ಕೊಳಲ ದನಿಗೆ ಸರ್ಪ ತಲೆದೂಗಿದಡೇನು,

ಕೊಳಲ ದನಿಗೆ ಸರ್ಪ ತಲೆದೂಗಿದಡೇನು,
ಒಳಗಣ ವಿಷದ ಬಯಕೆ ಬಿಡದನ್ನಕ್ಕ ?
ಹಾಡಿದಡೇನು, ಕೇಳಿದಡೇನು,
ತನ್ನಲುಳ್ಳ ಅವಗುಣ ಬಿಡದನ್ನಕ್ಕ ?
ಒಳಗನರಿದು ಹೊರಗೆ ಮರೆದವರ ನೀ ಎನಗೆ ತೋರಯ್ಯಾ ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *