ಏನೆಂದು ನುಡಿವೆ ನಿನ್ನವರಂತೆ ಕೇಡು ಬುದ್ಧಿ ಎನ್ನೊಳಗಿಲ್ಲ – ಗುಣಹೀನರಲ್ಲದ ಈ ನರರ ಪಾಲಿಪ ಬುದ್ಧಿ ನಿನ್ನೊಳಗಿಲ್ಲ
ತರಳ ಪ್ರಹ್ಲಾದನಂದದಿ ನಿನ್ನ ರೂಪನು ಕೆಡಿಸಲಿಲ್ಲನರನಂತೆ ಬಂಡಿಬೋವನ ಮಾಡಿ ನಿನ್ನ ದುಡಿಸಲಿಲ್ಲಪರಾಶರನಂತೆ ನದಿಯೊಳಿದ್ದ ಹೆಣ್ಣ ಕೂಡಲಿಲ್ಲಗರುಡನಂದದಿ ನಿನ್ನ ಪೊತ್ತು ತಿರುಗಲಿಲ್ಲ ||1||
ಸನಕಾದಿ ಮುನಿಯಂತೆ ವನದೊಳು ಅನುದಿನ ಚರಿಸಲಿಲ್ಲಬಿನಗು ಬೇಡತಿಯಂತೆ ಸವಿದುಂಡ ಹಣ್ಣ ತಿನಿಸಲಿಲ್ಲಇನಕುಲ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲಘನ ಪಾತಕದಜಮಿಳನಂತೆ ನಾರಗ ಎನ್ನಲಿಲ್ಲ||2||
ಕದನದೊಳು ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲವಿದುರನ ತೆರನಂತೆ ಸದನವ ಮುರಿದು ನಿನ್ನ ಬೆರೆಯಲಿಲ್ಲಮದಗಜದಂತೆ ಮಕರಿಗೆ ಸಿಲ್ಕಿ ಒರಲಲಿಲ್ಲಗದರಿ ಶಿಶುಪಾಲನಂದದಿ ನಿನ್ನನುಪೇಕ್ಷಿಸಿ ಜರೆಯಲಿಲ್ಲ||3||
ಬುವಿಯೊಳು ಬಲಿಯಂತೆ ದಾನವ ನೀಡಲಿಲ್ಲಭವನಂತೆ ಶ್ಮಶಾನದಿ ಮನೆಮಾಡಿ ಸ್ಮರಿಸಲಿಲ್ಲತವ ಪುಂಡರೀಕನಂತೆ ಹಲಗೆಯಿಟ್ಟಿಗೆ ಮೇಲೆ ನಿಲಿಸಲಿಲ್ಲಭುವನದೊಡೆಯ ನೆಲೆಯಾದಿಕೇಶವನ ಮರೆಯಲಿಲ್ಲ||4||