾಸರ ಸಂಗ Read More »

ಹನುಮನ ಮತವೇ

ಹನುಮನ ಮತವೇ ಹರಿಯ ಮತವೊ ಹರಿಯ ಮತವೇ ಹನುಮನ ಮತವೊ|| ಹನುಮನು ಒಲಿದರೆ ಹರಿ ತಾನೊಲಿವನು| ಹನುಮನು ಮುನಿದರೆ ಹರಿಯು ಮುನಿವನು|| ಹನುಮನು ಒಲಿಯೆ ಸುಗ್ರೀವನು ಗೆದ್ದ| ಹನುಮನು ಮುನಿಯೆ ವಾಲಿಯು ಬಿದ್ದ|| ಹನುಮನು ಒಲಿಯೆ ವಿಭೀಷಣ ಗೆದ್ದ| ಹನುಮನು ಮುನಿಯೆ ರಾವಣ ಬಿದ್ದ|| ಹನುಮನು ಪುರಂದರವಿಟ್ಠಲನ ದಾಸ| ಪುರಂದರವಿಟ್ಠಲನು ಹನುಮನೊಳ್ ವಾಸ|| —-ಪುರಂದರದಾಸ

ಹನುಮನ ಮತವೇ Read More »

ಶ್ರೀ ಪತಿಯು ನಮಗೆ

ಶ್ರೀಪತಿಯು ನಮಗೆ ಸಂಪದವೀಯಲಿ ವಾಣೀಪತಿಯು ನಮಗೆ ದೀರ್ಘಾಯು ಕೊಡಲಿ|| ವರವಿಬುಧರನು ಪೊರೆಯೆ ವಿಷವ ಕಂಠದಲಿಟ್ಟ ಹರ ನಿತ್ಯ ನಮಗೆ ರಕ್ಷಣೆ ನೀಡಲಿ| ನರರೊಳುನ್ನತವಾದ ನಿತ್ಯ ಭೋಗಂಗಳನು ಪುರಹೂತ ದಯದಿಂದ ಪೂರ್ಣಮಾಡಿಸಲಿ|| ವಿನುತಸಿದ್ಧಿಪ್ರದನು ವಿಘ್ನೇಶ ದಯದಿಂದ ನೆನೆದ ಕಾರ್ಯಗಳ ನೆರೆವೇರಿಸಲಿ ಹರಸಿ| ದಿನದಿನವು ಧನ್ವಂತ್ರಿಯಾಪತ್ತುಗಳ ಕಳೆದು ಮನಹರುಷವಿತ್ತು ಮನ್ನಿಸಲಿ ಬಿಡದೆ|| ನಿರುತ ಸುಜ್ಞಾನವನು ಬೆಳಗಿ ಕೃಪೆಗೈಯುವ ಗುರುಗಳಾಶೀರ್ವಾದ ನಮಗಾಗಲಿ| ಪುರಂದರವಿಟ್ಠಲನ ಕರುಣದಿಂದಲಿ ಸಕಲ ಸುರರೊಲುಮೆ ನಮಗೆ ಸುಸ್ಥಿರವಾಗಲಿ|| —-ಪುರಂದರದಾಸ

ಶ್ರೀ ಪತಿಯು ನಮಗೆ Read More »

ಶಿವದರುಶನ ನಮಗಾಯ್ತು

ಶಿವದರುಶನ ನಮಗಾಯ್ತು ಕೇಳೆ ಶಿವರಾತ್ರಿಯ ಜಾಗರಣೆ|| ಪಾತಾಳಗಂಗೆಯ ಸ್ನಾನವ ಮಾಡಲು ಪಾತಕವೆಲ್ಲ ಪರಿಹಾರವು| ಜ್ಯೋತಿರ್ಲಿಂಗನ ಧ್ಯಾನವ ಮಾಡಲು ದ್ಯೂತಗಳಿಲ್ಲ ಅನುದಿನವು|| ಬೇಡಿದ ವರಗಳ ಕೊಡುವನು ತಾಯಿ ಬ್ರಹ್ಮನ ರಾಣಿಯ ನೋಡುವನು| ಆಡುತ ಪಾಡುತ ಏರುತ ಬಸವನ ಆನಂದದಿಂದಲಿ ನಲಿದಾಡುವನು|| ಶಿಖರವ ಕಂಡೆನು ಪುರಂದರ ವಿಟ್ಠಲನ ಹರಿನಾರಾಯಣ ಧ್ಯಾನದಲಿ|| —-ಪುರಂದರದಾಸ

ಶಿವದರುಶನ ನಮಗಾಯ್ತು Read More »

ಶಕ್ತನಾದರೆ

ಶಕ್ತನಾದರೆ ನೆಂಟರೆಲ್ಲ ಹಿತರು| ಅ- ಶಕ್ತನಾದರೆ ಅವರೆ ವೈರಿಗಳು ಲೋಕದಲಿ|| ಕಮಲ ಅರ್ಕನಲಿರುವ ಕಡು ನೆಂಟತನದಿಂದ ವಿಮಲ ಜಲದೊಳಗೆ ಅದು ಆಡುತಿಹುದು| ಕ್ರಮಗೆಟ್ಟು ನೀರಿಂದ ತಡಿಗೆ ಬೀಳಲು ರವಿಯ ಅಮಿತ ಕಿರಣಗಳಿಂದ ಕಂದಿಹೋಗುವುದು|| ವನಸುತ್ತಿ ಸುಡುವಾಗ ವಾಯು ಬೀಸಲು ಉರಿಯು ಘನ ಪ್ರಜ್ವಲಿಸುತಿಹುದು ಗಗನಕಡರಿ| ಮನೆಯೊಳಿಹ ದೀಪಕ್ಕೆ ಮಾರುತನು ಸೋಂಕಿದರು ಘನಶಕ್ತಿಯುಡುಗಿ ತಾ ನಂದಿಹೋಗುವುದು|| ಕರಿಯ ಕಾಯಿದ ಹರಿಯ ಕರುಣತಪ್ಪಿದ ಮೇಲೆ ಮರೆಯ ಹೊಕ್ಕರು ಕಾವ ಮಹಿತರಾರಯ್ಯ| ವರದ ಶ್ರೀ ಪುರಂದರವಿಟ್ಠಲನು ಒಲಿದಿರಲು ಸರುವ ಜನರೆಲ್ಲ ಮೂಜಗದಿ

ಶಕ್ತನಾದರೆ Read More »

ವೆಂಕಟಾಚಲನಿಲಯಂ ಸ್ವಾಮಿ

ವೆಂಕಟಾಚಲನಿಲಯಂ ಸ್ವಾಮಿ ವೈಕುಂಠಪುರವಾಸಮ್ ಪಂಕಜನೇತ್ರಂ ಪರಮಪವಿತ್ರಂ ಶಂಖಚಕ್ರಧರ-ಚಿನ್ಮಯರೂಪಮ್|| ಅಂಬುಜೋದ್ಭವವಿನುತಂ ಸ್ವಾಮಿ ಅಗಣಿತಗುಣನಾಮಮ್ ತುಂಬುರುನಾರದ ಗಾನವಿಲೋಲಮ್ ಅಂಬುಧಿಶಯನಂ ಆತ್ಮಾಭಿರಾಮಮ್|| ಪಾಹಿ ಪಾಂಡವಪಕ್ಷಂ ಸ್ವಾಮಿ ಕೌರವಮದಹರಣಮ್ ಬಹು-ಪರಾಕ್ರಮಿ-ಫಣಿಮದಭಂಗಮ್ ಅಹಲ್ಯಾಶಾಪ ಭಯನಾಶಮ್|| ಸಕಲವೇದ ವಿಚಾರಂ ವರ- ಸಾಧುಜನ ಪರಿಪಾಲಮ್ ಮಕರಕುಂಡಲಧರ-ಮದನಗೋಪಾಲಮ್ ಭಕ್ತವತ್ಸಲಂ ಪುರಂದರವಿಟ್ಠಲಮ್|| —-ಪುರಂದರದಾಸ

ವೆಂಕಟಾಚಲನಿಲಯಂ ಸ್ವಾಮಿ Read More »

