ನರಜನ್ಮವ ತೊಡೆದು ಹರಜನ್ಮವ ಮಾಡಿದ ಗುರುವೆ ನಮೋ.

ನರಜನ್ಮವ ತೊಡೆದು ಹರಜನ್ಮವ ಮಾಡಿದ ಗುರುವೆ ನಮೋ. ಭವಬಂಧನವ ಬಿಡಿಸಿ ಪರಮಸುಖವ ತೋರಿದ ಗುರುವೆ ನಮೋ. ಭವಿಯೆಂಬುದ ತೊಡೆದು ಭಕ್ತೆ ಎಂದೆನಿಸಿದ ಗುರುವೆ ನಮೋ. ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕ್ಕೆ ಕೊಟ್ಟ ಗುರುವೆ, ನಮೋ ನಮೋ.

ನರಜನ್ಮವ ತೊಡೆದು ಹರಜನ್ಮವ ಮಾಡಿದ ಗುರುವೆ ನಮೋ. Read More »

ನಚ್ಚುಗೆ ಮನ ನಿಮ್ಮಲ್ಲಿ, ಮಚ್ಚುಗೆ ಮನ ನಿಮ್ಮಲ್ಲಿ,

ನಚ್ಚುಗೆ ಮನ ನಿಮ್ಮಲ್ಲಿ, ಮಚ್ಚುಗೆ ಮನ ನಿಮ್ಮಲ್ಲಿ, ಸಲುಗುಗೆ ಮನ ನಿಮ್ಮಲ್ಲಿ, ಸೋಲುಗೆ ಮನ ನಿಮ್ಮಲ್ಲಿ, ಅಳಲುಗೆ ಮನ ನಿಮ್ಮಲ್ಲಿ, ಬಳಲುಗೆ ಮನ ನಿಮ್ಮಲ್ಲಿ, ಕರಗುವೆ ಮನ ನಿಮ್ಮಲ್ಲಿ, ಕೊರಗುಗೆ ಮನ ನಿಮ್ಮಲ್ಲಿ. ಎನ್ನ ಪಂಚೇಂದ್ರಿಯಂಗಳು ಕಬ್ಬುನ ಉಂಡ ನೀರಿನಂತೆ ನಿಮ್ಮಲ್ಲಿ ಬೆರಸುಗೆ ಚೆನ್ನಮಲ್ಲಿಕಾರ್ಜುನಯ್ಯಾ.

ನಚ್ಚುಗೆ ಮನ ನಿಮ್ಮಲ್ಲಿ, ಮಚ್ಚುಗೆ ಮನ ನಿಮ್ಮಲ್ಲಿ, Read More »

ನಂದಿ ದೇವಂಗೆ, ಖಳ ಸಿರಿಯಾಳಂಗೆ,

ನಂದಿ ದೇವಂಗೆ, ಖಳ ಸಿರಿಯಾಳಂಗೆ, ಲಿಂಗ ದಾಸಿಮಯ್ಯಂಗೆ, ಜಾಗರ ಬಸವಣ್ಣಂಗೆ, ಆದರಿಕೆಯ ಬಿಟ್ಟು ಜೂಜನಾಡರೆ ನಮ್ಮವರಂದು ? ಒಬ್ಬಂಗೆ ಮಗನ ರಪಣ, ಒಬ್ಬಂಗೆ ಸೀರೆಯ ರಪಣ, ಒಬ್ಬಂಗೆ ತನು ಮನ ಧನದ ರಪಣ. ಮೂವರೂ ಮೂದಲಿಸಿ ಮುಕ್ಕಣ್ಣನ ಗೆಲಿದರು ಎನ್ನ ದೇವ ಚೆನ್ನಮಲ್ಲಿಕಾರ್ಜುನಾ.

ನಂದಿ ದೇವಂಗೆ, ಖಳ ಸಿರಿಯಾಳಂಗೆ, Read More »

ಪತಿತನ್ನ ಪಾವನ ಮಾಡುವ

ಪತಿತನ್ನ ಪಾವನ ಮಾಡುವ ರಂಗಾ | ಗತಿಯಿಲ್ಲದವರಿಗೆ ಗತಿಯೇ ನೀನೇ ಗತಿ ನಿಂದಿರಲು ನೆರಳಿಲ್ಲ ನಿಲ್ಲಲು ನೆಲೆಯಿಲ್ಲ | ತಂದಿ-ತಾಯಿಯೆಂಬೋರು ಮೊದಲೆ ಇಲ್ಲ|| ಒಂದು ಸಂಗತಿ ಇಲ್ಲ ಪಡದಾನಂದನರಿಲ್ಲ | ಬಂದು-ಬಳಗದವರು ಆರಿಲ್ಲ ಹರಿಯೇ ||1|| ಕುಡಿಯಲು ನೀರಿಲ್ಲ ಕಾಲಿಡಲು ಇಂಬಿಲ್ಲಾ | ಪಿಡಿವೆನೆಂದರೆ ಮೇಲೆ ಕೊಡೆಯಿಲ್ಲ || ಒಡನೆ ಬರುವರಾರಿಲ್ಲ ಸಂಗಡದಿ | ಆಡಿವೆನೆಂದರೆ ವಳ್ಳಿಗಾಯಿತೊ ಹರಿಯೆ ||2|| ಧೈರ್ಯ ಕೊಡುವವರು ಇಲ್ಲ ದಾತರೊಬ್ಬರಿಲ್ಲ | ಕಾರ್ಯವೆಂದರೆ ಕೇಳಿ ಅರಿವರಿಲ್ಲಾ || ವೀರ್ಯವು ಎನಗಿಲ್ಲ ವಸಿಷ್ಠನು

ಪತಿತನ್ನ ಪಾವನ ಮಾಡುವ Read More »

ಪಂಪಾಪುರಾಧಿಪ ಶ್ರೀ ವಿರೂಪಾಕ್ಷ

ಪಂಪಾಪುರಾಧಿಪ ಶ್ರೀ ವಿರೂಪಾಕ್ಷ ನೀ ಪಾಲಿಪುದೆಮ್ಮನು ಕಾಪಾಡುವುದು ಶ್ವೇತ ದ್ವೀಪಾವಾಸನ ತೋರಿ ಸರ್ಪಭೂಷಣ ದೇವ ತ್ರಿಪುರಸಂಹಾರ ಭಾಪುರೆ ಸುರಕುಲ ದೀಪ ಸದಾಶಿವ ಶ್ರೀಪತಿ ಪಾದ ಸಮೀಪದ ಸೇವಕ ಹರಿಪಾದೋದಕ ಶಿರದಲಿ ಧರಿಸಿದ ಹರಿಕಥಾಮೃತ ಮಳೆಗರೆವೆ ನೀ ಕರುಣಿ ಸಂಕರುಷಣನ ಚರಣಾಬ್ಜ ಧೂಳಿ ಶ- ರೀರ ಲೇಪನದಿಂದ ವರ ತೇಜಯುತನೆ ಮುರಹರಗೆರಗದ ನರನಿಗೆ ನರಕವು ಸ್ಥಿರವೆಂದು ಸುರವರ ಭೇರಿ ಭೋರಿಡುತಿರೆ ನಿರುತ ಅವನ ಪದ ಮೆರೆಯದೆ ಮನಗೊಂಡೆ ಶರಣು ಅಮರನುತ ಗುರು ಶಿರೋಮಣಿಯೆ||1|| ದೇಶಕ್ಕೆ ದಕ್ಷಿಣ ಕಾಳಿಯೆನಿಸುವ ವಿ-

ಪಂಪಾಪುರಾಧಿಪ ಶ್ರೀ ವಿರೂಪಾಕ್ಷ Read More »

ನೋಡು ನೋಡು ಗರುಡಗಮನನ

ನೋಡು ನೋಡು ಗರುಡಗಮನನ ಮಾಡು ದಯವನು ವೇಗದಿ ಪಾಡುವೆ ಆನಂದದಲಿ ನಿನ್ನನು ಕೊಂಡಾಡುವೆನು ನಿನ್ನ ಮೂರ್ತಿಯಾ ಮಂಗಳಾಂಗನೆ ಮನ್ಮಥನ ಪಿತ ಸಂಗೀತ ಸುರಲೋಲನೆ ಕಂಗಳಬ್ಬರ ತೀರುವಂತೆ ಚರಣಂಗಳನೆ ತೋರೋ ವಿನಯದಿ||1|| ಪರಮ ಪುರುಷನೆ ಪುಣ್ಯ ಶ್ಲೋಕನೆ ದುರುಳ ದೈತ್ಯರ ದಲ್ಲಣ ಮರಿಯಲೀಸದೆ ನಿನ್ನ ಚರಣ ಸ್ಮರಣೆ ಒದಗಿಸೊ ವದನಕೆ ||2|| ವಂದನೆಯು ಗೋವಿಂದ ಗೋಪಾಲಾ ಮಂದರಧರ ಮಾಧವಾ ಇಂದು ವಿಜಯವಿಠ್ಠಲ ನಿನ್ನ ಸಂದರ್ಶನವ ಕೋರುತಾ ||3||

ನೋಡು ನೋಡು ಗರುಡಗಮನನ Read More »

ನೋಡಿದ್ಯ ರಂಗೈಯನ ನೋಡಿದ್ಯ

ನೋಡಿದ್ಯ ರಂಗೈಯನ ನೋಡಿದ್ಯ ನೋಡಿದ್ಯ ಮನವೆ ನೀನಿಂದು ಕೊಂ- ಡಾಡಿದ್ಯ ಎದುರಲ್ಲಿ ನಿಂದು ಆಹ ಮಾ- ತಾಡಿದ್ಯ ವರಗಳ ಬೇಡಿದ್ಯ ನಿನ್ನೊಳು ಕೂಡಿ ನಲಿನಲಿದಾಡುವ ಶ್ರೀ ರೂಪ ಚರಣತಳದಲ್ಲಿ ಕೆಂಪು- ಶುದ್ದ ಅರವಿಂದ ಧ್ವಜ ವಜ್ರಸೊಂಪು- ಸ್ತುತಿ ಪÀರಿಗೆ ಸುರಂಘ್ರಿಪ ತಂಪು- ನೋಡ- ಲರಸಿ ಕಾಣದೊ ವೇದಗುಂಪು, ಆಹ ಹರಡಿ ಹಿಂಬಳೆ ಸಾಲ್ಬೆರಳೈದರ ಮೇಲೆ ಸುರುಚಿರ ರೇಖೆ ಚಂದ್ರಮನ ಸೋಲಿಪ ನಖ||1|| ಸರಸ ನೂಪುರ ಗೆಜ್ಜೆ ಪೆಂಡ್ಯ – ಹೊನ್ನ ಸರಪಳಿ ಪಾಡಗ ಕಂಡ್ಯ – ಹಿಂದೆ

