ಚಂದನವ ಕಡಿದು ಕೊರೆದು ತೇದಡೆ

ಚಂದನವ ಕಡಿದು ಕೊರೆದು ತೇದಡೆ
ನೊಂದೆನೆಂದು ಕಂಪ ಬಿಟ್ಟಿತ್ತೆ ?
ತಂದು ಸುವರ್ಣವ ಕಡಿದೊರೆದಡೆ
ಬೆಂದು ಕಳಂಕ ಹಿಡಿಯಿತ್ತೆ ?
ಸಂದುಸಂದು ಕಡಿದ ಕಬ್ಬನು ತಂದು ಗಾಣದಲ್ಲಿಕ್ಕಿ ಅರೆದಡೆ,
ಬೆಂದು ಪಾಕಗುಡದೆ ಸಕ್ಕರೆಯಾಗಿ ನೊಂದೆನೆಂದು ಸಿಹಿಯ ಬಿಟ್ಟಿತ್ತೆ ?
ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮುಂದಿಳುಹಲು
ನಿಮಗೇ ಹಾನಿ.
ಎನ್ನ ತಂದೆ ಚೆನ್ನಮಲ್ಲಿಕಾರ್ಜುನಯ್ಯಾ,
ನೀ ಕೊಂದಡೆಯೂ ಶರಣೆಂಬುದ ಮಾಣೆ.

Leave a Comment

Your email address will not be published. Required fields are marked *