ವಿದುರನ ಭಾಗ್ಯವಿದು

ವಿದುರನ ಭಾಗ್ಯವಿದು|| ಇದ ಕಂಡು ಜಗವೆಲ್ಲ ತಲೆದೂಗುತಿಹುದು|| ಕುರುರಾಯನು ಖಳನನುಜನು ರವಿಜನು ಗುರುಗಾಂಗೇಯರು ನೋಡುತಿರೆ| ಹರಿಸಿ ರಥವನು ಬೀದಿಯಲಿ ಬರುತಲಿಹ ಹರಿಯನು ಕಂಡನು ಹರುಷದಲಿ|| ದಾರಿಲಿ ಬರುತಿಹ ಮುರವೈರಿಯನು ಕಂಡು ಹಾರುತ ಚೀರುತ ಕುಣಿಯುತಲಿ| ಹರುಷದ ಕಂಬನಿ ಧಾರೆಯ ಸುರಿಸುತ ಬಾರಿಬಾರಿಗು ಸಂತೋಷದಿ ಹಿಗ್ಗುವ|| ಆಟಕೆ ಲೋಕಗಳೆಲ್ಲವ ಸೃಜಿಸುವ ನಾಟಕಧರ ತನ್ನ ಲೀಲೆಯಲಿ| ನೀಟಾದವರ ಮನೆಗಳ ಜರಿದು ಕುಟೀರದಲಿ ಬಂದು ಕುಳಿತ ಹರಿ|| ಅಡಿಗಡಿಗೆ ತನ್ನ ತನುಮನ ಹರಹಿ ಅಡಿಗೆರಗುತ ಗದ್ಗದ ಸ್ವರದಿ| ನುಡಿಗಳು ತೊದಲಲು ರೋಮಾಂಚವಾಗಲು

ವಿದುರನ ಭಾಗ್ಯವಿದು Read More »

ರಾಮ ಮಂತ್ರವ ಜಪಿಸೋ

ರಾಮಮಂತ್ರವ ಜಪಿಸೋ ಹೇ ಮನುಜಾ|| ಆ ಮಂತ್ರ ಈ ಮಂತ್ರ ನೆಚ್ಚಿ ನೀ ಕೆಡಬೇಡ ಸೋಮಶೇಖರ ತನ್ನ ಭಾಮಿನಿಗೊರೆದಿಹ|| ಕುಲಹೀನನಾದರೂ ಕೂಗಿ ಜಪಿಸುವ ಮಂತ್ರ ಸರಿವ ಭೀತಿಯೊಳು ಉಚ್ಚರಿಪ ಮಂತ್ರ| ಹಲವು ಪಾಪಂಗಳ ಹದಗೆಡಿಸುವ ಮಂತ್ರ ಸುಲಭದಿಂದಲಿ ಸ್ವರ್ಗ ಸೂರೆಗೊಳ್ಳುವ ಮಂತ್ರ|| ಸಕಲ ವೇದಗಳಿಗೆ ಸಾರವೆನಿಪ ಮಂತ್ರ ಮುಕುತಿ ಮಾರ್ಗಕೆ ಇದೇ ಮೂಲಮಂತ್ರ| ಭಕುತಿರಸಕೆ ಭವ್ಯ ಮಾರ್ಗ ತೋರುವ ಮಂತ್ರ ಸುಖನಿಧಿ ಪುರಂದರವಿಟ್ಠಲನ ಮಹಾಮಂತ್ರ|| —-ಪುರಂದರದಾಸ

ರಾಮ ಮಂತ್ರವ ಜಪಿಸೋ Read More »

ರಾಮ ಎಂಬುವ ಎರಡು

ರಾಮ ಎಂಬುವ ಎರಡು ಅಕ್ಷರದ ಮಹಿಮೆಯನು ಪಾಮರರು ತಾವೇನು ಬಲ್ಲರಯ್ಯ|| ‘ರಾ’ ಎಂದ ಮಾತ್ರದೊಳು ರಕ್ತ ಮಾಂಸದೊಳಿದ್ದ ಆಯಸ್ಥಿಗತವಾದ ಅತಿ ಪಾಪವನ್ನು| ಮಾಯವನು ಮಾಡಿ ಮಹರಾಯ ಮುಕ್ತಿಯ ಕೊಡುವ ದಾಯವನು ವಾಲ್ಮೀಕಿ ಮುನಿರಾಯ ಬಲ್ಲ|| ಮತ್ತೆ ‘ಮ’ ಎಂದೆನಲು ಹೊರಬಿದ್ದ ಪಾಪಗಳು ಒತ್ತಿ ಒಳಪೊಗದಂತೆ ಕವಾಟವಾಗಿ| ಚಿತ್ತ ಕಾಯಗಳ ಪವಿತ್ರ ಮಾಡುವ ಪರಿಯ ಭಕ್ತವರ ಹನುಮಂತನೊಬ್ಬ ತಾ ಬಲ್ಲ|| ಧರೆಯೊಳೀ ನಾಮಕ್ಕೆ ಸರಿಮಿಗಿಲು ಇಲ್ಲೆಂದು ಪರಮ ವೇದಗಳೆಲ್ಲ ಪೊಗಳುತಿಹವು| ಸಿರಿಯರಸ ಪುರಂದರ ವಿಟ್ಠಲನ ನಾಮವನು ಸಿರಿಕಾಶಿಯೊಳಗಿಪ್ಪ ಶಿವನು

ರಾಮ ಎಂಬುವ ಎರಡು Read More »

ರಾಗಿ ತಂದೀರ್ಯಾ

ರಾಗಿ ತಂದೀರ್ಯಾ ಭಿಕ್ಷಕೆ ರಾಗಿ ತಂದೀರ್ಯಾ| ಯೋಗ್ಯರಾಗಿ ಭೋಗ್ಯರಾಗಿ ಭಾಗ್ಯವಂತರಾಗಿ ನೀವು|| ಅನ್ನದಾನವ ಮಾಡುವರಾಗಿ ಅನ್ನಛತ್ರವನಿಟ್ಟವರಾಗಿ| ಅನ್ಯವಾರ್ತೆಯ ಬಿಟ್ಟವರಾಗಿ ಅನುದಿನ ಭಜನೆಯ ಮಾಡುವರಾಗಿ|| ಮಾತಾಪಿತರನು ಸೇವಿಪರಾಗಿ ಪಾಪಕಾರ್ಯವ ಬಿಟ್ಟವರಾಗಿ| ರೀತಿಯ ಬಾಳನು ಬಾಳುವರಾಗಿ ನೀತಿಮಾರ್ಗದಲಿ ಖ್ಯಾತರಾಗಿ|| ಗುರುಕಾರುಣ್ಯವ ಪಡೆದವರಾಗಿ ಗುರುವಾಕ್ಯವನು ಪಾಲಿಪರಾಗಿ| ಗುರುವಿನ ಪಾದವ ಸ್ಮರಿಸುವರಾಗಿ ಪರಮಪುಣ್ಯವ ಮಾಡುವರಾಗಿ|| ಕಾಮಕ್ರೋಧವ ಅಳಿದವರಾಗಿ ನೇಮನಿಷ್ಠೆಗಳ ಮಾಡುವರಾಗಿ| ರಾಮನಾಮವ ಜಪಿಸುವರಾಗಿ ಪ್ರೇಮದಿ ಕುಣಿಕುಣಿದಾಡುವರಾಗಿ|| ಹರಿಯನು ಅನುದಿನ ನೆನೆಯುವರಾಗಿ ಗುರುತಿಗೆ ಬಾಹೋರಂಥವರಾಗಿ| ಕರೆಕರೆ ಭವವನು ನೀಗುವರಾಗಿ ಪುರಂದರವಿಟ್ಠಲನ ಸೇವಿಪರಾಗಿ|| —-ಪುರಂದರದಾಸ

ರಾಗಿ ತಂದೀರ್ಯಾ Read More »