ನೋಡಿದ್ಯ ರಂಗೈಯನ ನೋಡಿದ್ಯ Read More »

ನೋಡಿದೆನೊ ಸಿರಿ ಪಾಂಡುರಂಗನಾ

ನೋಡಿದೆನೊ ಸಿರಿ ಪಾಂಡುರಂಗನಾ ಪಾಡಿದೆನೊ ಜಗದಂತರಂಗನ ಕೂಡಿದೆನೊ ಮನ ಖಗ ತುರಂಗನ ಬೇಡಿದೆನೊ ಗುಣಾಂತರಂಗನಾ ಕಪಿಲ ವಿಭುಹರಿ ಸಾರ್ವಭೌಮ ಸು ತಪನಂದನ ಕೃಷ್ಣ ಕೃಷ್ಣ ಗೀರ್ವಾಣ ತಪಯಜ್ಞ ಜಿತದತ್ತ ಧನ್ವಂತ್ರಿ ತಪನಿವಾಸ ವಿನುತ ವೃಷಭ ಹಯ ಲಪನ ವೈಕುಂಠ ಹಂಸ ತಪನಾ ಕುಪಿತ ಜಿತ ಮುನಿ ನರನಾರಯಣ ಅಪರಿಮಿತ ರೂಪ ಧರಿಸಿದಾನಂದ ವಿಪುಳದೊಳಗೀ ಗುಪಿತ ಮಹಿಮನ ||1|| ಮುನಿವನ ಜಿತ ಚಿತ್ತ ಶುದ್ಧದಿ ಜನನಿ ಜನಕನ ಚರಣ ಸೇವೆಯ ಅನುದಿನದಿ ಘನವಾಗಿ ಮಾಡುತ ಗುಣಗಳಿಂದಲಿಯಿರಲು ಇತ್ತಲು ಮುನಿ

ನೋಡಿದೆನೊ ಸಿರಿ ಪಾಂಡುರಂಗನಾ Read More »

ನೋಡಿದೆನೊ ಮನದಣಿಯ ನಳಿನಭವಾದ್ಯರ

ನೋಡಿದೆನೊ ಮನದಣಿಯ ನಳಿನಭವಾದ್ಯರ ಕ್ರೀಡಾಮೃಗವನೆ ಮಾಡಿ ಆಡಿಸುವ ವಿಚಿತ್ರ ಮಹಿಮ ಗೋಪಾಲಗ ಈಡುಗಾಣೆನೊ ಎಲ್ಲೆಲ್ಲಿ ಆವಲ್ಲಿ ಕಾಲಲಂದಿಗೆ ಗೆಜ್ಜೆ ಸರಪಳಿ ಉಡುದಾರ ಮೇಲು ಕಿರಿಗೆಜ್ಜೆ ಘಂಟೆ ತೋಳು ರಕ್ಷಾಮಣಿ ನಾಗ ಮುರಿಗೆ ಬಂದಿ ಸಾಲು ತಾಯಿತ ಕಟ್ಟಿರೆ ನೀಲ ಮಾಣಿಕ ವಜ್ರ ಉಂಗುರದ ಬೆರಳು ಸು ಫಾಲದಲಿಯಿಟ್ಟ ತಿಲಕಾ ಲಾಲಿಸುವ ಬಾಲಕರೂಪದಿಂದಲಿ ಪ್ರಾತಃ ಕಾಲದಿ ಮೆರೆವ ಕೃಷ್ಣನ ಇಂದು ||1|| ಮುಂಗೈ ಮುರಾರಿ ಪವಳದ ಬುಲಿಗೆಜ್ಜೆ ಬಂಗಾರ ಕೊರಳಲ್ಲಿ ಹಾ ರಂಗಳನು ಶೋಭಿಸುವ ಮಾಗಾಯಿ ಕರ್ಣದಲಿ ಮಂಗಳ

ನೋಡಿದೆನೊ ಮನದಣಿಯ ನಳಿನಭವಾದ್ಯರ Read More »

ನೋಡಿದೆನು ಯಾದವ ಕೃಷ್ಣನ

ನೋಡಿದೆನು ಯಾದವ ಕೃಷ್ಣನ | ಪಾಡಿದೆನೊ ಮನದಣಿಯ ವರಗಳ | ಬೇಡಿದಾಕ್ಷಣ ಕೊಡುವ ಜಗತ್ರಯ | ವಾಡಿಸುವ ವಾಗೀಶ ಜನಕನ ವೇದ ಭೂಧರ ಮೇದಿನಿ ಪ್ರ | ಹ್ಲಾದ ಸುರಪನ ಕಾದ ವಂಶವ | ಛೇದ ಸಾಗರ | ಹಾದಿ ಬಿಗಿದ ಗೋಯಿದ ಬತ್ತಲೆ | ಯಾದ ತುರಗವ | ಬೀದಿ ವದಿಸಿದನೀತ ಹಯಮೊಗ | ಬಾದರಾಯಣ ದತ್ತ ವೈಕುಂಠ | ಬೋಧ ಮೂರುತಿ ಕಪಿಲ ನಾನಾ ವಿ | ನೋದ ರೂಪದ ಆದಿ ದೈವವ ||1||

ನೋಡಿದೆನು ಯಾದವ ಕೃಷ್ಣನ Read More »

ನೋಡಿದೆನು ತಿರುವೆಂಗಳೇಶನಾ

ನೋಡಿದೆನು ತಿರುವೆಂಗಳೇಶನಾ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ನಾಡೊಳಗೆ ಈಡಿಲ್ಲದಪ್ಪನಾ ಘನಸುಂದರ e್ಞÁನ ತೀರ್ಥ ಆನಂದ ಕನಕ ಮುಕ್ತ ವೈಕುಂಠ ಧನ ವರಹಾ ವೈರಾಗ್ಯನಿಲಿ ರ ತುನ ಚಂದ್ರಮ ವರಧÀರ್ಮ ನಾರಾ ಯಣ ಭಕುತಿ ಶ್ರೀಕಾಂತಿ ಬ್ರಹ್ಮಾ ರುಣ ವೃಷಭ ಶ್ರುತಿ ಗರುಡ ಸರ್ಪ ಜನತ ಪೂಜಿಪ ಸುರ ಸುಧಾನಂತ ಇನಿತು ಪೆಸರುಳ್ಳ ಪುಷ್ಕರಾದ್ರಿಯಾ||1|| ಖಗನ ಪೆಗಲಲಿ ನಗವ ತಂದ ಜಗದೊಳು ಸುವರ್ಣಮುಖರಿ ನಿ ಮ್ನಗ ತೀರದಲಿ ಸ್ಥಾಪಿಸಿದ ಸುತ್ತಲು ಝಗಝಗಿಸುದೆ ನೋಳ್ಪ ಜನರಿಗೆ

ನೋಡಿದೆನು ತಿರುವೆಂಗಳೇಶನಾ Read More »

ನೋಡಿದೆನು ಉಡುಪೀ ನಿವಾಸನ

ನೋಡಿದೆನು ಉಡುಪೀ ನಿವಾಸನ ನೋಡಿದೆನು ಯಾದವೇಶನ ನೋಡಿದೆನು ಮಾನಿಸ ವೇಷನ ನೋಡಿದೆನೊ ಲಕುಮೇಶನ ಪರಶುರಾಮನು ಭೂಮಿ ಸುರರಿಗೆ ಸರವು ಧಾರುಣಿ ಧಾರಿಯಾ ಎರದು ಕೇಸರಗಿರಿಯ ಪಡುಮೂಲ ಶರನಿಧಿಯನು ಶರದಲೀ ಭರದಿ ಬಿಡಿಸಿದ ಶೂರ್ಪಕಾರದ ತೆರದಿ ನೆಲ ನೀ ಧರುಣಿಗೆ ಪರಮ ಸಾಹಸ ರಾಮಭೋಜನು ಅರಸನಾದುದು ನೋಡಿದೆ ||1|| ಯಾಗಗೋಸುಗ ರಾಮ ಭೋಜನು ನೇಗಿಲಿಯ ಕೊನೆಯಿಂದಲಿ ಆಗ ಭೂಮಿಯ ಶೋಧಿಸಲು ಬಂದು ನಾಗ ಬಂದಿತು ಮೃತವಾಗಿ ತೂಗಿ ಶಿರವನು ಭೃಗು ಕುಲೇಶಗೆ ಬಾಗಿ ನೆನೆಯಲು ಸಂಕೇತಾ ಸಾಗಿ ಭೂಮಿಪಾಲ

ನೋಡಿದೆನು ಉಡುಪೀ ನಿವಾಸನ Read More »

ನೋಡಿದೆ ನಾ ನೋಡಿದೆ

ನೋಡಿದೆ ನಾ ನೋಡಿದೆ ಮೂಡಲಗಿರಿಯ ವಾಸನ ಯಾತ್ರಿಯ ಮಾಡಿದೆ ನಾ ಮಾಡಿದೆ ಬೆಟ್ಟವ ಕಂಡೆನು ಸೋಪಾನಂಗಳು ನಿಟ್ಟುಸುರಿಕ್ಕದೆ ಏರಿದೆ ಕಟ್ಟ ಕಡಿಯಣ ಗೋಪುರ ಶಿಖರ ದಿಟ್ಟಿಸಿ ಕಣ್ಣಿಲಿ ನೋಡಿದೆ ||1|| ಈ ಸಮಸ್ತರ ಗುರುವಾದ ಭಾರತಿ ಈಶನ ಪಾದಕ್ಕೆ ಎರಗಿದೆ ಕ್ಲೇಶನ ಕಳೆದು ಎದುರಾಗಿ ಪೊಳೆವ ಶ್ರೀಶನ ಮಹದ್ವಾರ ನೋಡಿದೆ ||2|| ಬಲವಾಗಿ ಬಂದು ಸ್ವಾಮಿ ಪುಷ್ಕರಣಿ ಒಳಗೆ ವರಹನ ನೋಡಿದೆ ಜಲದಲಿ ಮಿಂದು ವೇಗದಲಿ ತಿರುವೆಂ ಗಳ ದೇವನ ನೋಡ ಸಾಗಿದೆ ||3|| ಗುಡಿಯ ಪೊಕ್ಕೆನು

ನೋಡಿದೆ ನಾ ನೋಡಿದೆ Read More »

ನೋಡಿದೆ ಗುರುಗಳ ನೋಡಿದೆ

ನೋಡಿದೆ ಗುರುಗಳ ನೋಡಿದೆ ನೋಡಿದೆನು ಗುರುರಾಘವೇಂದ್ರರ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ಈಡು ಇಲ್ಲದೆ ಕೊಡುವ ಗುರುಗಳ ಮೊದಲು ಗಾಂಗೇಯ ಶಯ್ಯಜನು ಈ ನದಿಯ ತೀರದಲ್ಲಿ ಯಾಗವ ಮುದದಿ ರಚಿಸಿ ಪೂರೈಸಿ ಪೋಗಿರ ಲದನು ತಮ್ಮೊಳು ತಿಳಿದು ತವಕದಿ ಹೃದಯ ನಿರ್ಮಲರಾಗಿ ರಾಗದಿ ಬುಧಜನರ ಸಮ್ಮೆಳದಲಿ ಸಿರಿ ವದನನಂಘ್ರಿಯ ತಿಳಿದು ನೆನೆವರ ಉದಿತ ಭಾಸ್ಕರನಂತೆ ಪೊಳೆವರ ||1|| ಆಲವಬೋಧ ಮಿಕ್ಕಾದ ಮಹಮುನಿ ಗಳು ಸಅಂಶರು ಒಂದು ರೂಪದಿ ನೆಲೆಯಾಗಿ ನಿತ್ಯದಲಿ ಇಪ್ಪರು ಒಲಿಸಿಕೊಳುತಲಿ ಹರಿಯ

ನೋಡಿದೆ ಗುರುಗಳ ನೋಡಿದೆ Read More »

ನೋಡಿದೆ ಗಿರಿಯ ತಿರ್ಮಲನ ನಿತ್ಯ

ನೋಡಿದೆ ಗಿರಿಯ ತಿರ್ಮಲನ ನಿತ್ಯ ಮೂಡಲ ದಿಕ್ಕಿನಲಿಪ್ಪ ನಿರ್ಮಲನಾ ನೀರೇರ ಕೂಡಾಡಿದವನಾ ದೇವ ನೀರೊಳಗೆ ಸದನವ ಬಿಗಿದವನಾ ನೀರದ ಶ್ಯಾಮ ವರ್ಣನನಾ ಭವ ನೀರಜ ಭವವಂದ್ಯಾ ದಯಾಸಾಗರನಾ ||1|| ನೀರು ಪಾದದಲಿ ಪೆತ್ತವನಾ ಮಹಾ ನೀರು ದಾಟಿ ಮಕ್ಕಳ ತೋರಿದವನಾ ನೀರಧಿ ಬಿಗಿದ ಪ್ರಬಲನಾ ಅಂದು ನೀರುಪತಿಯ ಭಂಗವ ಮಾಡಿದವನಾ ||2|| ನೀರು ಕಟದ ನಿಃಸಂಗನಾ ಸರ್ವ ನೀರು ಸೇದುವನಾಗಿ ಜಗವ ಸುತ್ತುವನ ನೀರೊಳಗಾಡುವ ನಿಜನಾ ಓರ್ವ ನೀರೇಳ ನಾರಿಯ ಮಾಡಿದ ಗುಣನಾ ||3|| ನೀರಜೋದರ ನಿರ್ಮೋಹನನಾ

ನೋಡಿದೆ ಗಿರಿಯ ತಿರ್ಮಲನ ನಿತ್ಯ Read More »

ನೋಡಿ ನೋಡಿನೊ ರಂಗಾ

ನೋಡಿ ನೋಡಿನೊ ರಂಗಾ ನಿನ್ನ ನೋಡಿನೊ ಆಡಲೇನಯ್ಯಾ ಪರಸತಿಯರ ಮೋಹಕ್ಕೆ ಸಿಲುಕಿ ಹೆಣ್ಣ ನಾ ಕಾಣುತ ಮನಸು ದ್ರವಿಸುವದು ದೃಢವಾಗಿ ಮುನ್ನೆ ದಾರಿದ್ರತನ ಯೆಣಿಸಿಕೊಳದೆ ಕಣ್ಣು ಹೋಗುವ ಸುದ್ದಿ ತಿಳಿಯದಲೆ ನೀಕ್ಷಿಸಿ ಬನ್ನ ಬಡುವೆನೊ ರಂಗ ನಿನ್ನ ಮೂರ್ತಿಯ ನಿತ್ಯ ||1|| ಜಲ್ಪಸಿಲ್ಪಿಗಳಿಂದ ಮಂತ್ರ ಮಾಡುವೆ ಅವಳಾ ಬಲ್ಪು ವಯ್ಯಾರ ಗುಣಗುಣಿಸಿಕೊಳುತಾ ತಲ್ಪಮಿಕ್ಕಾದ ಭೋಗದ್ರವ್ಯ ಬಯಸಿ ವಿ ಕಲ್ಪ ಸಂಕಲ್ಪದಲ್ಲಿ ಬಳುಲುವೆನುಬ್ಬಸವಳಿದು ||2|| ವ್ಯಾಖ್ಯಾತ ಪಂಡಿತದ್ವ್ಯಾಪಕ ಪಾಠಕ ಮಹಾ ಪ್ರಖ್ಯಾತ ವೇದವೇದಾಂತ ಪ್ರೌಢ ಸೌಖ್ಯ ಪುಸ್ತಕ ಪಾಣಿ

ನೋಡಿ ನೋಡಿನೊ ರಂಗಾ Read More »

ನೋಡಿ ನೋಡಿ ಸತ್ಯಪ್ರಿಯರ

ನೋಡಿ ನೋಡಿ ಸತ್ಯಪ್ರಿಯರ ನಾ ನಿಂದು ನಿಂದು ಪಾಡಿ ಪಾಡಿ ಯೋಗಿವರ್ಯರ ನಾ ಪಾಡಪಂಥದಲಿ ಬಂದ ಮೂಢ ಮಿಥ್ಯಾವಾದಿಗಳ ಓಡಿಸಿ ತನ್ನನು ಕೊಂ ಡಾಡಿದವರ ಪೊರೆವ ಯತಿಯ ನಾಗಸರ ನಾಗಬಂಧ ಕೊಂಬು ಕೊಳಲು ರಾಗದಿಂದ ಪಾಡುವ ಸನಾಯಿಸುತಿಗಳು ಬೇಗಿ ಕೂಗುವ ಹೆಗ್ಗಾಳೆ ದುಂದುಭಿ ಎಸಿಯೆ ಚತು ಸ್ಯಾಗರ ಪರಿಯಂತ ಮೆರೆದ ಯೋಗಿಗಳಾಗ್ರಣ್ಯನ||1|| ವಾದಿಗಳೆದೆಯು ಬಿರಿಯೆ ಧವಳ ಶಂಖದಾ ನಾದ ಒಪ್ಪ್ಪಿಸುತ್ತಿ ಮೆರೆವ ಬಿರಿದು ಸಮುದಾಯ ವೇದ ಓದುವ ಶಿಷ್ಯರು ಮೇದಿನಿ ಸುರರು ಬಲದಾರಿಯಲಿ ಬರೆ ಆಶೀ ರ್ವಾದವನ್ನು

ನೋಡಿ ನೋಡಿ ಸತ್ಯಪ್ರಿಯರ Read More »

ನೋಡಿ ನಾ ಧನ್ಯನಾದೆನೊ ತೋತಾದ್ರೀಶನ

ನೋಡಿ ನಾ ಧನ್ಯನಾದೆನೊ ತೋತಾದ್ರೀಶನ ನೋಡಿ ಧನ್ಯನಾದೆ ನಾಡೊಳು ತನಗೆಲ್ಲಿ ಈಡಿಲ್ಲೆನಿಸುವನ ನೋಡಿ ಧನ್ಯನಾದೆನೊ ಆರೊ ಮಹಾರೂಪ ಬಂದು ಏಕಾಂತದಲ್ಲಿ ಆರಾಧಿಸಿದಾತನಂದು ಭಕುತಿ ಬಿಡದೆ ವಾರವಾರಕ್ಕೆ ಗತಿಯೆಂದು ಈ ರೀತಿಯಲ್ಲಿ ಇರೆ ತೋರಿದ ಕರುಣ ನಿನ್ನಾ ||1|| ಭಕುತನ್ನ ತಪಸಿಗೊಲಿದು ವೇಗದಿಂದಲಿ ಲಕುಮಿ ರಮಣ ಸುಳಿದು ಬೇಡಿದಂಥಾ ಧಿಕವಿತ್ತು ರೋಷವಳಿದು ಸುಖದ ಭಾರತ ಪೇಳೊ ದಕ್ಕೆ ಮುನಿ ಮಾಡಿದ ದಾನಾ ||2|| ಧರಿಗೆ ದಕ್ಷಿಣ ದಿಕ್ಕಿಲಿ ಮಾಹೇಂದ್ರಿ ಮಹಿ ಧರನ ಸಮೀಪದಲ್ಲಿ ಪ್ರತಿದಿನ ಮೆರೆವ ವೈಭೋಗದಿಂದಲಿ ಕರುಣಿ

ನೋಡಿ ನಾ ಧನ್ಯನಾದೆನೊ ತೋತಾದ್ರೀಶನ Read More »

ನೋಡ ಬಂದೆನೋ ನಿತ್ಯ ಪಾಡಿದವರ ಪ್ರಾಣ

ನೋಡ ಬಂದೆನೋ ನಿತ್ಯ ಪಾಡಿದವರ ಪ್ರಾಣ ಮಾಡು ಕಾರುಣ್ಯವ ಮಾತಾಡು ಮನ್ನಿಸಿ ರೂಢಿಯೊಳಗೆ ನಿನಗೀಡುಗಾಣೆನೊ ಕರ ಪಿಡಿವ ತಾರಾಕ್ಷರೂಢ ವೆಂಕಟರಾಯ ನಾನಾ ಪೂರ್ವ ಉತ್ತರ ಯೋನಿ ಮೊಗದಿಂದ ವೃದ್ಧ ಹಾನಿ ದೇಹವ ತೆತ್ತು. ನಾನು ನಿನ್ನದು ಎಂದು ಹೀನ ಮತಿಯಿಂದಪಮಾನಕೊಳಗಾಗಿ ಏನು ಕಾಣದೆ ಪಾಪ ಕಾನನದೊಳು ಬಿದ್ದು ಙÁ್ಞನರಹಿತನಾದೆ ಕಾಣೆ ಲಾಭಕೆ ಮದ್ದು- ನೀಯಳ ಕಳಕೊಂಡ ಮಾನವನಂತೆ ನಿತ್ರಾಣಗೆಟ್ಟೆನೊ ಈ ಕ್ಷೋಣಿಯೊಳಗೆ ಪುಟ್ಟಿದಾಗ ವಿನೋದಿಯೆ ನೀನೆ ಗತಿ ಎಂದು ||1|| ನಿಚ್ಚಳ ಮನ ದೊರಿಯೆ ನಿತ್ಯ ನಿನ್ನ

ನೋಡ ಬಂದೆನೋ ನಿತ್ಯ ಪಾಡಿದವರ ಪ್ರಾಣ Read More »

ನೊಂದು ಸಂಸಾರದೊಳಗೊಂದಿಸುವೆನೋ

ನೊಂದು ಸಂಸಾರದೊಳಗೊಂದಿಸುವೆನೋ ಇಂದು ಬಿಂದು ಮಾಧವ ಯಾದವ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ||1|| ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ

ನೊಂದು ಸಂಸಾರದೊಳಗೊಂದಿಸುವೆನೋ Read More »

ನೆನೆಸು ಮನವೆ ನಲಿವಿನಿಂದಲಿ

ನೆನೆಸು ಮನವೆ ನಲಿವಿನಿಂದಲಿ ನೆನೆಸು ಮನವೆ ನಲಿವಿನಿಂದಲಿ ಮನಸಿಜನ್ನ ಪೆತ್ತ ಹರಿಯ ವನಜ ಚರಣವನ್ನು ಹೃ ದ್ವನಜದೊಳಗೆ ನಿಲಿಸಿ ನಗುತ ಪ್ರಳಯದಲ್ಲಿ ವರ ರಮಾ ಕ ಳವ ತಾಳಿ ಲೀಲೆಯಲ್ಲಿ ಪೊಳವ ಕಂಗಳಿಂದ ಕಿಡಿ ಗಳನು ತೋರಿ ಕುಣಿವುತ ಜಲಜ ಪೀಠ ಸುರಪ ಪುಲಿದೊ ಗಲ ವಸನ ಉಳಿದ ಸುರರ ಅಳಿದು ಏಕಮೇವನಾಗಿ ನಲಿವ ನಾರಸಿಂಹನೆಂದು ||1|| ಜರಾಮರಣರಹಿತ ಸುಜ ನರನ ಕಾಯ್ದು ಕರುಣದಲ್ಲಿ ಜರಿದು ಅದ್ರಿಯಲ್ಲಿ ದನುಜರನ್ನು ಶೀಳಿ ವೇಗ ನಿ ರ್ಜರರ ಪೊರೆದು ನಿಗಮತತಿಗೆ

ನೆನೆಸು ಮನವೆ ನಲಿವಿನಿಂದಲಿ Read More »

ನೆನೆಬೇಕು ನೆನೆಬೇಕು ಶ್ರೀಹರಿಯ

ನೆನೆಬೇಕು ನೆನೆಬೇಕು ಶ್ರೀಹರಿಯ ನೆನೆಬೇಕು ಹರುಷದಿಂದಲಿ ಶ್ರೀ ಹರಿಪಾದಂಗಳ ನಿರುತದಿಂದ ಭಜಿಸಲು ದುರಿತ ನಿವಾರಣ||1|| ಅಖಿಳಾಂಡಗಳನ್ನು ಉದರದಿ ಧರಿಸಿದ ನಿಖಿಳ ಲೋಕದಿ ವ್ಯಾಪ್ತ ಶ್ರೀಹರಿಯೆನುತಾ ||2|| ಸಂತತ ಚಿಂತೆಯ ಸಂತಾನ ಬಿಡಿಸುವ ಚಿಂತನೆ ಶ್ರೀ ವಿಜಯವಿಠ್ಠಲನಡಿಗಳ ||3||

ನೆನೆಬೇಕು ನೆನೆಬೇಕು ಶ್ರೀಹರಿಯ Read More »

