ಆವ ರೋಗವು ಎನಗೆ
ಆವ ರೋಗವು ಎನಗೆ ದೇವ ಧನ್ವಂತ್ರಿ| ಸಾವಧಾನದಿ ಎನ್ನ ಕೈಪಿಡಿದು ನೋಡಯ್ಯ|| ಹರಿಮೂರ್ತಿಗಳು ಎನ್ನ ಕಂಗಳಿಗೆ ಕಾಣಿಸವು ಹರಿಯ ಕೀರ್ತನೆಯು ಕೇಳಿಸದು ಕಿವಿಗೆ| ಹರಿಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆ ಹರಿಪ್ರಸಾದವ ಜಿಹ್ವೆ ಸವಿಯದಯ್ಯ|| ಹರಿಪಾದ ಸೇವೆಗೆ ಹಸ್ತಗಳು ಚಲಿಸವು ಗುರುಹಿರಿಯರಂಘ್ರಿಗೆ ಶಿರ ಬಾಗದು| ಹರಿಯ ನಿರ್ಮಾಲ್ಯವಾಘ್ರಾಣಿಸದು ನಾಸಿಕವು ಹರಿಯಾತ್ರೆಗಳಿಗೆನ್ನ ಕಾಲೇಳದಯ್ಯ|| ಅನಾಥಬಂಧು ಗೋಪಾಲವಿಟ್ಠಲರೇಯ ಎನ್ನ ಭಾಗದ ವೈದ್ಯ ನೀನೆ ನೀನೇ| ಅನಾದಿಕಾಲದ ಭವರೋಗ ಕಳೆಯಯ್ಯ ನಾನೆಂದಿಗೂ ಮರೆಯೆ ನಿನ್ನ ಉಪಕಾರ|| ——-ಗೋಪಾಲದಾಸ