ಯಾದವ ನೀ ಬಾ

ಯಾದವ ನೀ ಬಾ ಯದುಕುಲನಂದನ ಮಾಧವ ಮಧುಸೂದನ ಬಾರೋ|| ಸೋದರಮಾವನ ಮಥುರೆಲಿ ಮಡುಹಿದ ಯಶೋದಾಕಂದ ನೀ ಬಾರೋ|| ಕಣಕಾಲಂದುಗೆ ಘುಲುಘುಲುರೆನುತಲಿ ಝಣಝಣ ವೇಣುನಿನಾದದಲಿ| ಚಿಣ್ಣಿಕೋಲು ಚೆಂಡು ಬುಗುರಿಯನಾಡುತ ಸಣ್ಣವರೊಡಗೂಡಿ ನೀ ಬಾರೋ|| ಶಂಖ ಚಕ್ರವು ಕೈಯಲಿ ಹೊಳೆಯುತ ಬಿಂಕದ ಗೋವಳ ನೀ ಬಾರೋ| ಅಕಳಂಕ ಚರಿತನೆ ಆದಿನಾರಾಯಣ ಬೇಕೆಂಬ ಬಕ್ತರಿಗೊಲಿ ಬಾರೋ|| ಖಗವಾಹನನೆ ಬಗೆಬಗೆರೂಪನೆ ನಗೆಮೊಗದರಸನೆ ನೀ ಬಾರೋ| ಜಗದೊಳು ನಿನ್ನಯ ಮಹಿಮೆಯ ಪೊಗಳುವೆ ಪುರಂದರವಿಟ್ಠಲ ನೀ ಬಾರೋ|| —-ಪುರಂದರದಾಸ

ಯಾದವ ನೀ ಬಾ Read More »

ಮೂರುತಿಯನೆ ನಿಲಿಸೋ

ಮೂರುತಿಯನೆ ನಿಲಿಸೋ ಮಾಧವ ನಿನ್ನ| ಎಳೆ ತುಳಸಿಯ ವನಮಾಲೆಯು ಕೊರಳೊಳು ಪೊಳೆವ ಪೀತಾಂಬರದಿಂದ ಒಪ್ಪುವ ನಿನ್ನ|| ಮುತ್ತಿನ ಸರ ನವರತ್ನದುಂಗುರವಿಟ್ಟು ಮತ್ತೆ ಶ್ರೀಲಕುಮಿಯು ಉರದಿ ಒಪ್ಪುವ ನಿನ್ನ|| ಭಕ್ತರ ಕಲ್ಪತರು ಭಾಗ್ಯದ ಸುರಧೇನು ಮುಕ್ತಿದಾಯಕ ನಮ್ಮ ಪುರಂದರ ವಿಟ್ಠಲ|| —-ಪುರಂದರದಾಸ

ಮೂರುತಿಯನೆ ನಿಲಿಸೋ Read More »

ಮರೆಯಬೇಡ ಮನವೆ

ಮರೆಯಬೇಡ ಮನವೆ ನೀನು ಹರಿಯ ಸ್ಮರಣೆಯ|| ಯಾಗಯಜ್ಞ ಮಾಡಲೇಕೆ ಯೋಗಿಯತಿಯು ಆಗಲೇಕೆ| ನಾಗಶಯನ ನಾರದನುತನ ಕೂಗಿ ಭಜನೆ ಮಾಡೋ|| ಸತಿಯು ಸುತರು ಹಿತರು ಎಂದು ಮತಿಯುಗೆಟ್ಟು ಕೆಡಲಿಬೇಡ| ಗತಿಯು ತಪ್ಪಿ ಹೋಗುವಾಗ ಸತಿಯು ಸುತರು ಬರುವರೇ|| ಹರಿಯ ಸ್ಮರಣೆ ಮಾತ್ರದಿಂದ ಘೋರದುರಿತವೆಲ್ಲ ನಾಶ| ಪರಮಪುರುಷ ಶ್ರೀ ಪುರಂದರ ವಿಟ್ಠಲೋರಾಯ ಪದವಿ ಕೊಡುವ|| —-ಪುರಂದರದಾಸ

ಮರೆಯಬೇಡ ಮನವೆ Read More »

ಮನ ಶುದ್ಧಿಯಿಲ್ಲದವಗೆ

ಮನ ಶುದ್ಧಿಯಿಲ್ಲದವಗೆ ಮಂತ್ರದ ಫಲವೇನು| ತನು ಶುದ್ಧಿಯಿಲ್ಲದವಗೆ ತೀರ್ಥದ ಫಲವೇನು|| ಮಿಂದಲ್ಲಿ ಫಲವೇನು ಮೀನು ಮೊಸಳೆಯಂತೆ ನಿಂದಲ್ಲಿ ಫಲವೇನು ಶ್ರೀಶೈಲದ ಕಾಗೆಯಂತೆ| ಹೊರಗೆ ಮಿಂದು ಒಳಗೆ ಮೀಯದವರ ಕಂಡು ಬೆರಗಾಗಿ ನಗುತಿದ್ದ ಪುರಂದರವಿಟ್ಠಲ|| —ಪುರಂದರದಾಸ