ನೆನೆದು ನೆನೆಸಿ ನಿಮ್ಮ

ನೆನೆದು ನೆನೆಸಿ ನಿಮ್ಮ ತನುಮನದಲ್ಲಿ ಯೋಚನೆ ಮಾಡೀ ಎಣಿಸಿ ಗುಣಿಸಿ ಮನಸಿಜನ್ನ ಜನಕನ ಲೀಲೆ ನರನಾರಾಯಣನೀತ ಕೃಷ್ಣ ಹರಿ ಹೃದ್ಭಾನು ಕಪಿಲನೀತ ಹರಿನಾರಾಯಣೇನೀತ ಯೋಗೀ ಶ್ವರ ತಾಪಸ ವೈಕುಂಠನೀತ ಹರನಸಖ ಸ್ವಧಾಮನೀತ ತುರಗವದನನೀತ ದಯಾ ಕರುಣಿ ಸಾರ್ವಭೌಮನನೀತಾ ||1|| ಅಜಿತಯಜ್ಞನಾಮನೀತ ಅಜಗೆ ಪೇಳಿದ ಹಂಸನೀತ ಸುಜನಪಾಲ ವ್ಯಾಸ ವೀ ರಜ ಮಹಿದಾಸ ದತ್ತನೀತ ನಿಜ ಮಹಿಮ ಧನ್ವಂತ್ರಿ ಈತ ತ್ರಿಜಗವಳೆದುಪೇಂದ್ರನೀತ ಭಜಕರೊಡಿಯ ವಿಷಕ್ಸೇನ ಭುಜಗಶಾಯಿವಿಭುವೆ ಈತ ||2|| ಚಲುವ ಧರ್ಮಶೇತು ಈತ ಬಲುವುಳ್ಳ ಶಿಂಶುಮಾರನೀತ ಪೊಳೆವ ಮತ್ಸ್ಯ

ನೆನೆದು ನೆನೆಸಿ ನಿಮ್ಮ Read More »

ನೆನೆದು ನಿಷ್ಕಳಂಕರಾಗಿರೋ

ನೆನೆದು ನಿಷ್ಕಳಂಕರಾಗಿರೋ ಪಂಕಜಾಕ್ಷನ ಕೂಡ ದ್ವೇಷ ಬಳಿಸುವ ಮಾಯಿ ಮಲವಿಸರ್ಜನೆಯಾಗುವಾಗ ಮೂತ್ರವನು ಬಿಡುವಾಗ ಹೊಲಗೇರಿಯೊಳಗೆ ಸುಳಿದಾಡುವಾಗ ಹೊಲಿಯಾದವನು ತನ್ನ ಎದುರಿಗೆ ಬರುವಾಗ ಕಲಿಶಿಷ್ಯನಾದ ಮಣಿವಂತನ ನೆನೆಸಿರೊ||1|| ಶ್ರದ್ಧವನು ಬಿಡುವಾಗ ಸ್ವಪ್ನದೊಳಗೆ ಇಂದ್ರಿಯ ಬಿದ್ದು ಹೋಗುವಾಗ ಉಗುಳುವಾಗ ಬದ್ಧವಾಗಿ ಗುಹ್ಯ ತೊಳೆಯುವಾಗ ಅಪ್ರ ಬದ್ಧನಾದ ಏಕಲವ್ಯನ ನೆನೆಯಿರೋ ||2|| ಶುದ್ಧ ಅಶುದ್ಧವನು ತುಳಿದು ನೆಲಕ್ಕೆ ವರಸುವಾಗ ವಮನವಾಗುವಾಗ ಮರಿಯದಲೆ ಅಮಲ ಸುಖ ಮುನಿ ಗುರು ವಿಜಯವಿಠ್ಠಲ ವೈದು ತಮಕೆ ಹಾಕುವ ಶುದ್ಧ ಕುಮತಿಯನು ನೆನೆಯಿರೋ ||3||

ನೆನೆದು ನಿಷ್ಕಳಂಕರಾಗಿರೋ Read More »

ನೆಚ್ಚಬೇಡಿ ಪತಿತನಾರಿಯ

ನೆಚ್ಚಬೇಡಿ ಪತಿತನಾರಿಯ | ಕಚ್ಚುವ ಹಾವಿನ ಸಂಗವೆನ್ನಿ || ಮೆಚ್ಚುಗೊಳಿಪಳು ಗುಣಿಸಿ ನೋಡಿ ನಿಚ್ಚದಲಿ ಚಿತ್ತ ಚಂಚಲಳಾಗಿ ಯುವ ತನಗೆ ಬರುವ ಪರಿಯಂತ | ಯಾವದನಿತು ಮೊಗವನೆತ್ತದಲೆ || ಎವೆ ತೆಗೆದು ದಿಕ್ಕುಗಳು ನೋಡದೆ | ಅವನಿಗೆ ಬಾಗಿ ನಡೆಯುತ || ತವರು ಮನೆಯವರನು ಹಳಿದು | ನವÀನವ ಪ್ರಾವರ್ತನವನು ತೋರುತ || ಅವಗುಣಂಗಳಿಲ್ಲ ದೋಷಾದಲಿ | ಲವಕಾಲವನು ಕಳೆವ ನಾರಿಯ ||1|| ಪ್ರಾಯಾವಸ್ಥೆ ಬಂದು ಪ್ರಾಪ್ತವಾಗಲು | ಆಯುತಾಕ್ಷಿಗಳ ತಿರುಹಿ ಮೆಲ್ಲನೆ || ಬಾಯಲ್ಲಿ ಒಂದೊಂದು

ನೆಚ್ಚಬೇಡಿ ಪತಿತನಾರಿಯ Read More »