ಲೋಕವ ಹಿಡಿದು ಲೋಕದ ಸಂಗದಂತಿಪ್ಪೆ.
ಆಕಾರವಿಡಿದು ಸಾಕಾರಸಹಿತ ನಡೆವೆ.
ಹೊರಗೆ ಬಳಸಿ ಒಳಗೆ ಮರೆದಿಪ್ಪೆ.
ಬೆಂದನುಲಿಯಂತೆ ಹುರಿಗುಂದದಿಪ್ಪೆ.
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಾ,
ಹತ್ತರೊಳಗೆ ಹನ್ನೊಂದಾಗಿ ನೀರತಾವರೆಯಂತಿಪ್ಪೆ.
ಲೋಕವ ಹಿಡಿದು ಲೋಕದ ಸಂಗದಂತಿಪ್ಪೆ.
ಆಕಾರವಿಡಿದು ಸಾಕಾರಸಹಿತ ನಡೆವೆ.
ಹೊರಗೆ ಬಳಸಿ ಒಳಗೆ ಮರೆದಿಪ್ಪೆ.
ಬೆಂದನುಲಿಯಂತೆ ಹುರಿಗುಂದದಿಪ್ಪೆ.
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಾ,
ಹತ್ತರೊಳಗೆ ಹನ್ನೊಂದಾಗಿ ನೀರತಾವರೆಯಂತಿಪ್ಪೆ.