ಮನ ಶುದ್ಧಿಯಿಲ್ಲದವಗೆ Read More »

ಭಾಗ್ಯದ ಲಕ್ಷ್ಮಿ ಬಾರಮ್ಮ

ಭಾಗ್ಯದ ಲಕ್ಷ್ಮಿ ಬಾರಮ್ಮ| ನಮ್ಮಮ್ಮ ನೀ ಸೌ- ಭಾಗ್ಯದ ಲಕ್ಷ್ಮಿ ಬಾರಮ್ಮ|| ಗೆಜ್ಜೆ ಕಾಲ್ಗಳ ಧ್ವನಿಯನು ತೋರುತ ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ ಸಜ್ಜನ ಸಾಧು ಪೂಜೆಯ ಮೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ|| ಕನಕವೃಷ್ಟಿಯ ಕರೆಯುತ ಬಾರೆ ಮನಕೆ ಮಾನವ ಸಿದ್ಧಿಯ ತೋರೆ ದಿನಕರಕೋಟಿ ತೇಜದಿ ಹೊಳೆಯುವ ಜನಕರಾಯನ ಕುಮಾರಿ ಬೇಗ|| ಅತ್ತಿತ್ತಗಲದೆ ಭಕ್ತರ ಮನೆಯಲಿ ನಿತ್ಯಮಹೋತ್ಸವ ನಿತ್ಯ ಸುಮಂಗಳ ಸತ್ಯವ ತೋರುವ ಸಾಧುಸಜ್ಜನರ ಚಿತ್ತದಿ ಹೊಳೆವ ಪುತ್ಥಳಿ ಬೊಂಬೆ|| ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು ಕಂಕಣ ಕೈಯನು ತಿರುವುತ ಬಾರೆ

ಭಾಗ್ಯದ ಲಕ್ಷ್ಮಿ ಬಾರಮ್ಮ Read More »

ಬೇವು ಬೆಲ್ಲದೊಳಿಡಲೇನು ಫಲ

ಬೇವು ಬೆಲ್ಲದೊಳಿಡಲೇನು ಫಲ ಹಾವಿಗೆ ಹಾಲೆರೆದೇನು ಫಲ|| ಕುಟಿಲವ ಬಿಡದಿಹ ಮನುಜರು ಮಂತ್ರವ ಪಠನೆಯ ಮಾಡಿದರೇನು ಫಲ| ಸಟೆಯನ್ನಾಡುವ ಮನುಜರು ಸಂತತ ನಟನೆಯ ಮಾಡಿದರೇನು ಫಲ|| ಕಪಟತನದಲಿ ಕಾಡುತ ಜನರನು ಜಪವನು ಮಾಡಿದರೇನು ಫಲ| ಕುಪಿತತನವನು ಬಿಡದೆ ನಿರಂತರ ಉಪವಾಸ ಮಾಡಿದರೇನು ಫಲ|| ಮಾತಾಪಿತರನು ಬಳಲಿಸಿದಾತನು ಯಾತ್ರೆಯ ಮಾಡಿದರೇನು ಫಲ| ಘಾತಕತನವನು ಬಿಡದೆ ನಿರಂತರ ಗೀತೆಯನೋದಿದರೇನು ಫಲ|| ಹೀನಗುಣಂಗಳ ಹಿಂಗದೆ ಗಂಗೆಯ ಸ್ನಾನವ ಮಾಡಿದರೇನು ಫಲ| ಶ್ರೀನಿಧಿ ಪುರಂದರವಿಟ್ಠಲನ ನೆನೆಯದೆ ಮೌನವ ಮಾಡಿದರೇನು ಫಲ||                                 —-ಪುರಂದರದಾಸ

ಬೇವು ಬೆಲ್ಲದೊಳಿಡಲೇನು ಫಲ Read More »

ಬೆಲ್ಲದ ಕಟ್ಟೆಯ ಕಟ್ಟಿ

ಬೆಲ್ಲದ ಕಟ್ಟೆಯ ಕಟ್ಟಿ ಬೇವಿನ ಬೀಜವ ಬಿತ್ತಿ ಜೇನು ಮಳೆಗರೆದರೆ ವಿಷ ಹೋಗುವುದೇನಯ್ಯಾ|| ಏನು ನೋಡಿದರೇನು ಏನು ಕೇಳಿದರೇನು| ಮನದೊಳಗಿನ ತಾಮಸ ಮಾಣದನ್ನಕ|| ಕೊಳಲು ದನಿಗೆ ಸರ್ಪ ತಲೆದೂಗುವಂದದಿ ಇದಕೇನು ಮದ್ದು ಶ್ರೀ ಪುರಂದರ ವಿಟ್ಠಲಾ||                   —–ಪುರಂದರದಾಸ

ಬೆಲ್ಲದ ಕಟ್ಟೆಯ ಕಟ್ಟಿ Read More »

ಬೆಟ್ಟದಂಥ ದುರಿತವು

ಬೆಟ್ಟದಂಥ ದುರಿತವು ಸುತ್ತಮುತ್ತಲೊಟ್ಟಿರೆ ಕೃಷ್ಣನಾಮದ ಕಿಡಿಬಿದ್ದು ಬೆಂದುಹೋದುದ ಕಂಡೆನಯ್ಯ|| ಎಲೆ ಎಲೆ ದುರಿತವೆ ತಿರುಗಿ ನೋಡದೆ ಹೋಗು ಎಲೆ ಎಲೆ ದುರಿತವೆ ಮರಳಿ ನೋಡದೆ ಹೋಗು ನಿನ್ನ ಕಂಡರೆ ಕೃಷ್ಣ ಶಿಕ್ಷಿಸದೆ ಬಿಡನು ಇನ್ನೊಮ್ಮೆ ಕಂಡರೆ ಶಿರವ ಚೆಂಡಾಡುವನು ಪುಂಡರೀಕಾಕ್ಷ ನಮ್ಮ ಪುರಂದರವಿಟ್ಠಲ||                                               —-ಪುರಂದರದಾಸ

ಬೆಟ್ಟದಂಥ ದುರಿತವು Read More »

ಬಿನ್ನಹಕೆ ಬಾಯಿಲ್ಲವಯ್ಯ

ಬಿನ್ನಹಕೆ ಬಾಯಿಲ್ಲವಯ್ಯ ಅನಂತ ಅಪರಾಧ ಎನ್ನೊಳಗೆ ಇರಲಾಗಿ|| ಶಿಶುಮೋಹ ಸತಿಮೋಹ ಜನನಿ-ಜನಕರ ಮೋಹ ರಸಿಕ ಭ್ರಾತರ ಮೋಹ ರಾಜಮೋಹ| ಪಶುಮೋಹ ಭೂಮೋಹ ಬಂಧುವರ್ಗದ ಮೋಹ ಅಸುರಾರಿ ನಿನ್ನ ಮರೆತೆನೋ ಕಾಯೋ ಹರಿಯೇ|| ಅನ್ನಮದ ಅರ್ಥಮದ ಅಖಿಲ ವೈಭವದ ಮದ ಮುನ್ನ ಪ್ರಾಯದ ಮದವು ಪೂಪಮದವು| ತನ್ನ ಸತ್ತ್ವದ ಮದ ಧಾತ್ರಿವಶದ ಮದ ಇನ್ನು ತನಗೆದುರಿಲ್ಲವೆಂತೆಂಬ ಮದದಿಂದ|| ಇಷ್ಟು ದೊರೆಕಿದರೆ ಮತ್ತಿಷ್ಟು ಬೇಕೆಂಬಾಸೆ ಅಷ್ಟು ದೊರಕಿದರೆ ಮತ್ತಿಷ್ಟರಾಸೆ| ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ ನಷ್ಟಜೀವನದಾಸೆ ಪುರಂದರವಿಟ್ಠಲ||                                          —-ಪುರಂದರದಾಸ

ಬಿನ್ನಹಕೆ ಬಾಯಿಲ್ಲವಯ್ಯ Read More »

ಬಾರಯ್ಯ ರಂಗ

ಬಾರಯ್ಯ ರಂಗ ಬಾರಯ್ಯ ಕೃಷ್ಣ ಬಾರಯ್ಯ ಸ್ವಾಮಿ ಬಾರಯ್ಯ|| ವಾರಣಭಯವ ನಿವಾರಣ ಮಾಡಿದ ಕಾರುಣ್ಯನಿಧಿ ಎನ್ನ ಹೃದಯಮಂದಿರಕೆ|| ಇಂದೆನ್ನ ಪೂರ್ವಪಾಪಂಗಳ ಕಳೆದು ಮುಂದೆನ್ನ ಜನ್ಮ ಸಫಲವ ಗೈದು| ತಂದೆ ಶ್ರೀ ಪುರಂದರವಿಟ್ಠಲಾ ನೀನೊಲಿದು ಎಂದೆಂದಿಗಾನಂದ ಸುಖವನು ಸುರಿದು||                                                 —-ಪುರಂದರದಾಸ

ಬಾರಯ್ಯ ರಂಗ Read More »

ಬಂದು ನಿಂದಿಹ ನೋಡಿ

ಬಂದು ನಿಂದಿಹ ನೋಡಿ ಭೂತಳದಿ ವೆಂಕಟ ಇಂದಿರೆಯ ಒಡಗೂಡಿ ಒಪ್ಪುವ ನಿರಂತರ ಪೊಂದಿ ಭಜನೆಯ ಮಾಡಿ ಆನಂದಗೂಡಿ|| ವಂದಿಸುತ ಮನದೊಳಗೆ ಇವನಡಿ ದ್ವಂದ್ವ ಭಜಿಸಲು ಬಂದ ಭಯಹರ ಇಂದುಧರ ಸುರವೃಂದನುತ ಗೋ- ವಿಂದ ಕರುಣಾಸಿಂಧು ಶ್ರೀಹರಿ|| ದ್ವಾರದೆಡಬಲದಲ್ಲಿ ಜಯವಿಜಯರಿಬ್ಬರು ಸೇರಿ ಸೇವಿಪರಲ್ಲಿ ಸನಕಾದಿನುತ ಶೃಂ- ಗಾರ ನಿಧಿ ಕೊರಳಲ್ಲಿ ಮುತ್ತಿನಲ್ಲಿ ಶೋಭಿಪ ಹಾರ ಪೊಂದಿಹುದಲ್ಲಿ ವಿಸ್ತಾರದಲ್ಲಿ|| ವಾರವಾರಕೆ ಪೂಜೆಗೊಂಬುವ ಹಾರ ಮುಕುಟಾಭರಣ ಕುಂಡಲ ಧಾರ ಭುಜ ಕೇಯೂರಭೂಷಿತ ಮಾರಪಿತ ಗುಣ ಮೋಹನಾಂಗ|| ಚಾರು ಪೀತಾಂಬರ ಕಟೀ ಕರ-

ಬಂದು ನಿಂದಿಹ ನೋಡಿ Read More »

ಬರಿದೆ ಹೋಯಿತು

ಬರಿದೆ ಹೋಯಿತು ಹೋಯಿತು ಹೊತ್ತು| ನರಜನ್ಮ ಸ್ಥಿರವೆಂದು ನಾನಿದ್ದೆನೊ ರಂಗ|| ಆಸೆ ಎಂಬುದು ಎನ್ನ ಕ್ಲೇಶಪಡಿಸುತಿದೆ ಗಾಸಿಯಾದೆನೊ ಹರಿ ನಾರಾಯಣ| ವಾಸುದೇವನೆ ನಿನ್ನ ಧ್ಯಾನವ ಮಾಡದೆ ನಾಶವಾಯಿತು ಜನ್ಮ ಮೋಸಹೋದೆನು ಕೃಷ್ಣ|| ಪರರ ಸೇವೆಯ ಮಾಡಿ ಪರರನ್ನೆ ಕೊಂಡಾಡಿ ಮರುಳುತನದಲಿ ಮತಿಹೀನನಾದೆ| ನೆರೆ ನಂಬಿದೆನೊ ನಿನ್ನ ಕರುಣದಿಂದಲಿ ಎನ್ನ ಮರೆಯದೆ ಸಲಹಯ್ಯ ಪುರಂದರವಿಟ್ಠಲ||                                             —-ಪುರಂದರದಾಸ

ಬರಿದೆ ಹೋಯಿತು Read More »